AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈರಸಿಯಲ್ಲೂ ದಾಖಲೆ ಬರೆದ ‘ಡೆವಿಲ್’; 10 ಸಾವಿರ ಲಿಂಕ್ ಡಿಲೀಟ್

'ಡೆವಿಲ್' ಕನ್ನಡ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ಭಾರಿ ಪೈರಸಿ ಕಾಟಕ್ಕೆ ಸಿಲುಕಿದೆ. ಚಿತ್ರತಂಡ ಇದುವರೆಗೆ 10,000ಕ್ಕೂ ಹೆಚ್ಚು ಪೈರಸಿ ಲಿಂಕ್‌ಗಳನ್ನು ಡಿಲೀಟ್ ಮಾಡಿಸಿದೆ. ಥಿಯೇಟರ್‌ನಲ್ಲಿ ಸಿನಿಮಾ ನೋಡುವಂತೆ ಮನವಿ ಮಾಡಿದೆ. ವಿಶ್ವದಲ್ಲೇ ಒಂದು ಚಿತ್ರಕ್ಕೆ ಇಷ್ಟು ದೊಡ್ಡ ಪ್ರಮಾಣದ ಪೈರಸಿ ನಡೆದಿರುವುದು ಇದೇ ಮೊದಲು ಎಂದು ತಂಡ ಹೇಳಿದೆ. ಈ ವೈರಸ್‌ನಿಂದ ಚಿತ್ರೋದ್ಯಮಕ್ಕೆ ಭಾರಿ ನಷ್ಟವಾಗುತ್ತಿದೆ.

ಪೈರಸಿಯಲ್ಲೂ ದಾಖಲೆ ಬರೆದ ‘ಡೆವಿಲ್’; 10 ಸಾವಿರ ಲಿಂಕ್ ಡಿಲೀಟ್
ಡೆವಿಲ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 22, 2025 | 12:12 PM

Share

‘ಡೆವಿಲ್’ ಸಿನಿಮಾವು ಡಿಸೆಂಬರ್ 11ರಂದು ರಿಲೀಸ್ ಆಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಅಂದುಕೊಂಡ ಮಟ್ಟಿಗೆ ಸಿನಿಮಾ ಗಳಿಕೆ ಮಾಡುತ್ತಿಲ್ಲ ಎನ್ನಲಾಗುತ್ತಿದೆ. ಹೀಗಿರುವಾಗಲೇ ಈ ಸಿನಿಮಾ ನಿರ್ಮಾಣ ಮಾಡಿದ ಸಂಸ್ಥೆ ಕಡೆಯಿಂದ ಒಂದು ಶಾಕಿಂಗ್ ವಿಷಯ ಬೆಳಕಿಗೆ ಬಂದಿದೆ. ಒಂದಲ್ಲ, ಎರಡಲ್ಲ, ಡೆವಿಲ್ ಸಿನಿಮಾದ 10 ಸಾವಿರ ಪೈರಸಿ ಲಿಂಕ್​ನ ಡಿಲೀಟ್ ಮಾಡಲಾಗಿದೆಯಂತೆ.

ಕನ್ನಡ ಸಿನಿಮಾಗಳು ಓಡುತ್ತಿಲ್ಲ ಎಂಬ ಮಾತು ಆಗಾಗ ಹೇಳುವುದನ್ನು ಕೇಳಿರಬಹುದು. ಈ ಮಧ್ಯೆ ಸಿನಿಮಾಗಳಿಗೆ ಪೈರಸಿ ಮಾರಕವಾಗುತ್ತಾ ಇದೆ. ಥಿಯೇಟರ್​ನಲ್ಲಿ ಜನರು ಸಿನಿಮಾ ನೋಡಲಿ ಎಂದು ಮಾಡಲಾಗುತ್ತದೆ. ಆದರೆ, ಕೆಲವರು ಪೈರಸಿ ಮಾಡುತ್ತಾರೆ. ಸಿನಿಮಾ ಥಿಯೇಟರ್​​ನಲ್ಲಿ ಇರುವಾಗಲೇ ಚಿತ್ರವನ್ನು ರೆಕಾರ್ಡ್ ಮಾಡಿ ಹರಿಬಿಡುತ್ತಾರೆ. ‘ಡೆವಿಲ್​’ಗೂ ಪೈರಸಿ ಕಾಟ ತಾಗಿದೆ.

‘ಡೆವಿಲ್’ ಸಿನಿಮಾ ರಿಲೀಸ್ ಆದ ಮರುದಿನವೇ ಎಚ್​​ಡಿ ಪ್ರಿಂಟ್ ಲೀಕ್ ಆಗಿದೆ. ಇದು ತಂಡಕ್ಕೆ ಚಿಂತೆ ಉಂಟು ಮಾಡಿದೆ. ಆ ಬಳಿಕ ನಿರಂತರವಾಗಿ ಪೈರಸಿ ಲಿಂಕ್​​ನ ತೆಗೆಸೋ ಕೆಲಸ ಆಗಿದೆ. ಡೆವಿಲ್ ಚಿತ್ರತಂಡದಿಂದ ಈ ಬಗ್ಗೆ ಅಧಿಕೃತ ಪೋಸ್ಟ್ ಹಾಕಲಾಗಿದೆ.

ಇದನ್ನೂ ಓದಿ: ಭಾನುವಾರ ಕೋಟಿಯಲ್ಲಿ ವ್ಯವಹಾರ ಮಾಡಿದ ‘ಡೆವಿಲ್’; ಒಟ್ಟಾರೆ ಕಲೆಕ್ಷನ್ ಎಷ್ಟು?

‘ಪೈರಸಿ ಅನ್ನೋದು ವೈರಸ್. ಇದು ಸಿನಿಮಾನ ಕೊಲ್ಲುತ್ತದೆ. ನಾವು ಇನ್ನೂ ಯುದ್ಧ ಮಾಡುತ್ತಲೇ ಇದ್ದೇವೆ. ಈವರೆಗೂ 10500ಕ್ಕೂ ಹೆಚ್ಚು ಪೈರಸಿ ಲಿಂಕ್ ಗಳನ್ನ ಡಿಲಿಟ್ ಮಾಡುವ ಕೆಲಸ ಆಗಿದೆ. ದಯವಿಟ್ಟು ಪೈರಸಿ ಮಾಡಬೇಡಿ. ಸಿನಿಮಾ ಥಿಯೇಟರ್ ನಲ್ಲಿ ನೋಡಿ’ ಎಂದು ತಂಡ ಮನವಿ ಮಾಡಿದೆ. ಸಿನಿಮಾ ಒಂದಕ್ಕೆ ಇಷ್ಟು ಪೈರಸಿ ಲಿಂಕ್ ಸೃಷ್ಟಿ ಆಗಿರೋದು ವಿಶ್ವ ಮಟ್ಟದಲ್ಲಿ ಇದೇ ಮೊದಲು ಎಂದು ತಂಡ ಹೇಳಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನ್ಯೂಝಿಲೆಂಡ್​ ತಂಡಕ್ಕೆ ಬರೋಬ್ಬರಿ 323 ರನ್​ಗಳ ಜಯ
ನ್ಯೂಝಿಲೆಂಡ್​ ತಂಡಕ್ಕೆ ಬರೋಬ್ಬರಿ 323 ರನ್​ಗಳ ಜಯ
ಪ್ರೊಪೋಸ್ ಮಾಡಲು ಉಂಗುರವಲ್ಲ, ಸಿಂಧೂರದೊಂದಿಗೆ ಬಂದ ಯುವಕ
ಪ್ರೊಪೋಸ್ ಮಾಡಲು ಉಂಗುರವಲ್ಲ, ಸಿಂಧೂರದೊಂದಿಗೆ ಬಂದ ಯುವಕ
ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್​ಪಿ ಹೇಳಿದ್ದೇನು ನೋಡಿ
ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್​ಪಿ ಹೇಳಿದ್ದೇನು ನೋಡಿ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ