AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈರಸಿಯಲ್ಲೂ ದಾಖಲೆ ಬರೆದ ‘ಡೆವಿಲ್’; 10 ಸಾವಿರ ಲಿಂಕ್ ಡಿಲೀಟ್

'ಡೆವಿಲ್' ಕನ್ನಡ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ಭಾರಿ ಪೈರಸಿ ಕಾಟಕ್ಕೆ ಸಿಲುಕಿದೆ. ಚಿತ್ರತಂಡ ಇದುವರೆಗೆ 10,000ಕ್ಕೂ ಹೆಚ್ಚು ಪೈರಸಿ ಲಿಂಕ್‌ಗಳನ್ನು ಡಿಲೀಟ್ ಮಾಡಿಸಿದೆ. ಥಿಯೇಟರ್‌ನಲ್ಲಿ ಸಿನಿಮಾ ನೋಡುವಂತೆ ಮನವಿ ಮಾಡಿದೆ. ವಿಶ್ವದಲ್ಲೇ ಒಂದು ಚಿತ್ರಕ್ಕೆ ಇಷ್ಟು ದೊಡ್ಡ ಪ್ರಮಾಣದ ಪೈರಸಿ ನಡೆದಿರುವುದು ಇದೇ ಮೊದಲು ಎಂದು ತಂಡ ಹೇಳಿದೆ. ಈ ವೈರಸ್‌ನಿಂದ ಚಿತ್ರೋದ್ಯಮಕ್ಕೆ ಭಾರಿ ನಷ್ಟವಾಗುತ್ತಿದೆ.

ಪೈರಸಿಯಲ್ಲೂ ದಾಖಲೆ ಬರೆದ ‘ಡೆವಿಲ್’; 10 ಸಾವಿರ ಲಿಂಕ್ ಡಿಲೀಟ್
ಡೆವಿಲ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 22, 2025 | 12:12 PM

Share

‘ಡೆವಿಲ್’ ಸಿನಿಮಾವು ಡಿಸೆಂಬರ್ 11ರಂದು ರಿಲೀಸ್ ಆಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಅಂದುಕೊಂಡ ಮಟ್ಟಿಗೆ ಸಿನಿಮಾ ಗಳಿಕೆ ಮಾಡುತ್ತಿಲ್ಲ ಎನ್ನಲಾಗುತ್ತಿದೆ. ಹೀಗಿರುವಾಗಲೇ ಈ ಸಿನಿಮಾ ನಿರ್ಮಾಣ ಮಾಡಿದ ಸಂಸ್ಥೆ ಕಡೆಯಿಂದ ಒಂದು ಶಾಕಿಂಗ್ ವಿಷಯ ಬೆಳಕಿಗೆ ಬಂದಿದೆ. ಒಂದಲ್ಲ, ಎರಡಲ್ಲ, ಡೆವಿಲ್ ಸಿನಿಮಾದ 10 ಸಾವಿರ ಪೈರಸಿ ಲಿಂಕ್​ನ ಡಿಲೀಟ್ ಮಾಡಲಾಗಿದೆಯಂತೆ.

ಕನ್ನಡ ಸಿನಿಮಾಗಳು ಓಡುತ್ತಿಲ್ಲ ಎಂಬ ಮಾತು ಆಗಾಗ ಹೇಳುವುದನ್ನು ಕೇಳಿರಬಹುದು. ಈ ಮಧ್ಯೆ ಸಿನಿಮಾಗಳಿಗೆ ಪೈರಸಿ ಮಾರಕವಾಗುತ್ತಾ ಇದೆ. ಥಿಯೇಟರ್​ನಲ್ಲಿ ಜನರು ಸಿನಿಮಾ ನೋಡಲಿ ಎಂದು ಮಾಡಲಾಗುತ್ತದೆ. ಆದರೆ, ಕೆಲವರು ಪೈರಸಿ ಮಾಡುತ್ತಾರೆ. ಸಿನಿಮಾ ಥಿಯೇಟರ್​​ನಲ್ಲಿ ಇರುವಾಗಲೇ ಚಿತ್ರವನ್ನು ರೆಕಾರ್ಡ್ ಮಾಡಿ ಹರಿಬಿಡುತ್ತಾರೆ. ‘ಡೆವಿಲ್​’ಗೂ ಪೈರಸಿ ಕಾಟ ತಾಗಿದೆ.

‘ಡೆವಿಲ್’ ಸಿನಿಮಾ ರಿಲೀಸ್ ಆದ ಮರುದಿನವೇ ಎಚ್​​ಡಿ ಪ್ರಿಂಟ್ ಲೀಕ್ ಆಗಿದೆ. ಇದು ತಂಡಕ್ಕೆ ಚಿಂತೆ ಉಂಟು ಮಾಡಿದೆ. ಆ ಬಳಿಕ ನಿರಂತರವಾಗಿ ಪೈರಸಿ ಲಿಂಕ್​​ನ ತೆಗೆಸೋ ಕೆಲಸ ಆಗಿದೆ. ಡೆವಿಲ್ ಚಿತ್ರತಂಡದಿಂದ ಈ ಬಗ್ಗೆ ಅಧಿಕೃತ ಪೋಸ್ಟ್ ಹಾಕಲಾಗಿದೆ.

ಇದನ್ನೂ ಓದಿ: ಭಾನುವಾರ ಕೋಟಿಯಲ್ಲಿ ವ್ಯವಹಾರ ಮಾಡಿದ ‘ಡೆವಿಲ್’; ಒಟ್ಟಾರೆ ಕಲೆಕ್ಷನ್ ಎಷ್ಟು?

‘ಪೈರಸಿ ಅನ್ನೋದು ವೈರಸ್. ಇದು ಸಿನಿಮಾನ ಕೊಲ್ಲುತ್ತದೆ. ನಾವು ಇನ್ನೂ ಯುದ್ಧ ಮಾಡುತ್ತಲೇ ಇದ್ದೇವೆ. ಈವರೆಗೂ 10500ಕ್ಕೂ ಹೆಚ್ಚು ಪೈರಸಿ ಲಿಂಕ್ ಗಳನ್ನ ಡಿಲಿಟ್ ಮಾಡುವ ಕೆಲಸ ಆಗಿದೆ. ದಯವಿಟ್ಟು ಪೈರಸಿ ಮಾಡಬೇಡಿ. ಸಿನಿಮಾ ಥಿಯೇಟರ್ ನಲ್ಲಿ ನೋಡಿ’ ಎಂದು ತಂಡ ಮನವಿ ಮಾಡಿದೆ. ಸಿನಿಮಾ ಒಂದಕ್ಕೆ ಇಷ್ಟು ಪೈರಸಿ ಲಿಂಕ್ ಸೃಷ್ಟಿ ಆಗಿರೋದು ವಿಶ್ವ ಮಟ್ಟದಲ್ಲಿ ಇದೇ ಮೊದಲು ಎಂದು ತಂಡ ಹೇಳಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ