AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhananjaya Birthday: ಧನಂಜಯಗೆ ಬರ್ತ್​ಡೇ ಸಂಭ್ರಮ; ಜನ್ಮದಿನ ಆಚರಿಸಿಕೊಳ್ಳದಿರಲು ಕಾರಣ ನೀಡಿದ ಡಾಲಿ

Happy Birtgday Dhananjaya: ನೆಚ್ಚಿನ ನಟನ ಜನ್ಮದಿನ ಬಂದರೆ ಅಭಿಮಾನಿಗಳು ಅವರ ಮನೆ ಎದುರು ಹಾಜರಿ ಹಾಕುತ್ತಾರೆ. ಕೇಕ್​ ಕತ್ತರಿಸಿ ಸಂಭ್ರಮಿಸುತ್ತಾರೆ. ಆದರೆ ಕಳೆದ ವರ್ಷದಿಂದ ಇದು ಸಾಧ್ಯವಾಗುತ್ತಿಲ್ಲ.

Dhananjaya Birthday: ಧನಂಜಯಗೆ ಬರ್ತ್​ಡೇ ಸಂಭ್ರಮ; ಜನ್ಮದಿನ ಆಚರಿಸಿಕೊಳ್ಳದಿರಲು ಕಾರಣ ನೀಡಿದ ಡಾಲಿ
ಡಾಲಿ ಧನಂಜಯ್
TV9 Web
| Edited By: |

Updated on:Aug 23, 2021 | 9:25 AM

Share

ನಟ ಧನಂಜಯ​ ಅವರಿಗೆ ಇಂದು (ಆಗಸ್ಟ್ 23) ಜನ್ಮದಿನದ ಸಂಭ್ರಮ. ‘ಟಗರು’ ತೆರೆಕಂಡ ನಂತರದಲ್ಲಿ ಡಾಲಿ ಎಂದೇ ಖ್ಯಾತಿ ಪಡೆದ ಧನಂಜಯ​ ಅವರು ಕನ್ನಡದ ಬಹುಬೇಡಿಕೆಯ ಕಲಾವಿದ. ಪ್ರತಿ ಸಿನಿಮಾಗೂ ಬೇರೆಬೇರೆ ರೀತಿಯ ಪಾತ್ರ ಆಯ್ಕೆ ಮಾಡಿಕೊಳ್ಳುವ ಮೂಲಕ ಪ್ರೇಕ್ಷಕರಿಗೆ ಧನಂಜಯ​ ಹತ್ತಿವಾಗಿದ್ದಾರೆ. ಜನ್ಮದಿನದ ಹಿನ್ನೆಲೆಯಲ್ಲಿ ಅವರಿಗೆ ಸೋಶಿಯಲ್​ ಮೀಡಿಯಾದಲ್ಲಿ ಶುಭಾಶಯಗಳು ಹರಿದುಬರುತ್ತಿವೆ.

ನೆಚ್ಚಿನ ನಟನ ಜನ್ಮದಿನ ಬಂದರೆ ಅಭಿಮಾನಿಗಳು ಅವರ ಮನೆ ಎದುರು ಹಾಜರಿ ಹಾಕುತ್ತಾರೆ. ಕೇಕ್​ ಕತ್ತರಿಸಿ ಸಂಭ್ರಮಿಸುತ್ತಾರೆ. ಆದರೆ ಕಳೆದ ವರ್ಷದಿಂದ ಇದು ಸಾಧ್ಯವಾಗುತ್ತಿಲ್ಲ. ಕೊರೊನಾ ವೈರಸ್​ ಕಾಡುತ್ತಿದೆ. ಈ ಆತಂಕದ ಹಿನ್ನೆಲೆಯಲ್ಲಿ ಸ್ಟಾರ್​ ನಟರು ತಮ್ಮ ಜನ್ಮದಿನ ಆಚರಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಧನಂಜಯ​ ಕೂಡ ಈ ಬಾರಿ ಬರ್ತ್​ಡೇ ಆಚರಣೆ ಮಾಡಿಕೊಳ್ಳುತ್ತಿಲ್ಲ. ಇದರ ಹಿಂದೆ ಒಂದು ಸಾಮಾಜಿಕ ಹಿತಾಸಕ್ತಿ ಕೂಡ ಇದೆ.

ಧನಂಜಯ​ ಕನ್ನಡ, ತೆಲುಗು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಸಿನಿಮಾ ಶೂಟಿಂಗ್​ ಒಂದಕ್ಕಾಗಿ ಅವರು ಚೆನ್ನೈಗೆ ತೆರಳಿದ್ದಾರೆ. ಇಂದು ಅವರು ಅಲ್ಲಿಯೇ ಇರಲಿದ್ದಾರೆ. ಹೀಗಾಗಿ, ಅಭಿಮಾನಿಗಳನ್ನು ಭೇಟಿ ಮಾಡದೆ ಇರಲು ಇದು ಕೂಡ ಕಾರಣ. ಇತ್ತೀಚೆಗೆ ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಹೇಳಿಕೊಂಡಿದ್ದರು. ಅಲ್ಲದೆ, ಮುಂದಿನ ವರ್ಷ ಎಲ್ಲವೂ ಸರಿಯಾದರೆ ಅಭಿಮಾನಿಗಳ ಜತೆ ಬರ್ತ್​ಡೇ ಆಚರಿಸಿಕೊಳ್ಳುವ ಭರವಸೆಯನ್ನು ಅವರು ನೀಡಿದ್ದಾರೆ.

ಸ್ಟಾರ್ ನಟರ ಜನ್ಮದಿನ ಇದ್ದಾಗ ಸಿನಿಮಾ ತಂಡದಿಂದ ಪೋಸ್ಟರ್​ ಟ್ರೇಲರ್​ ರಿಲೀಸ್​ ಆಗುತ್ತವೆ. ಧನಂಜಯ್​ ಜನ್ಮದಿನಕ್ಕೂ ಮೊದಲೇ ಚಿತ್ರತಂಡಗಳು ಈ ಕೆಲಸದಲ್ಲಿ ತೊಡಗಿಕೊಂಡಿವೆ. ಇತ್ತೀಚೆಗೆ ‘ರತ್ನನ್ ಪ್ರಪಂಚ’ ಸಿನಿಮಾದ ಟ್ರೇಲರ್​ ರಿಲೀಸ್​ ಆಗಿ ಮೆಚ್ಚುಗೆ ಗಳಿಸಿಕೊಳ್ಳುತ್ತಿದೆ. ಇಂದು ಕೂಡ ಅವರ ನಟನೆಯ ವಿವಿಧ ಸಿನಿಮಾಗಳ ಟೀಸರ್​, ಟ್ರೇಲರ್​ ಹಾಗೂ ಪೋಸ್ಟರ್​ ರಿಲೀಸ್​ ಆಗುವ ನಿರೀಕ್ಷೆ ಇದೆ. ಇನ್ನು, ಸಾಕಷ್ಟು ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಧನಂಜಯ​ಗೆ ಶುಭಾಶಯ ತಿಳಿಸುತ್ತಿದ್ದಾರೆ.

ಇದನ್ನೂ ಓದಿ: DDhananjay: ಧನಂಜಯ್ ಬತ್ತಳಿಕೆ ಸೇರಿತು ಹೊಸ ಸಿನಿಮಾ; ಕುತೂಹಲ ಮೂಡಿಸುವ ಪೋಸ್ಟರ್ ಇಲ್ಲಿದೆ

Dhananjay: ಇದು ಡಾಲಿ ಅಲ್ಲ ರತ್ನಾಕರ; ಹೊಸ ಪ್ರಪಂಚದ ಸ್ಯಾಂಪಲ್​ ತೋರಿಸಿದ ಧನಂಜಯ್​

Published On - 7:29 am, Mon, 23 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!