AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈರಸಿಯಲ್ಲೂ ದಾಖಲೆ ಬರೆದ ‘ಡೆವಿಲ್’; 10 ಸಾವಿರ ಲಿಂಕ್ ಡಿಲೀಟ್

'ಡೆವಿಲ್' ಕನ್ನಡ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ಭಾರಿ ಪೈರಸಿ ಕಾಟಕ್ಕೆ ಸಿಲುಕಿದೆ. ಚಿತ್ರತಂಡ ಇದುವರೆಗೆ 10,000ಕ್ಕೂ ಹೆಚ್ಚು ಪೈರಸಿ ಲಿಂಕ್‌ಗಳನ್ನು ಡಿಲೀಟ್ ಮಾಡಿಸಿದೆ. ಥಿಯೇಟರ್‌ನಲ್ಲಿ ಸಿನಿಮಾ ನೋಡುವಂತೆ ಮನವಿ ಮಾಡಿದೆ. ವಿಶ್ವದಲ್ಲೇ ಒಂದು ಚಿತ್ರಕ್ಕೆ ಇಷ್ಟು ದೊಡ್ಡ ಪ್ರಮಾಣದ ಪೈರಸಿ ನಡೆದಿರುವುದು ಇದೇ ಮೊದಲು ಎಂದು ತಂಡ ಹೇಳಿದೆ. ಈ ವೈರಸ್‌ನಿಂದ ಚಿತ್ರೋದ್ಯಮಕ್ಕೆ ಭಾರಿ ನಷ್ಟವಾಗುತ್ತಿದೆ.

ಪೈರಸಿಯಲ್ಲೂ ದಾಖಲೆ ಬರೆದ ‘ಡೆವಿಲ್’; 10 ಸಾವಿರ ಲಿಂಕ್ ಡಿಲೀಟ್
ಡೆವಿಲ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 22, 2025 | 12:12 PM

Share

‘ಡೆವಿಲ್’ ಸಿನಿಮಾವು ಡಿಸೆಂಬರ್ 11ರಂದು ರಿಲೀಸ್ ಆಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಅಂದುಕೊಂಡ ಮಟ್ಟಿಗೆ ಸಿನಿಮಾ ಗಳಿಕೆ ಮಾಡುತ್ತಿಲ್ಲ ಎನ್ನಲಾಗುತ್ತಿದೆ. ಹೀಗಿರುವಾಗಲೇ ಈ ಸಿನಿಮಾ ನಿರ್ಮಾಣ ಮಾಡಿದ ಸಂಸ್ಥೆ ಕಡೆಯಿಂದ ಒಂದು ಶಾಕಿಂಗ್ ವಿಷಯ ಬೆಳಕಿಗೆ ಬಂದಿದೆ. ಒಂದಲ್ಲ, ಎರಡಲ್ಲ, ಡೆವಿಲ್ ಸಿನಿಮಾದ 10 ಸಾವಿರ ಪೈರಸಿ ಲಿಂಕ್​ನ ಡಿಲೀಟ್ ಮಾಡಲಾಗಿದೆಯಂತೆ.

ಕನ್ನಡ ಸಿನಿಮಾಗಳು ಓಡುತ್ತಿಲ್ಲ ಎಂಬ ಮಾತು ಆಗಾಗ ಹೇಳುವುದನ್ನು ಕೇಳಿರಬಹುದು. ಈ ಮಧ್ಯೆ ಸಿನಿಮಾಗಳಿಗೆ ಪೈರಸಿ ಮಾರಕವಾಗುತ್ತಾ ಇದೆ. ಥಿಯೇಟರ್​ನಲ್ಲಿ ಜನರು ಸಿನಿಮಾ ನೋಡಲಿ ಎಂದು ಮಾಡಲಾಗುತ್ತದೆ. ಆದರೆ, ಕೆಲವರು ಪೈರಸಿ ಮಾಡುತ್ತಾರೆ. ಸಿನಿಮಾ ಥಿಯೇಟರ್​​ನಲ್ಲಿ ಇರುವಾಗಲೇ ಚಿತ್ರವನ್ನು ರೆಕಾರ್ಡ್ ಮಾಡಿ ಹರಿಬಿಡುತ್ತಾರೆ. ‘ಡೆವಿಲ್​’ಗೂ ಪೈರಸಿ ಕಾಟ ತಾಗಿದೆ.

‘ಡೆವಿಲ್’ ಸಿನಿಮಾ ರಿಲೀಸ್ ಆದ ಮರುದಿನವೇ ಎಚ್​​ಡಿ ಪ್ರಿಂಟ್ ಲೀಕ್ ಆಗಿದೆ. ಇದು ತಂಡಕ್ಕೆ ಚಿಂತೆ ಉಂಟು ಮಾಡಿದೆ. ಆ ಬಳಿಕ ನಿರಂತರವಾಗಿ ಪೈರಸಿ ಲಿಂಕ್​​ನ ತೆಗೆಸೋ ಕೆಲಸ ಆಗಿದೆ. ಡೆವಿಲ್ ಚಿತ್ರತಂಡದಿಂದ ಈ ಬಗ್ಗೆ ಅಧಿಕೃತ ಪೋಸ್ಟ್ ಹಾಕಲಾಗಿದೆ.

ಇದನ್ನೂ ಓದಿ: ಭಾನುವಾರ ಕೋಟಿಯಲ್ಲಿ ವ್ಯವಹಾರ ಮಾಡಿದ ‘ಡೆವಿಲ್’; ಒಟ್ಟಾರೆ ಕಲೆಕ್ಷನ್ ಎಷ್ಟು?

‘ಪೈರಸಿ ಅನ್ನೋದು ವೈರಸ್. ಇದು ಸಿನಿಮಾನ ಕೊಲ್ಲುತ್ತದೆ. ನಾವು ಇನ್ನೂ ಯುದ್ಧ ಮಾಡುತ್ತಲೇ ಇದ್ದೇವೆ. ಈವರೆಗೂ 10500ಕ್ಕೂ ಹೆಚ್ಚು ಪೈರಸಿ ಲಿಂಕ್ ಗಳನ್ನ ಡಿಲಿಟ್ ಮಾಡುವ ಕೆಲಸ ಆಗಿದೆ. ದಯವಿಟ್ಟು ಪೈರಸಿ ಮಾಡಬೇಡಿ. ಸಿನಿಮಾ ಥಿಯೇಟರ್ ನಲ್ಲಿ ನೋಡಿ’ ಎಂದು ತಂಡ ಮನವಿ ಮಾಡಿದೆ. ಸಿನಿಮಾ ಒಂದಕ್ಕೆ ಇಷ್ಟು ಪೈರಸಿ ಲಿಂಕ್ ಸೃಷ್ಟಿ ಆಗಿರೋದು ವಿಶ್ವ ಮಟ್ಟದಲ್ಲಿ ಇದೇ ಮೊದಲು ಎಂದು ತಂಡ ಹೇಳಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು