AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhananjaya: ಡಿಸೆಂಬರ್​ನಲ್ಲಿ ಧನಂಜಯ್ ಅಭಿಮಾನಿಗಳಿಗೆ ಸಿನಿ ಸುಗ್ಗಿ; ‘ಪುಷ್ಪ’ ಚಿತ್ರದ ಬೆನ್ನಲ್ಲೇ ಈ ಸಿನಿಮಾ ರಿಲೀಸ್

Badava Rascal: ‘ಬಡವ ರಾಸ್ಕಲ್’ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಧನಂಜಯ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದ ಹಾಡುಗಳು ಈಗಾಗಲೇ ಗಮನ ಸೆಳೆದಿವೆ.

Dhananjaya: ಡಿಸೆಂಬರ್​ನಲ್ಲಿ ಧನಂಜಯ್ ಅಭಿಮಾನಿಗಳಿಗೆ ಸಿನಿ ಸುಗ್ಗಿ; ‘ಪುಷ್ಪ’ ಚಿತ್ರದ ಬೆನ್ನಲ್ಲೇ ಈ ಸಿನಿಮಾ ರಿಲೀಸ್
‘ಬಡವ ರಾಸ್ಕಲ್’ ಚಿತ್ರತಂಡ ಬಿಡುಗಡೆ ಮಾಡಿರುವ ನೂತನ ಪೋಸ್ಟರ್
TV9 Web
| Updated By: shivaprasad.hs|

Updated on: Oct 07, 2021 | 11:45 AM

Share

ಸ್ಯಾಂಡಲ್​ವುಡ್ ನಟ ಧನಂಜಯ್ ಸಾಲು ಸಾಲು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಅವರ ನಟನೆಯ ಚಿತ್ರಗಳು ತಮ್ಮ ಬಿಡುಗಡೆಯ ದಿನಾಂಕವನ್ನೂ ಘೋಷಿಸುತ್ತಿದ್ದು, ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಅವರ ನಟನೆಯ ‘ರತ್ನನ್ ಪ್ರಪಂಚ’ ಚಿತ್ರವು ಅಕ್ಟೋಬರ್ 22ರಂದು ಒಟಿಟಿಯಲ್ಲಿ ನೇರವಾಗಿ ಬಿಡುಗಡೆಯಾಗಲಿದೆ ಎಂದು ತಿಳಿಸಲಾಗಿತ್ತು. ಇದೀಗ ‘ಬಡವ ರಾಸ್ಕಲ್’ ಚಿತ್ರದ ಬಿಡುಗಡೆ ದಿನಾಂಕ ಘೋಷಿಸಲಾಗಿದೆ. ಅಭಿಮಾನಿಗಳಿಗೆ ಮತ್ತೂ ಖುಷಿ ನೀಡುವ ವಿಚಾರವೆಂದರೆ, ಈ ಚಿತ್ರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಡಿಸೆಂಬರ್ 24ರ ಕ್ರಿಸ್ಮಸ್ ಹಬ್ಬದಂದು ಈ ಚಿತ್ರವು ರಾಜ್ಯಾದ್ಯಂತ ತೆರೆಕಾಣಲಿದೆ.

ಈ ಮೂಲಕ ಡಿಸೆಂಬರ್ ತಿಂಗಳಲ್ಲಿ ಧನಂಜಯ್ ನಟನೆಯ ಎರಡು ಚಿತ್ರಗಳು ಒಂದರ ಹಿಂದೆ ಒಂದು ಬಿಡುಗಡೆಯಾಗಲಿವೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್ ಮೊದಲಾದ ಖ್ಯಾತ ನಟರೊಂದಿಗೆ ಧನಂಜಯ್ ಕಾಣಿಸಿಕೊಂಡಿರುವ ಬಹುನಿರೀಕ್ಷಿತ ‘ಪುಷ್ಪ ದಿ ರೈಸ್’ ಚಿತ್ರವು ಡಿಸೆಂಬರ್ 17ರಂದು ಎಲ್ಲೆಡೆ ಬಿಡುಗಡೆಯಾಗಲಿದೆ. ಇದು ಧನಂಜಯ್ ನಟನೆಯ ಮೊದಲ ಪ್ಯಾನ್ ಇಂಡಿಯಾ ಚಿತ್ರವಾಗಿದೆ. ‘ಪುಷ್ಪ’ ಬಿಡುಗಡೆಯ ಮುಂದಿನ ವಾರದಲ್ಲಿ (ಡಿಸೆಂಬರ್ 24) ‘ಬಡವ ರಾಸ್ಕಲ್’ ಬಿಡುಗಡೆಯಾಗಲಿದೆ. ಈ ಮೂಲಕ ಅಭಿಮಾನಿಗಳಿಗೆ ಭರ್ಜರಿ ಮನೋರಂಜನೆಯನ್ನು ನೀಡಲು ಧನಂಜಯ್ ತಯಾರಾಗಿದ್ದಾರೆ.

ಈ ಕುರಿತು ಹಂಚಿಕೊಂಡ ಪೋಸ್ಟ್ ಇಲ್ಲಿದೆ:

View this post on Instagram

A post shared by Dhananjaya (@dhananjaya_ka)

ಧನಂಜಯ್ ಹಾಗೂ ಅಮೃತಾ ಅಯ್ಯಂಗಾರ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದ ‘ಉಡುಪಿ ಹೋಟೆಲು’ ಹಾಡು ಈಗಾಗಲೇ ಸಿನಿ ಪ್ರೇಮಿಗಳ ಮನಗೆದ್ದಿದೆ. ‘ಬಡವ ರಾಸ್ಕಲ್’ ಚಿತ್ರವನ್ನು ಶಂಕರ್ ಗುರು ನಿರ್ದೇಶನ ಮಾಡಿದ್ದು, ‘ಡಾಲಿ ಪಿಕ್ಚರ್ಸ್’ ಬ್ಯಾನರ್​ನಲ್ಲಿ ಚಿತ್ರ ತಯಾರಾಗುತ್ತಿದೆ. ಇತ್ತೀಚೆಗೆ ಘೋಷಣೆಯಾದ ಪವನ್ ಕುಮಾರ್ ನಿರ್ದೇಶನ ಹಾಗೂ ಪುನೀತ್ ರಾಜ್​ಕುಮಾರ್ ಅಭಿನಯದ ‘ದ್ವಿತ್ವ’ ಚಿತ್ರಕ್ಕೆ ಛಾಯಾಗ್ರಹಣ ಮಾಡಲಿರುವ ಪ್ರೀತಾ ಜಯರಾಮನ್ ಬಡವ ರಾಸ್ಕಲ್ ಚಿತ್ರಕ್ಕೆ ಕ್ಯಾಮೆರಾದ ಜವಾಬ್ದಾರಿ ಹೊತ್ತಿದ್ದಾರೆ. ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಧನಂಜಯ್, ಅಮೃತಾ ಅಯ್ಯಂಗಾರ್ ಅವರೊಂದಿಗೆ ನಾಗಭೂಷಣ್, ರಂಗಾಯಣ ರಘು, ಪೂರ್ಣಚಂದ್ರ ಮೈಸೂರು ಮೊದಲಾದ ಕಲಾವಿದರು ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ:

‘ಸಲಗ’ಕ್ಕೆ ಬಲ ನೀಡಲಿರುವ ಪುನೀತ್​ ರಾಜ್​ಕುಮಾರ್​; ಪ್ರೀ-ರಿಲೀಸ್​ ಇವೆಂಟ್​ಗೆ ಅಪ್ಪು ಅತಿಥಿ

Vijay Prakash: ‘ಉಡುಪಿ ಹೋಟೆಲು, ಮೂಲೆ ಟೇಬಲು’ ಎನ್ನುತ್ತಾ ಧನಂಜಯ್ ಬರೆದ ಹಾಡಿಗೆ ದನಿಯಾಗಿದ್ದಾರೆ ವಿಜಯ್ ಪ್ರಕಾಶ್

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ