AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhananjaya: ಧನಂಜಯ ಮುಂದಿನ ಚಿತ್ರಕ್ಕೆ ಶೀರ್ಷಿಕೆ ಫೈನಲ್​; ‘ಹೊಯ್ಸಳ’ ಆದ ಡಾಲಿ

ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ರಿಲೀಸ್​ ಆದ ‘ರತ್ನನ್ ಪ್ರಪಂಚ’ ಮೆಚ್ಚುಗೆ ಪಡೆದುಕೊಂಡಿತ್ತು. ತಾಯಿ ಸೆಂಟಿಮೆಂಟ್​ ಕಥೆ ಸಿನಿಮಾದಲ್ಲಿ ಹೈಲೈಟ್​ ಆಗಿತ್ತು. ಈ ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ.ಜಿ. ರಾಜ್ ನಿರ್ಮಾಣ ಮಾಡಿದ್ದರು.

Dhananjaya: ಧನಂಜಯ ಮುಂದಿನ ಚಿತ್ರಕ್ಕೆ ಶೀರ್ಷಿಕೆ ಫೈನಲ್​; ‘ಹೊಯ್ಸಳ’ ಆದ ಡಾಲಿ
ಧನಂಜಯ
TV9 Web
| Edited By: |

Updated on:Jan 14, 2022 | 4:07 PM

Share

ನಟ ಧನಂಜಯ (Dhananjay) ಅವರಿಗೆ ಸ್ಯಾಂಡಲ್​ವುಡ್​ನಲ್ಲಿ (Sandalwood) ಭಾರೀ ಬೇಡಿಕೆ ಇದೆ. ಇತ್ತೀಚೆಗೆ ತೆರೆಕಂಡ ‘ಬಡವ ರಾಸ್ಕಲ್​’ (Badava Rascal) ಸಿನಿಮಾ ಗೆದ್ದು ಬೀಗಿದೆ. ಈ ಚಿತ್ರ ಉತ್ತಮ ಕಲೆಕ್ಷನ್​ ಮಾಡಿದ್ದು, ನಿರ್ಮಾಪಕನಾಗಿ ಧನಂಜಯ ಅವರು ಗೆದ್ದಿದ್ದಾರೆ. ಈಗ ಅವರ ಮುಂದಿನ ಚಿತ್ರಕ್ಕೆ ಶೀರ್ಷಿಕೆ ಅಂತಿಮ ಆಗಿದೆ. ಈ ಚಿತ್ರಕ್ಕೆ ‘ಹೊಯ್ಸಳ’ (Hoysala) ಎಂದು ಹೆಸರಿಡಲಾಗಿದೆ. ಧನಂಜಯ ನಟನೆಯ ‘ರತ್ನನ್​ ಪ್ರಪಂಚ’ ಸಿನಿಮಾ ಕಳೆದ ವರ್ಷ ಒಟಿಟಿಯಲ್ಲಿ ರಿಲೀಸ್​ ಆಗಿತ್ತು. ಈ ಚಿತ್ರವನ್ನು ಕೆ.ಆರ್​.ಜಿ. ಸ್ಟುಡಿಯೋಸ್​ (KRG Studios) ನಿರ್ಮಾಣ ಮಾಡಿತ್ತು. ಈಗ ‘ಹೊಯ್ಸಳ’ ಚಿತ್ರವನ್ನೂ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣ ಮಾಡುತ್ತಿದೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿದೆ.

ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ರಿಲೀಸ್​ ಆದ ‘ರತ್ನನ್ ಪ್ರಪಂಚ’ ಮೆಚ್ಚುಗೆ ಪಡೆದುಕೊಂಡಿತ್ತು. ತಾಯಿ ಸೆಂಟಿಮೆಂಟ್​ ಕಥೆ ಸಿನಿಮಾದಲ್ಲಿ ಹೈಲೈಟ್​ ಆಗಿತ್ತು. ಈ ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ.ಜಿ. ರಾಜ್ ನಿರ್ಮಾಣ ಮಾಡಿದ್ದರು. ‘ಹೊಯ್ಸಳ’ ಚಿತ್ರದ ನಿರ್ಮಾಣ ಜವಾಬ್ದಾರಿಯೂ ಇವರದ್ದೇ ಆಗಿರಲಿದೆ. ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರು ಅವರು ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ.

ಗಣೇಶ್​ ನಟನೆಯ ‘ಗೀತಾ’ ಸಿನಿಮಾ ವಿಮರ್ಶೆಯಲ್ಲಿ ಗೆದ್ದಿತ್ತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದ ವಿಜಯ್ ಎನ್. ಅವರು ಈ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಸಂಗೀತ ನಿರ್ದೇಶನ ಜವಾಬ್ದಾರಿಯನ್ನು ಎಸ್. ಎಸ್. ತಮನ್ ಅವರ ಹೊತ್ತಿದ್ದಾರೆ. ಚಿತ್ರಕ್ಕೆ ದೀಪು. ಎಸ್. ಕುಮಾರ್ ಸಂಕಲನ ಮಾಡಲ್ಲಿದ್ದಾರೆ. ವಿಶ್ವಾಸ್ ಕಶ್ಯಪ್ ಅವರು ಕಲಾ ನಿರ್ದೇಶಕರಾಗಿದ್ದಾರೆ. ‘ಟಗರು’ ಖ್ಯಾತಿಯ ಮಾಸ್ತಿ ಅವರು ಈ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ.

‘ಹೊಯ್ಸಳ’ ಚಿತ್ರಕ್ಕೆ ಧನಂಜಯ ನಾಯಕ. ಈ ಚಿತ್ರ ಧನಂಜಯ ಅವರ 25ನೇ ಸಿನಿಮಾ ಅನ್ನೋದು ವಿಶೇಷ. ಈ ಚಿತ್ರದ ಬಹುತೇಕ ಶೂಟಿಂಗ್​ ಬೆಳಗಾವಿ ಜಿಲ್ಲೆಯಲ್ಲಿ ನಡೆಯಲಿದೆ. ಪೊಲೀಸ್​ ಕಥಾಹಂದರವನ್ನು ಇದು ಹೊಂದಿದೆ. ಏಪ್ರಿಲ್ ತಿಂಗಳಿನಲ್ಲಿ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಚಿತ್ರದ ಕಲಾವಿದರ ಆಯ್ಕೆ ಪ್ರಗತಿಯಲ್ಲಿದೆ. ಮುಂಬರುವ ದಿನಗಳಲ್ಲಿ ಈ ಬಗ್ಗೆ ಘೋಷಣೆ ಆಗಲಿದೆ. ಕನ್ನಡ ರಾಜ್ಯೋತ್ಸವಕ್ಕೆ ಚಿತ್ರವನ್ನು ಬಿಡುಗಡೆ ಮಾಡುವ ಉದ್ದೇಶವನ್ನು ಚಿತ್ರತಂಡ ಇಟ್ಟುಕೊಂಡಿದೆ.

ಇದನ್ನೂ ಓದಿ: ‘ಬಡವ ರಾಸ್ಕಲ್​’ ಕಲೆಕ್ಷನ್​ 15 ಕೋಟಿ ರೂಪಾಯಿ? ಧನಂಜಯ ಹೇಳಿದ್ದು ಇಷ್ಟು

‘ನಾವು ಕಾಲಿಟ್ರೆ ಹೊಸ ಅಲೆ ಏಳತ್ತೆ’; ಸಿನಿಮಾ ಜರ್ನಿಯನ್ನು ಇನ್ನೊಂದು ರೀತಿ ಅರ್ಥೈಸಿದ ಧನಂಜಯ

Published On - 4:03 pm, Fri, 14 January 22

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ