Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhananjaya: ಧನಂಜಯ ಮುಂದಿನ ಚಿತ್ರಕ್ಕೆ ಶೀರ್ಷಿಕೆ ಫೈನಲ್​; ‘ಹೊಯ್ಸಳ’ ಆದ ಡಾಲಿ

ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ರಿಲೀಸ್​ ಆದ ‘ರತ್ನನ್ ಪ್ರಪಂಚ’ ಮೆಚ್ಚುಗೆ ಪಡೆದುಕೊಂಡಿತ್ತು. ತಾಯಿ ಸೆಂಟಿಮೆಂಟ್​ ಕಥೆ ಸಿನಿಮಾದಲ್ಲಿ ಹೈಲೈಟ್​ ಆಗಿತ್ತು. ಈ ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ.ಜಿ. ರಾಜ್ ನಿರ್ಮಾಣ ಮಾಡಿದ್ದರು.

Dhananjaya: ಧನಂಜಯ ಮುಂದಿನ ಚಿತ್ರಕ್ಕೆ ಶೀರ್ಷಿಕೆ ಫೈನಲ್​; ‘ಹೊಯ್ಸಳ’ ಆದ ಡಾಲಿ
ಧನಂಜಯ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 14, 2022 | 4:07 PM

ನಟ ಧನಂಜಯ (Dhananjay) ಅವರಿಗೆ ಸ್ಯಾಂಡಲ್​ವುಡ್​ನಲ್ಲಿ (Sandalwood) ಭಾರೀ ಬೇಡಿಕೆ ಇದೆ. ಇತ್ತೀಚೆಗೆ ತೆರೆಕಂಡ ‘ಬಡವ ರಾಸ್ಕಲ್​’ (Badava Rascal) ಸಿನಿಮಾ ಗೆದ್ದು ಬೀಗಿದೆ. ಈ ಚಿತ್ರ ಉತ್ತಮ ಕಲೆಕ್ಷನ್​ ಮಾಡಿದ್ದು, ನಿರ್ಮಾಪಕನಾಗಿ ಧನಂಜಯ ಅವರು ಗೆದ್ದಿದ್ದಾರೆ. ಈಗ ಅವರ ಮುಂದಿನ ಚಿತ್ರಕ್ಕೆ ಶೀರ್ಷಿಕೆ ಅಂತಿಮ ಆಗಿದೆ. ಈ ಚಿತ್ರಕ್ಕೆ ‘ಹೊಯ್ಸಳ’ (Hoysala) ಎಂದು ಹೆಸರಿಡಲಾಗಿದೆ. ಧನಂಜಯ ನಟನೆಯ ‘ರತ್ನನ್​ ಪ್ರಪಂಚ’ ಸಿನಿಮಾ ಕಳೆದ ವರ್ಷ ಒಟಿಟಿಯಲ್ಲಿ ರಿಲೀಸ್​ ಆಗಿತ್ತು. ಈ ಚಿತ್ರವನ್ನು ಕೆ.ಆರ್​.ಜಿ. ಸ್ಟುಡಿಯೋಸ್​ (KRG Studios) ನಿರ್ಮಾಣ ಮಾಡಿತ್ತು. ಈಗ ‘ಹೊಯ್ಸಳ’ ಚಿತ್ರವನ್ನೂ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣ ಮಾಡುತ್ತಿದೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿದೆ.

ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ರಿಲೀಸ್​ ಆದ ‘ರತ್ನನ್ ಪ್ರಪಂಚ’ ಮೆಚ್ಚುಗೆ ಪಡೆದುಕೊಂಡಿತ್ತು. ತಾಯಿ ಸೆಂಟಿಮೆಂಟ್​ ಕಥೆ ಸಿನಿಮಾದಲ್ಲಿ ಹೈಲೈಟ್​ ಆಗಿತ್ತು. ಈ ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ.ಜಿ. ರಾಜ್ ನಿರ್ಮಾಣ ಮಾಡಿದ್ದರು. ‘ಹೊಯ್ಸಳ’ ಚಿತ್ರದ ನಿರ್ಮಾಣ ಜವಾಬ್ದಾರಿಯೂ ಇವರದ್ದೇ ಆಗಿರಲಿದೆ. ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರು ಅವರು ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ.

ಗಣೇಶ್​ ನಟನೆಯ ‘ಗೀತಾ’ ಸಿನಿಮಾ ವಿಮರ್ಶೆಯಲ್ಲಿ ಗೆದ್ದಿತ್ತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದ ವಿಜಯ್ ಎನ್. ಅವರು ಈ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಸಂಗೀತ ನಿರ್ದೇಶನ ಜವಾಬ್ದಾರಿಯನ್ನು ಎಸ್. ಎಸ್. ತಮನ್ ಅವರ ಹೊತ್ತಿದ್ದಾರೆ. ಚಿತ್ರಕ್ಕೆ ದೀಪು. ಎಸ್. ಕುಮಾರ್ ಸಂಕಲನ ಮಾಡಲ್ಲಿದ್ದಾರೆ. ವಿಶ್ವಾಸ್ ಕಶ್ಯಪ್ ಅವರು ಕಲಾ ನಿರ್ದೇಶಕರಾಗಿದ್ದಾರೆ. ‘ಟಗರು’ ಖ್ಯಾತಿಯ ಮಾಸ್ತಿ ಅವರು ಈ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ.

‘ಹೊಯ್ಸಳ’ ಚಿತ್ರಕ್ಕೆ ಧನಂಜಯ ನಾಯಕ. ಈ ಚಿತ್ರ ಧನಂಜಯ ಅವರ 25ನೇ ಸಿನಿಮಾ ಅನ್ನೋದು ವಿಶೇಷ. ಈ ಚಿತ್ರದ ಬಹುತೇಕ ಶೂಟಿಂಗ್​ ಬೆಳಗಾವಿ ಜಿಲ್ಲೆಯಲ್ಲಿ ನಡೆಯಲಿದೆ. ಪೊಲೀಸ್​ ಕಥಾಹಂದರವನ್ನು ಇದು ಹೊಂದಿದೆ. ಏಪ್ರಿಲ್ ತಿಂಗಳಿನಲ್ಲಿ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಚಿತ್ರದ ಕಲಾವಿದರ ಆಯ್ಕೆ ಪ್ರಗತಿಯಲ್ಲಿದೆ. ಮುಂಬರುವ ದಿನಗಳಲ್ಲಿ ಈ ಬಗ್ಗೆ ಘೋಷಣೆ ಆಗಲಿದೆ. ಕನ್ನಡ ರಾಜ್ಯೋತ್ಸವಕ್ಕೆ ಚಿತ್ರವನ್ನು ಬಿಡುಗಡೆ ಮಾಡುವ ಉದ್ದೇಶವನ್ನು ಚಿತ್ರತಂಡ ಇಟ್ಟುಕೊಂಡಿದೆ.

ಇದನ್ನೂ ಓದಿ: ‘ಬಡವ ರಾಸ್ಕಲ್​’ ಕಲೆಕ್ಷನ್​ 15 ಕೋಟಿ ರೂಪಾಯಿ? ಧನಂಜಯ ಹೇಳಿದ್ದು ಇಷ್ಟು

‘ನಾವು ಕಾಲಿಟ್ರೆ ಹೊಸ ಅಲೆ ಏಳತ್ತೆ’; ಸಿನಿಮಾ ಜರ್ನಿಯನ್ನು ಇನ್ನೊಂದು ರೀತಿ ಅರ್ಥೈಸಿದ ಧನಂಜಯ

Published On - 4:03 pm, Fri, 14 January 22

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !