Vijay Prakash: ‘ಉಡುಪಿ ಹೋಟೆಲು, ಮೂಲೆ ಟೇಬಲು’ ಎನ್ನುತ್ತಾ ಧನಂಜಯ್ ಬರೆದ ಹಾಡಿಗೆ ದನಿಯಾಗಿದ್ದಾರೆ ವಿಜಯ್ ಪ್ರಕಾಶ್

Vasuki Vaibhav: ಗಾಯಕ ವಿಜಯ್ ಪ್ರಕಾಶ್ ಧ್ವನಿಯಲ್ಲಿ ಧನಂಜಯ್ ಸಾಹಿತ್ಯ ಬರೆದಿರುವ ‘ಉಡುಪಿ ಹೋಟೆಲು’ ಗೀತೆ ಬಿಡುಗಡೆಯಾಗಿದೆ. ಬಡವ ರಾಸ್ಕಲ್ ಚಿತ್ರದ ಈ ಗೀತೆಗೆ ವಾಸುಕಿ ವೈಭವ್ ಸಂಗೀತ ಸಂಯೋಜಿಸಿದ್ದು, ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದಾರೆ.

Vijay Prakash: ‘ಉಡುಪಿ ಹೋಟೆಲು, ಮೂಲೆ ಟೇಬಲು’ ಎನ್ನುತ್ತಾ ಧನಂಜಯ್ ಬರೆದ ಹಾಡಿಗೆ ದನಿಯಾಗಿದ್ದಾರೆ ವಿಜಯ್ ಪ್ರಕಾಶ್
ಧನಂಜಯ್ ಹಅಗೂ ಅಮೃತಾ
Follow us
| Updated By: shivaprasad.hs

Updated on: Aug 11, 2021 | 2:14 PM

ಚಂದನವನದ ಭರವಸೆಯ ನಟ, ತಮ್ಮ ಅಭಿನಯದಿಂದ ಈಗ ಪರಭಾಷೆಗಳಿಗೂ ಪರಿಚಯವಾಗುತ್ತಿರುವ ಡಾಲಿ ಧನಂಜಯ್ ಅವರ ಬಹು ನಿರೀಕ್ಷಿತ ‘ಬಡವ ರಾಸ್ಕಲ್’ ಚಿತ್ರದ ‘ಉಡುಪಿ ಹೋಟೆಲು’ ಹಾಡು ಬಿಡುಗಡೆಯಾಗಿದೆ. ಖ್ಯಾತ ಗಾಯಕ ವಿಜಯ್ ಪ್ರಕಾಶ್, ಧನಂಜಯ್ ಬರೆದ ಸಾಹಿತ್ಯಕ್ಕೆ ದನಿಯಾಗಿದ್ದು, ವಾಸುಕಿ ವೈಭವ್ ಸಂಗೀತ ಸಂಯೋಜಿಸಿದ್ದಾರೆ. ಹಾಡು ತನ್ನ ಲವಲವಿಕೆಯ ಸಾಹಿತ್ಯದಿಂದ ಗಮನ ಸೆಳೆಯುತ್ತಿದೆ. ಪ್ರೇಯಸಿಗೆ ಪ್ರಿಯತಮನೊಬ್ಬ ಸಲ್ಲಿಸುವ ಕೋರಿಕೆಗಳ ರೂಪದಲ್ಲಿ ಹಾಡನ್ನು ರಚಿಸಲಾಗಿದ್ದು, ನಟ ಧನಂಜಯ್ ಹಾಗೂ ನಾಯಕಿ ಅಮೃತಾ ಅಯ್ಯಂಗಾರ್ ಅವರ ನಟನೆ ಮುದ ನೀಡುವಂತಿದೆ.

‘ಬಡವ ರಾಸ್ಕಲ್’ ಚಿತ್ರವನ್ನು ಶಂಕರ್ ಗುರು ನಿರ್ದೇಶನ ಮಾಡಿದ್ದು, ‘ಡಾಲಿ ಪಿಕ್ಚರ್ಸ್’ ಬ್ಯಾನರ್​ನಲ್ಲಿ ಚಿತ್ರ ತಯಾರಾಗುತ್ತಿದೆ. ಇತ್ತೀಚೆಗೆ ಘೋಷಣೆಯಾದ ಪವನ್ ಕುಮಾರ್ ನಿರ್ದೇಶನ ಹಾಗೂ ಪುನೀತ್ ರಾಜ್​ಕುಮಾರ್ ಅಭಿನಯದ ‘ದ್ವಿತ್ವ’ ಚಿತ್ರಕ್ಕೆ ಛಾಯಾಗ್ರಹಣ ಮಾಡಲಿರುವ ಪ್ರೀತಾ ಜಯರಾಮನ್ ಬಡವ ರಾಸ್ಕಲ್ ಚಿತ್ರಕ್ಕೆ ಕ್ಯಾಮೆರಾದ ಜವಾಬ್ದಾರಿ ಹೊತ್ತಿದ್ದಾರೆ. ಚಿತ್ರದಲ್ಲಿ ಧನಂಜಯ್, ಅಮೃತಾ ಅವರೊಂದಿಗೆ ನಾಗಭೂಷಣ್, ರಂಗಾಯಣ ರಘು, ಪೂರ್ಣಚಂದ್ರ ಮೈಸೂರು ಮೊದಲಾದವರು ಅಭಿನಯಿಸುತ್ತಿದ್ದಾರೆ.

ಉಡುಪಿ ಹೋಟೆಲ್ ಹಾಡು ಇಲ್ಲಿದೆ:

ಚಂದನವನದ ಭರವಸೆಯ ನಟ ಡಾಲಿ ಧನಂಜಯ್ ಕೈಯಲ್ಲಿ ಹಲವಾರು ಚಿತ್ರಗಳಿವೆ. ‘ಪುಷ್ಪಾ’ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಮಾದರಿಯ ಸಿನಿಮಾಕ್ಕೂ ಅವರು ಕಾಲಿಡಲಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆಯಾದ ‘ಡಾಲಿ ಪಿಕ್ಚರ್ಸ್’ ಸಂಸ್ಥೆಯ ಮೂಲಕ ಚಿತ್ರ ನಿರ್ಮಾಣಕ್ಕೂ ಅವರು ಧುಮುಕಿದ್ದಾರೆ. ಬಡವ ರಾಸ್ಕಲ್ ಚಿತ್ರದ ಜೊತೆಗೆ ‘ಹೆಡ್ ಬುಷ್’ ಚಿತ್ರಕ್ಕೆ ಧನಂಜಯ್ ಸಹ ನಿರ್ಮಾಪಕರಾಗಿದ್ದಾರೆ. ನಟ ಧನಂಜಯ್ ಈಗ ಸಾಲು ಸಾಲು ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ- 1’ರ ಜೊತೆಗೆ, ‘ಸಲಗ’, ‘ಬೈರಾಗಿ’, ‘ತೋತಾಪುರಿ’, ‘ಆರ್ಕೆಸ್ಟ್ರಾ’, ‘ರತ್ನನ್ ಪ್ರಪಂಚ ’ ಮೊದಲಾದ ಚಿತ್ರಗಳಲ್ಲಿ ಬಣ್ಣ ಹಚ್ಚುತ್ತಿದ್ದಾರೆ.

ಇದನ್ನೂ ಓದಿ: 

ಕೇವಲ 11ರೂ ಪಡೆದು ‘ಭಾಗ್ ಮಿಲ್ಖಾ ಭಾಗ್’​ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು ಈ ನಟಿ; ಕಾರಣವೇನು?

‘ಸೂಪರ್’ ಚಿತ್ರದ ನಟಿ ನಯನತಾರಾ ಎಂಗೇಜ್​​ಮೆಂಟ್​; ಇಲ್ಲಿದೆ ರಿಂಗ್​ ಜೊತೆ ವಿಡಿಯೋ ಸಾಕ್ಷಿ

(Dhananjay and Amritha starring Udupi Hotel song from the kannada Movie Badava Rascal released)

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್