Filmfare Awards: ಧನಂಜಯ್​, ಯಜ್ಞಾ ಶೆಟ್ಟಿಗೆ ಅತ್ಯುತ್ತಮ ನಟ-ನಟಿ ಫಿಲ್ಮ್​ಫೇರ್​ ಗರಿ; ಪುನೀತ್​ಗೆ ಜೀವಮಾನ ಸಾಧನೆ ಪ್ರಶಸ್ತಿ

67th Filmfare Awards: ಝಗಮಗಿಸುವ ವೇದಿಕೆಯಲ್ಲಿ ಫಿಲ್ಮ್​ಫೇರ್ ಸಮಾರಂಭ ಜರುಗಿದೆ. ಧನಂಜಯ್​, ಯಜ್ಞಾ ಶೆಟ್ಟಿ, ರಾಜ್​ ಬಿ. ಶೆಟ್ಟಿ ಮುಂತಾದವರು ಪ್ರಶಸ್ತಿ ಪಡೆದಿದ್ದಾರೆ.

Filmfare Awards: ಧನಂಜಯ್​, ಯಜ್ಞಾ ಶೆಟ್ಟಿಗೆ ಅತ್ಯುತ್ತಮ ನಟ-ನಟಿ ಫಿಲ್ಮ್​ಫೇರ್​ ಗರಿ; ಪುನೀತ್​ಗೆ ಜೀವಮಾನ ಸಾಧನೆ ಪ್ರಶಸ್ತಿ
ಧನಂಜಯ್​, ಯಜ್ಞಾ ಶೆಟ್ಟಿ, ಪುನೀತ್​ ರಾಜ್​ಕುಮಾರ್​
Follow us
| Updated By: ಮದನ್​ ಕುಮಾರ್​

Updated on: Oct 10, 2022 | 7:40 AM

ಬೆಂಗಳೂರಿನಲ್ಲಿ ಭಾನುವಾರ (ಅ.9) ರಾತ್ರಿ ಅದ್ದೂರಿಯಾಗಿ ಫಿಲ್ಮ್​ಫೇರ್​ ಪ್ರಶಸ್ತಿ (Filmfare Awards) ಪ್ರದಾನ ಸಮಾರಂಭ ಮಾಡಲಾಗಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಯ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ. ಫಿಲ್ಮ್​ಫೇರ್​ ಪ್ರಶಸ್ತಿ ಪಡೆದ ನಟ-ನಟಿಯರು, ತಂತ್ರಜ್ಞರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಕನ್ನಡದಲ್ಲಿ ನಟ ಧನಂಜಯ್​ (Dhananjay) ಅವರಿಗೆ ‘ಬಡವ ರಾಸ್ಕಲ್​’ ಚಿತ್ರದಲ್ಲಿನ ಅಭಿನಯಕ್ಕಾಗಿ ‘ಅತ್ಯುತ್ತಮ ನಟ’ ಪ್ರಶಸ್ತಿ ನೀಡಲಾಗಿದೆ. ಯಜ್ಞಾ ಶೆಟ್ಟಿ (Yagna Shetty) ಅವರು ‘ಆಕ್ಟ್​ 1978’ ಸಿನಿಮಾದಲ್ಲಿನ ನಟನೆಗಾಗಿ ‘ಅತ್ಯುತ್ತಮ ನಟಿ’ ಪ್ರಶಸ್ತಿ ಪಡೆದಿದ್ದಾರೆ. ರಾಜ್​ ಬಿ. ಶೆಟ್ಟಿ ಅವರಿಗೆ ‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕಾಗಿ ‘ಅತ್ಯುತ್ತಮ ನಿರ್ದೇಶನ’ ಪ್ರಶಸ್ತಿ ನೀಡಲಾಗಿದೆ.

ಕನ್ನಡದಲ್ಲಿ ಫಿಲ್ಮ್​ಫೇರ್ ಪ್ರಶಸ್ತಿ ಪಡೆದವರ ಪಟ್ಟಿ:

ಇದನ್ನೂ ಓದಿ
Image
‘ದಿ ಕಾಶ್ಮೀರ್​ ಫೈಲ್ಸ್​ ಚಿತ್ರ ಆಸ್ಕರ್​ಗೆ ಹೋದ್ರೆ ಭಾರತಕ್ಕೆ ಮುಜುಗರ; ಇದು ದ್ವೇಷ ಹಬ್ಬಿಸುವ ಕಸ’: ಕೇಳಿಬಂತು ಕಟು ಟೀಕೆ
Image
Aamir Khan: ವಿರೋಧದ ನಡುವೆಯೂ ‘ಆಸ್ಕರ್​’ ಗಮನ ಸೆಳೆದ ‘ಲಾಲ್​ ಸಿಂಗ್​ ಚಡ್ಡಾ’; ಆಮಿರ್​ ಖಾನ್​ ಫ್ಯಾನ್ಸ್​ ಖುಷ್​
Image
ಪತ್ನಿಗಾಗಿ ನಟನ ಕೆನ್ನೆಗೆ ಬಾರಿಸಿದ್ದ ವಿಲ್​ ಸ್ಮಿತ್​ಗೆ ಆಸ್ಕರ್​ನಿಂದ 10 ವರ್ಷ ಬ್ಯಾನ್​; ಅಕಾಡೆಮಿ ನಿರ್ಧಾರ
Image
ಆಸ್ಕರ್​ ವೇದಿಕೆಯಲ್ಲಿ ನಟ ಕ್ರಿಸ್​ ರಾಕ್​ ಕೆನ್ನೆಗೆ ಹೊಡೆದ ವಿಲ್​ ಸ್ಮಿತ್​ ಬಗ್ಗೆ ತಾಯಿಯ ಪ್ರತಿಕ್ರಿಯೆ ಏನು?

ಅತ್ಯುತ್ತಮ ನಟ: ಧನಂಜಯ್​ (ಬಡವ ರಾಸ್ಕಲ್​)

ಅತ್ಯುತ್ತಮ ನಟಿ: ಯಜ್ಞಾ ಶೆಟ್ಟಿ (ಆಕ್ಟ್​ 1978)

ಅತ್ಯುತ್ತಮ ನಿರ್ದೇಶನ: ರಾಜ್​ ಬಿ. ಶೆಟ್ಟಿ (ಗರುಡ ಗಮನ ವೃಷಭ ವಾಹನ)

ಅತ್ಯುತ್ತಮ ಪೋಷಕ ನಟ: ಬಿ. ಸುರೇಶ (ಆಕ್ಟ್​ 1978)

ಅತ್ಯುತ್ತಮ ಸಿನಿಮಾ: ಆಕ್ಟ್​ 1978 (ನಿರ್ದೇಶನ ಮಂಸೋರೆ)

ಅತ್ಯುತ್ತಮ ಪೋಷಕ ನಟಿ: ಉಮಾಶ್ರೀ (ರತ್ನನ್​ ಪ್ರಪಂಚ)

ಅತ್ಯುತ್ತಮ ಸಂಗೀತ ನಿರ್ದೇಶನ: ವಾಸುಕಿ ವೈಭವ್​ (ಬಡವ ರಾಸ್ಕಲ್​)

ಅತ್ಯುತ್ತಮ ಸಾಹಿತ್ಯ: ಜಯಂತ ಕಾಯ್ಕಿಣಿ (ಆಕ್ಟ್​ 1978)

ಅತ್ಯುತ್ತಮ ಗಾಯಕ: ರಘು ದೀಕ್ಷಿತ್​ (ನಿನ್ನ ಸನಿಹಕೆ)

ಅತ್ಯುತ್ತಮ ಗಾಯಕಿ: ಅನುರಾಧಾ ಭಟ್​ (ಬಿಚ್ಚುಗತ್ತಿ)

ಅತ್ಯುತ್ತಮ ಛಾಯಾಗ್ರಹಣ: ಶ್ರೀಶಾ ಕುದುವಳ್ಳಿ (ಬಡವ ರಾಸ್ಕಲ್​)

ಅತ್ಯುತ್ತಮ ನೃತ್ಯ ನಿರ್ದೇಶನ: ಜಾನಿ ಮಾಸ್ಟರ್​ (ಫೀಲ್​ ದ ಪವರ್​- ಯುವರತ್ನ)

ಜೀವಮಾನ ಸಾಧನೆ ಪ್ರಶಸ್ತಿ: ಪುನೀತ್​ ರಾಜ್​ಕುಮಾರ್​

ಅತ್ಯುತ್ತಮ ನಟಿ ವಿಮರ್ಶಕರ ಆಯ್ಕೆ: ಮಿಲನಾ ನಾಗರಾಜ್​, ಅಮೃತಾ ಅಯ್ಯಂಗಾರ್​

ಅತ್ಯುತ್ತಮ ನಟ ವಿಮರ್ಶಕರ ಆಯ್ಕೆ: ಡಾರ್ಲಿಂಗ್​ ಕೃಷ್ಣ (ಲವ್​ ಮಾಕ್ಟೇಲ್​)

ಚಿತ್ರರಂಗದಲ್ಲಿ ಫಿಲ್ಮ್​ಫೇರ್​ ಪ್ರಶಸ್ತಿಗೆ ಸಖತ್​ ಮನ್ನಣೆ ಇದೆ. ಈ ಅವಾರ್ಡ್​ ಪಡೆಯಬೇಕು ಎಂಬುದು ಎಲ್ಲ ನಟ-ನಟಿಯರ, ತಂತ್ರಜ್ಞರ ಕನಸಾಗಿರುತ್ತದೆ. ಹಲವು ದಶಕಗಳಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈವರೆಗೂ ಬೇರೆ ಬೇರೆ ಕಡೆಗಳಲ್ಲಿ ನಡೆಯುತ್ತಿದ್ದ ಪ್ರಶಸ್ತಿ ಪ್ರದಾನ ಸಮಾರಂಭ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜನೆಗೊಂಡಿದ್ದು ವಿಶೇಷ.

67ನೇ ಸಾಲಿನ ಫಿಲ್ಮ್​ಫೇರ್​ ಸಮಾರಂಭ ಮಾದಾವರ ಬಳಿಯ ಬಿಐಇಸಿ ಮೈದಾನದಲ್ಲಿ ನಡೆಯಿತು. ಝಗಮಗಿಸುವ ವೇದಿಕೆ ಮೇಲೆ ಅನೇಕ ಮನರಂಜನಾ ಕಾರ್ಯಕ್ರಮಗಳು ನಡೆದವು. ಪೂಜಾ ಹೆಗ್ಡೆ, ಮೃಣಾಲ್​ ಠಾಕೂರ್​, ಕೃತಿ ಶೆಟ್ಟಿ ಮುಂತಾದ ಕಲಾವಿದರು ಡ್ಯಾನ್ಸ್​ ಮಾಡಿದರು. ರಮೇಶ್​ ಅರವಿಂದ್​ ಹಾಗೂ ದಿಗಂತ್​ ಈ ಕಾರ್ಯಕ್ರಮ ನಡೆಸಿಕೊಟ್ಟರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ