AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhananjaya Birthday: ಧನಂಜಯಗೆ ಬರ್ತ್​ಡೇ ಸಂಭ್ರಮ; ಜನ್ಮದಿನ ಆಚರಿಸಿಕೊಳ್ಳದಿರಲು ಕಾರಣ ನೀಡಿದ ಡಾಲಿ

Happy Birtgday Dhananjaya: ನೆಚ್ಚಿನ ನಟನ ಜನ್ಮದಿನ ಬಂದರೆ ಅಭಿಮಾನಿಗಳು ಅವರ ಮನೆ ಎದುರು ಹಾಜರಿ ಹಾಕುತ್ತಾರೆ. ಕೇಕ್​ ಕತ್ತರಿಸಿ ಸಂಭ್ರಮಿಸುತ್ತಾರೆ. ಆದರೆ ಕಳೆದ ವರ್ಷದಿಂದ ಇದು ಸಾಧ್ಯವಾಗುತ್ತಿಲ್ಲ.

Dhananjaya Birthday: ಧನಂಜಯಗೆ ಬರ್ತ್​ಡೇ ಸಂಭ್ರಮ; ಜನ್ಮದಿನ ಆಚರಿಸಿಕೊಳ್ಳದಿರಲು ಕಾರಣ ನೀಡಿದ ಡಾಲಿ
ಡಾಲಿ ಧನಂಜಯ್
TV9 Web
| Edited By: |

Updated on:Aug 23, 2021 | 9:25 AM

Share

ನಟ ಧನಂಜಯ​ ಅವರಿಗೆ ಇಂದು (ಆಗಸ್ಟ್ 23) ಜನ್ಮದಿನದ ಸಂಭ್ರಮ. ‘ಟಗರು’ ತೆರೆಕಂಡ ನಂತರದಲ್ಲಿ ಡಾಲಿ ಎಂದೇ ಖ್ಯಾತಿ ಪಡೆದ ಧನಂಜಯ​ ಅವರು ಕನ್ನಡದ ಬಹುಬೇಡಿಕೆಯ ಕಲಾವಿದ. ಪ್ರತಿ ಸಿನಿಮಾಗೂ ಬೇರೆಬೇರೆ ರೀತಿಯ ಪಾತ್ರ ಆಯ್ಕೆ ಮಾಡಿಕೊಳ್ಳುವ ಮೂಲಕ ಪ್ರೇಕ್ಷಕರಿಗೆ ಧನಂಜಯ​ ಹತ್ತಿವಾಗಿದ್ದಾರೆ. ಜನ್ಮದಿನದ ಹಿನ್ನೆಲೆಯಲ್ಲಿ ಅವರಿಗೆ ಸೋಶಿಯಲ್​ ಮೀಡಿಯಾದಲ್ಲಿ ಶುಭಾಶಯಗಳು ಹರಿದುಬರುತ್ತಿವೆ.

ನೆಚ್ಚಿನ ನಟನ ಜನ್ಮದಿನ ಬಂದರೆ ಅಭಿಮಾನಿಗಳು ಅವರ ಮನೆ ಎದುರು ಹಾಜರಿ ಹಾಕುತ್ತಾರೆ. ಕೇಕ್​ ಕತ್ತರಿಸಿ ಸಂಭ್ರಮಿಸುತ್ತಾರೆ. ಆದರೆ ಕಳೆದ ವರ್ಷದಿಂದ ಇದು ಸಾಧ್ಯವಾಗುತ್ತಿಲ್ಲ. ಕೊರೊನಾ ವೈರಸ್​ ಕಾಡುತ್ತಿದೆ. ಈ ಆತಂಕದ ಹಿನ್ನೆಲೆಯಲ್ಲಿ ಸ್ಟಾರ್​ ನಟರು ತಮ್ಮ ಜನ್ಮದಿನ ಆಚರಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಧನಂಜಯ​ ಕೂಡ ಈ ಬಾರಿ ಬರ್ತ್​ಡೇ ಆಚರಣೆ ಮಾಡಿಕೊಳ್ಳುತ್ತಿಲ್ಲ. ಇದರ ಹಿಂದೆ ಒಂದು ಸಾಮಾಜಿಕ ಹಿತಾಸಕ್ತಿ ಕೂಡ ಇದೆ.

ಧನಂಜಯ​ ಕನ್ನಡ, ತೆಲುಗು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಸಿನಿಮಾ ಶೂಟಿಂಗ್​ ಒಂದಕ್ಕಾಗಿ ಅವರು ಚೆನ್ನೈಗೆ ತೆರಳಿದ್ದಾರೆ. ಇಂದು ಅವರು ಅಲ್ಲಿಯೇ ಇರಲಿದ್ದಾರೆ. ಹೀಗಾಗಿ, ಅಭಿಮಾನಿಗಳನ್ನು ಭೇಟಿ ಮಾಡದೆ ಇರಲು ಇದು ಕೂಡ ಕಾರಣ. ಇತ್ತೀಚೆಗೆ ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಹೇಳಿಕೊಂಡಿದ್ದರು. ಅಲ್ಲದೆ, ಮುಂದಿನ ವರ್ಷ ಎಲ್ಲವೂ ಸರಿಯಾದರೆ ಅಭಿಮಾನಿಗಳ ಜತೆ ಬರ್ತ್​ಡೇ ಆಚರಿಸಿಕೊಳ್ಳುವ ಭರವಸೆಯನ್ನು ಅವರು ನೀಡಿದ್ದಾರೆ.

ಸ್ಟಾರ್ ನಟರ ಜನ್ಮದಿನ ಇದ್ದಾಗ ಸಿನಿಮಾ ತಂಡದಿಂದ ಪೋಸ್ಟರ್​ ಟ್ರೇಲರ್​ ರಿಲೀಸ್​ ಆಗುತ್ತವೆ. ಧನಂಜಯ್​ ಜನ್ಮದಿನಕ್ಕೂ ಮೊದಲೇ ಚಿತ್ರತಂಡಗಳು ಈ ಕೆಲಸದಲ್ಲಿ ತೊಡಗಿಕೊಂಡಿವೆ. ಇತ್ತೀಚೆಗೆ ‘ರತ್ನನ್ ಪ್ರಪಂಚ’ ಸಿನಿಮಾದ ಟ್ರೇಲರ್​ ರಿಲೀಸ್​ ಆಗಿ ಮೆಚ್ಚುಗೆ ಗಳಿಸಿಕೊಳ್ಳುತ್ತಿದೆ. ಇಂದು ಕೂಡ ಅವರ ನಟನೆಯ ವಿವಿಧ ಸಿನಿಮಾಗಳ ಟೀಸರ್​, ಟ್ರೇಲರ್​ ಹಾಗೂ ಪೋಸ್ಟರ್​ ರಿಲೀಸ್​ ಆಗುವ ನಿರೀಕ್ಷೆ ಇದೆ. ಇನ್ನು, ಸಾಕಷ್ಟು ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಧನಂಜಯ​ಗೆ ಶುಭಾಶಯ ತಿಳಿಸುತ್ತಿದ್ದಾರೆ.

ಇದನ್ನೂ ಓದಿ: DDhananjay: ಧನಂಜಯ್ ಬತ್ತಳಿಕೆ ಸೇರಿತು ಹೊಸ ಸಿನಿಮಾ; ಕುತೂಹಲ ಮೂಡಿಸುವ ಪೋಸ್ಟರ್ ಇಲ್ಲಿದೆ

Dhananjay: ಇದು ಡಾಲಿ ಅಲ್ಲ ರತ್ನಾಕರ; ಹೊಸ ಪ್ರಪಂಚದ ಸ್ಯಾಂಪಲ್​ ತೋರಿಸಿದ ಧನಂಜಯ್​

Published On - 7:29 am, Mon, 23 August 21

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ