AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhananjay: ಧನಂಜಯ್- ಅದಿತಿ ಅಭಿನಯದ ‘ಒನ್ಸ್ ಅಪಾನ್ ಅ ಟೈಮ್ ಇನ್ ಜಮಾಲಿಗುಡ್ಡ’ ರಿಲೀಸ್ ಡೇಟ್ ಅನೌನ್ಸ್

Once Upon a time in Jamaligudda release date | Aditi Prabhudeva: ಡಾಲಿ ಧನಂಜಯ್ ನಟನೆಯ ಚಿತ್ರಗಳು ಸಾಲುಸಾಲಾಗಿ ತೆರೆಗೆ ಬರುತ್ತಿವೆ. ವಿಭಿನ್ನ ಟೈಟಲ್ ಮೂಲಕ ಗಮನ ಸೆಳೆದಿರುವ ‘ಒನ್ಸ್ ಅಪಾನ್ ಅ ಟೈಮ್ ಇನ್ ಜಮಾಲಿಗುಡ್ಡ’ದ ರಿಲೀಸ್ ದಿನಾಂಕವನ್ನು ಘೋಷಿಸಲಾಗಿದೆ.

Dhananjay: ಧನಂಜಯ್- ಅದಿತಿ ಅಭಿನಯದ 'ಒನ್ಸ್ ಅಪಾನ್ ಅ ಟೈಮ್ ಇನ್ ಜಮಾಲಿಗುಡ್ಡ' ರಿಲೀಸ್ ಡೇಟ್ ಅನೌನ್ಸ್
‘ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ’ ಚಿತ್ರದಲ್ಲಿ ಧನಂಜಯ್, ಅದಿತಿ ಪ್ರಭುದೇವ
TV9 Web
| Edited By: |

Updated on:May 28, 2022 | 12:33 PM

Share

ಸ್ಯಾಂಡಲ್​ವುಡ್ ನಟ ಧನಂಜಯ್ (Dhananjay) ಸಾಲುಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ಧಾರೆ. ಹಲವು ಚಿತ್ರಗಳ ಕೆಲಸಗಳು ಈಗಾಗಲೇ ಮುಗಿದಿದ್ದು, ರಿಲೀಸ್​ ಸಿದ್ಧತೆಯಲ್ಲಿವೆ. ಇದೀಗ ಡಾಲಿ ನಟನೆಯ ಹೊಸ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಕುಶಾಲ್ ಗೌಡ ನಿರ್ದೇಶನದ, ಟೈಟಲ್​ನಿಂದಲೇ ಗಮನ ಸೆಳೆದಿದ್ದ ‘ಒನ್ಸ್ ಅಪಾನ್ ಅ ಟೈಮ್ ಇನ್ ಜಮಾಲಿಗುಡ್ಡ’ (Once Upon a time in Jamaligudda) ಚಿತ್ರ ಇದೀಗ ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ರಾಜ್ಯದಲ್ಲಿ ಸೆಪ್ಟೆಂಬರ್ 9ರಂದು ಸಿನಿಮಾ ಚಿತ್ರಮಂದಿರಗಳಲ್ಲಿ ತೆರೆಗೆ ಬರಲಿದೆ. ‘ಕೆಆರ್​ಜಿ ಕನೆಕ್ಟ್ಸ್’ ವಿತರಣೆಯ ಜವಾಬ್ದಾರಿ ಹೊತ್ತಿದೆ. ಧನಂಜಯ್​ಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಿದ್ದು, ಇದೀಗ ಹೊಸ ಪೋಸ್ಟರ್ ಗಮನ ಸೆಳೆದಿದೆ. ತುಸು ವಿಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಂಡಿರುವ ಧನಂಜಯ್, ಸೈಕಲ್ ಹಿಡಿದು ನಿಂತಿದ್ದಾರೆ. ಡಿಗ್ಲಾಮ್ ಲುಕ್​ನಲ್ಲಿ ಕಾಣಿಸಿಕೊಂಡಿರುವ ಅದಿತಿ, ಧನಂಜಯ್​ಗೆ ಸಾಥ್ ನೀಡಿದ್ಧಾರೆ.

ಧನಂಜಯ್ ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

ಇದನ್ನೂ ಓದಿ
Image
ದುನಿಯಾ ವಿಜಯ್​ ಎದುರು ಕಾದಾಡಲು ‘ಬೇಟೆ ಶುರು..’ ಎಂದು ಮಾಸ್​ ಅವತಾರ ತಾಳಿದ ನಂದಮೂರಿ ಬಾಲಕೃಷ್ಣ
Image
Dhaakad BO collection: 8ನೇ ದಿನ ಸೇಲ್ ಆಗಿದ್ದು ಕೇವಲ 20 ಟಿಕೆಟ್​, ಗಳಿಸಿದ್ದು 4,420 ರೂ; ಇದು ಕಂಗನಾ ಚಿತ್ರದ ದುಸ್ಥಿತಿ
Image
ಫಿಲ್ಮ್​ ಚೇಂಬರ್​ ಚುನಾವಣೆಯಲ್ಲಿ ಗೆಲುವಿಗಾಗಿ ದೇವರ ಮೊರೆ ಹೋದ ಭಾ.ಮ. ಹರೀಶ್​; ಇಲ್ಲಿದೆ ವಿಡಿಯೋ
Image
‘RRR ಚಿತ್ರದಲ್ಲಿ ಇರೋದು ಸಲಿಂಗಕಾಮದ ಕಥೆ’: ಈ ರೀತಿ ಆರೋಪ ಮಾಡಿದ್ದು ಯಾರು?

ಕನ್ನಡದಲ್ಲಿ ಸದ್ಯ ರೆಟ್ರೊ ಟ್ರೆಂಡ್ ಜೋರಾಗಿದೆ. ‘ಒನ್ಸ್ ಅಪಾನ್ ಅ ಟೈಮ್ ಇನ್ ಜಮಾಲಿಗುಡ್ಡ’ ಕೂಡ ಅಂಥದ್ದೇ ಮಾದರಿಯ ಚಿತ್ರ. 90ರ ದಶಕದಲ್ಲಿ ನಡೆಯುವ ಪ್ರೇಮಕತೆ ಇದಾಗಿದ್ದು, ಟ್ರಾವೆಲಿಂಗ್ ಎಳೆಯೂ ಇದೆ. ಧನಂಜಯ್ ಬಾರ್ ಸಪ್ಲೈಯರ್ ಪಾತ್ರದಲ್ಲಿ ನಟಿಸಿದ್ದು, ಅದಿತಿ ಮಸಾಜ್ ಪಾರ್ಲರ್​ನಲ್ಲಿ ಕೆಲಸ ಮಾಡುವ ಹುಡುಗಿಯ ಪಾತ್ರ ನಿರ್ವಹಿಸಿದ್ದಾರೆ. ಈರ್ವರ ನಡುವಿನ ಪ್ರೀತಿಯ ಕತೆಯನ್ನು ಚಿತ್ರ ಒಳಗೊಂಡಿದೆ.

ಇದನ್ನೂ ಓದಿ:  20 ರೂ ಪೆಟ್ರೋಲ್ ಹಾಕಿಸ್ತೀವಿ ಕೊಡು ಎಂದು ಫ್ರೆಂಡ್ ಗಾಡಿ ತೆಗೆದುಕೊಂಡು ಹೋಗುತ್ತಿದ್ದೆವು; ಆ ದಿನಗಳನ್ನು ಸ್ಮರಿಸಿದ ಧನಂಜಯ್

ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರಕ್ಕೆ ಕಾರ್ತಿಕ್ ಛಾಯಾಗ್ರಹಣ ಮಾಡಿದ್ದು, ಹರೀಶ್ ಕೊಮ್ಮೆ ಸಂಕಲನ ಮಾಡಿದ್ದಾರೆ. ಪ್ರಕಾಶ್‌ ಬೆಳವಾಡಿ, ನಂದಗೋಪಾಲ್‌, ಯಶ್‌ ಶೆಟ್ಟಿ, ಭಾವನಾ ರಾಮಣ್ಣ, ತ್ರಿವೇಣಿ ರಾವ್‌ ಸೇರಿದಂತೆ ಹಲವು ಖ್ಯಾತ ಕಲಾವಿದರು ಈ ಚಿತ್ರದಲ್ಲಿ ಬಣ್ಣಹಚ್ಚಿದ್ದಾರೆ. ಹರಿ ರೆಡ್ಡಿ ಚಿತ್ರವನ್ನು ನಿರ್ಮಿಸಿದ್ದಾರೆ. ​

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:00 am, Sat, 28 May 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ