AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಹುಟ್ಟುಹಬ್ಬಕ್ಕೆ ‘ಡೆವಿಲ್’ ಟೀಸರ್ ಬಿಡುಗಡೆ, ಹೆಸರು ಬದಲಿಸಿದ್ದೇಕೆ?

Darshan Birthday: ದರ್ಶನ್ ಹುಟ್ಟುಹಬ್ಬ ಫೆಬ್ರವರಿ 16 ರಂದು ಇದೆ. ಈ ದಿನ ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಟೀಸರ್ ಬಿಡುಗಡೆ ಆಗಲಿದೆ. ದರ್ಶನ್ ಜೈಲಿಗೆ ಹೋದ ಬಳಿಕ ಈ ಸಿನಿಮಾದ ಚಿತ್ರೀಕರಣ ನಿಂತು ಹೋಗಿತ್ತು. ಡೆವಿಲ್ ಸಿನಿಮಾದ ಟೀಸರ್ ದರ್ಶನ್ ಹುಟ್ಟುಹಬ್ಬಕ್ಕೆ ಬಿಡುಗಡೆ ಆಗುವ ಜೊತೆಗೆ ಸಿನಿಮಾದ ಹೆಸರಲ್ಲೂ ಸಣ್ಣ ಬದಲಾವಣೆ ಮಾಡಲಾಗಿದೆ.

ದರ್ಶನ್ ಹುಟ್ಟುಹಬ್ಬಕ್ಕೆ ‘ಡೆವಿಲ್’ ಟೀಸರ್ ಬಿಡುಗಡೆ, ಹೆಸರು ಬದಲಿಸಿದ್ದೇಕೆ?
Devil Moie
ಮಂಜುನಾಥ ಸಿ.
|

Updated on: Feb 15, 2025 | 10:58 AM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿರುವ ದರ್ಶನ್, ಇನ್ನೂ ಸಂಪೂರ್ಣವಾಗಿ ಸಾಮಾನ್ಯ ಜೀವನಕ್ಕೆ ಮರಳಲಾಗಿಲ್ಲ. ಆಗೊಮ್ಮೆ ಈಗೊಮ್ಮೆ ಕೆಲ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದಾರಾದರೂ ಬಹಿರಂಗ ಕಾರ್ಯಕ್ರಮದಲ್ಲಿ ಅವರು ತೊಡಗಿಕೊಂಡಿಲ್ಲ. ಇದೀಗ ದರ್ಶನ್​ರ ಹುಟ್ಟುಹಬ್ಬ ಬಂದಿದೆ. ಫೆಬ್ರವರಿ 16 ರಂದು ದರ್ಶನ್ ಹುಟ್ಟುಹಬ್ಬವಿದೆ. ದರ್ಶನ್ ಹುಟ್ಟುಹಬ್ಬದಂದು ಅಭಿಮಾನಿಗಳು ಸಂಭ್ರಮಾಚರಣೆ ಮಾಡುವುದು ಸಾಮಾನ್ಯ, ದರ್ಶನ್ ಸಹ ಅಭಿಮಾನಿಗಳನ್ನು ಭೇಟಿ ಮಾಡಿ ಖುಷಿ ಪಡುವುದು ನಡೆದುಕೊಂಡು ಬಂದಿದೆ. ಆದರೆ ಈ ಹುಟ್ಟುಹಬ್ಬ ಭಿನ್ನವಾಗಿರಲಿದೆ.

ದರ್ಶನ್​ರ ಹುಟ್ಟುಹಬ್ಬದಂದು ‘ಡೆವಿಲ್’ ಸಿನಿಮಾದ ಟೀಸರ್ ಬಿಡುಗಡೆ ಆಗಲಿದೆ. ದರ್ಶನ್ ಜೈಲಿಗೆ ಹೋಗುವ ಸಮಯದಲ್ಲಿ ‘ಡೆವಿಲ್’ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿತ್ತು. ‘ಡೆವಿಲ್’ ಚಿತ್ರೀಕರಣದ ಸಮಯದಲ್ಲಿಯೇ ದರ್ಶನ್ ಅನ್ನು ಬಂಧಿಸಲಾಗಿತ್ತು. ಇದೀಗ ಕಳೆದ ಏಳೆಂಟು ತಿಂಗಳಿನಿಂದಲೂ ‘ಡೆವಿಲ್’ ಸಿನಿಮಾದ ಚಿತ್ರೀಕರಣ ಬಂದ್ ಆಗಿದ್ದು, ಇದೀಗ ದರ್ಶನ್ ಹುಟ್ಟುಹಬ್ಬವಾದ ಫೆಬ್ರವರಿ 16 ರಂದು ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗುತ್ತಿದೆ.

‘ಡೆವಿಲ್’ ಸಿನಿಮಾದ ಹೆಸರನ್ನು ಸಹ ತುಸು ಬದಲಾವಣೆ ಮಾಡಲಾಗಿದೆ. ‘ಈ ಮೊದಲು ‘ಡೆವಿಲ್’ ಸಿನಿಮಾಕ್ಕೆ ‘ದಿ ಹೀರೋ’ ಎಂಬ ಅಡಿ ಬರಹ ಇತ್ತು. ಆದರೆ ಈಗ ‘ದಿ ಡೆವಿಲ್’ ಎಂದಷ್ಟೆ ಇದೆ. ‘ದಿ ಹೀರೋ’ ಅಡಿಬರಹವನ್ನು ತೆಗೆದು ಹಾಕಲಾಗಿದೆ. ಈ ನಿರ್ಣಯ ಏಕೆ ಮಾಡಬೇಕಾಯ್ತು ಎಂಬ ಮಾಹಿತಿ ಇಲ್ಲ. ರೇಣುಕಾ ಸ್ವಾಮಿ ಪ್ರಕರಣದ ಬಳಿಕ ಈ ಬದಲಾವಣೆ ಆಗಿರುವ ಸಾಧ್ಯತೆ ಇದೆ.

ಇದನ್ನೂ ಓದಿ:‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು

‘ಡೆವಿಲ್’ ಸಿನಿಮಾ ಅನ್ನು ಪ್ರಕಾಶ್ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ 2017 ರಲ್ಲಿ ದರ್ಶನ್ ನಟನೆಯ ‘ತಾರಕ್’ ಸಿನಿಮಾ ಅನ್ನು ಪ್ರಕಾಶ್ ನಿರ್ದೇಶಿಸಿದ್ದರು. ಅದಾದ ಬಳಿಕ ಅವರು ಯಾವುದೇ ಸಿನಿಮಾ ನಿರ್ದೇಶನ ಮಾಡಿರಲಿಲ್ಲ, ಇದೀಗ ‘ಡೆವಿಲ್’ ಸಿನಿಮಾ ಮೂಲಕ ಮತ್ತೆ ನಿರ್ದೇಶನಕಕ್ಕೆ ಇಳಿದಿದ್ದರು. ಸಿನಿಮಾ ಶುರುವಾದ ಬೆನ್ನಲ್ಲೆ ದರ್ಶನ್ ಬಂದನವಾಗಿ ಸಿನಿಮಾ ನಿಂತು ಹೋಯಿತು. ಸಿನಿಮಾದಲ್ಲಿ ರಚನಾ ರೈ ನಾಯಕಿ. ಬಿಗ್​ಬಾಸ್​ಗೆ ಬಂದಿದ್ದ ವಿನಯ್ ಗೌಡ ಸಹ ಮುಖ್ಯ ಪಾತ್ರದಲ್ಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್