AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhananjaya Birthday: ಧನಂಜಯಗೆ ಬರ್ತ್​ಡೇ ಸಂಭ್ರಮ; ಜನ್ಮದಿನ ಆಚರಿಸಿಕೊಳ್ಳದಿರಲು ಕಾರಣ ನೀಡಿದ ಡಾಲಿ

Happy Birtgday Dhananjaya: ನೆಚ್ಚಿನ ನಟನ ಜನ್ಮದಿನ ಬಂದರೆ ಅಭಿಮಾನಿಗಳು ಅವರ ಮನೆ ಎದುರು ಹಾಜರಿ ಹಾಕುತ್ತಾರೆ. ಕೇಕ್​ ಕತ್ತರಿಸಿ ಸಂಭ್ರಮಿಸುತ್ತಾರೆ. ಆದರೆ ಕಳೆದ ವರ್ಷದಿಂದ ಇದು ಸಾಧ್ಯವಾಗುತ್ತಿಲ್ಲ.

Dhananjaya Birthday: ಧನಂಜಯಗೆ ಬರ್ತ್​ಡೇ ಸಂಭ್ರಮ; ಜನ್ಮದಿನ ಆಚರಿಸಿಕೊಳ್ಳದಿರಲು ಕಾರಣ ನೀಡಿದ ಡಾಲಿ
ಡಾಲಿ ಧನಂಜಯ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 23, 2021 | 9:25 AM

Share

ನಟ ಧನಂಜಯ​ ಅವರಿಗೆ ಇಂದು (ಆಗಸ್ಟ್ 23) ಜನ್ಮದಿನದ ಸಂಭ್ರಮ. ‘ಟಗರು’ ತೆರೆಕಂಡ ನಂತರದಲ್ಲಿ ಡಾಲಿ ಎಂದೇ ಖ್ಯಾತಿ ಪಡೆದ ಧನಂಜಯ​ ಅವರು ಕನ್ನಡದ ಬಹುಬೇಡಿಕೆಯ ಕಲಾವಿದ. ಪ್ರತಿ ಸಿನಿಮಾಗೂ ಬೇರೆಬೇರೆ ರೀತಿಯ ಪಾತ್ರ ಆಯ್ಕೆ ಮಾಡಿಕೊಳ್ಳುವ ಮೂಲಕ ಪ್ರೇಕ್ಷಕರಿಗೆ ಧನಂಜಯ​ ಹತ್ತಿವಾಗಿದ್ದಾರೆ. ಜನ್ಮದಿನದ ಹಿನ್ನೆಲೆಯಲ್ಲಿ ಅವರಿಗೆ ಸೋಶಿಯಲ್​ ಮೀಡಿಯಾದಲ್ಲಿ ಶುಭಾಶಯಗಳು ಹರಿದುಬರುತ್ತಿವೆ.

ನೆಚ್ಚಿನ ನಟನ ಜನ್ಮದಿನ ಬಂದರೆ ಅಭಿಮಾನಿಗಳು ಅವರ ಮನೆ ಎದುರು ಹಾಜರಿ ಹಾಕುತ್ತಾರೆ. ಕೇಕ್​ ಕತ್ತರಿಸಿ ಸಂಭ್ರಮಿಸುತ್ತಾರೆ. ಆದರೆ ಕಳೆದ ವರ್ಷದಿಂದ ಇದು ಸಾಧ್ಯವಾಗುತ್ತಿಲ್ಲ. ಕೊರೊನಾ ವೈರಸ್​ ಕಾಡುತ್ತಿದೆ. ಈ ಆತಂಕದ ಹಿನ್ನೆಲೆಯಲ್ಲಿ ಸ್ಟಾರ್​ ನಟರು ತಮ್ಮ ಜನ್ಮದಿನ ಆಚರಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಧನಂಜಯ​ ಕೂಡ ಈ ಬಾರಿ ಬರ್ತ್​ಡೇ ಆಚರಣೆ ಮಾಡಿಕೊಳ್ಳುತ್ತಿಲ್ಲ. ಇದರ ಹಿಂದೆ ಒಂದು ಸಾಮಾಜಿಕ ಹಿತಾಸಕ್ತಿ ಕೂಡ ಇದೆ.

ಧನಂಜಯ​ ಕನ್ನಡ, ತೆಲುಗು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಸಿನಿಮಾ ಶೂಟಿಂಗ್​ ಒಂದಕ್ಕಾಗಿ ಅವರು ಚೆನ್ನೈಗೆ ತೆರಳಿದ್ದಾರೆ. ಇಂದು ಅವರು ಅಲ್ಲಿಯೇ ಇರಲಿದ್ದಾರೆ. ಹೀಗಾಗಿ, ಅಭಿಮಾನಿಗಳನ್ನು ಭೇಟಿ ಮಾಡದೆ ಇರಲು ಇದು ಕೂಡ ಕಾರಣ. ಇತ್ತೀಚೆಗೆ ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಹೇಳಿಕೊಂಡಿದ್ದರು. ಅಲ್ಲದೆ, ಮುಂದಿನ ವರ್ಷ ಎಲ್ಲವೂ ಸರಿಯಾದರೆ ಅಭಿಮಾನಿಗಳ ಜತೆ ಬರ್ತ್​ಡೇ ಆಚರಿಸಿಕೊಳ್ಳುವ ಭರವಸೆಯನ್ನು ಅವರು ನೀಡಿದ್ದಾರೆ.

ಸ್ಟಾರ್ ನಟರ ಜನ್ಮದಿನ ಇದ್ದಾಗ ಸಿನಿಮಾ ತಂಡದಿಂದ ಪೋಸ್ಟರ್​ ಟ್ರೇಲರ್​ ರಿಲೀಸ್​ ಆಗುತ್ತವೆ. ಧನಂಜಯ್​ ಜನ್ಮದಿನಕ್ಕೂ ಮೊದಲೇ ಚಿತ್ರತಂಡಗಳು ಈ ಕೆಲಸದಲ್ಲಿ ತೊಡಗಿಕೊಂಡಿವೆ. ಇತ್ತೀಚೆಗೆ ‘ರತ್ನನ್ ಪ್ರಪಂಚ’ ಸಿನಿಮಾದ ಟ್ರೇಲರ್​ ರಿಲೀಸ್​ ಆಗಿ ಮೆಚ್ಚುಗೆ ಗಳಿಸಿಕೊಳ್ಳುತ್ತಿದೆ. ಇಂದು ಕೂಡ ಅವರ ನಟನೆಯ ವಿವಿಧ ಸಿನಿಮಾಗಳ ಟೀಸರ್​, ಟ್ರೇಲರ್​ ಹಾಗೂ ಪೋಸ್ಟರ್​ ರಿಲೀಸ್​ ಆಗುವ ನಿರೀಕ್ಷೆ ಇದೆ. ಇನ್ನು, ಸಾಕಷ್ಟು ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಧನಂಜಯ​ಗೆ ಶುಭಾಶಯ ತಿಳಿಸುತ್ತಿದ್ದಾರೆ.

ಇದನ್ನೂ ಓದಿ: DDhananjay: ಧನಂಜಯ್ ಬತ್ತಳಿಕೆ ಸೇರಿತು ಹೊಸ ಸಿನಿಮಾ; ಕುತೂಹಲ ಮೂಡಿಸುವ ಪೋಸ್ಟರ್ ಇಲ್ಲಿದೆ

Dhananjay: ಇದು ಡಾಲಿ ಅಲ್ಲ ರತ್ನಾಕರ; ಹೊಸ ಪ್ರಪಂಚದ ಸ್ಯಾಂಪಲ್​ ತೋರಿಸಿದ ಧನಂಜಯ್​

Published On - 7:29 am, Mon, 23 August 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!