AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಪ್ರಚಾರಕ್ಕಾಗಿ ಇಷ್ಟು ಕೀಳು ಮಟ್ಟಕ್ಕೆ ಇಳಿಯಬಾರದು; ಧನುಶ್​ಗೆ ಛೀಮಾರಿ

ಧನುಶ್ ಅವರು ಮುಂಬರುವ 'ಇಡ್ಲಿ ಕಡಾಯಿ' ಚಿತ್ರ ಪ್ರಚಾರ ಮಾಡಿದ್ದಾರೆ. ಬಾಲ್ಯದಲ್ಲಿ ಇಡ್ಲಿ ಖರೀದಿಸಲು ಹೂವುಗಳನ್ನು ಮಾರಾಟ ಮಾಡುತ್ತಿದ್ದೆ ಎಂದು ಹೇಳಿದ್ದಾರೆ. ಆದರೆ, ಇದು ಸಿನಿಮಾ ಪ್ರಚಾರಕ್ಕಾಗಿ ಮಾಡಿದ ಉಪಾಯ ಎಂದು ಅನೇಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಧನುಶ್ ಅವರ ಬಾಲ್ಯದ ಬಡತನ ಮತ್ತು ಕಷ್ಟಗಳನ್ನು ಹಂಚಿಕೊಂಡಿದ್ದಾರೆ.

ಸಿನಿಮಾ ಪ್ರಚಾರಕ್ಕಾಗಿ ಇಷ್ಟು ಕೀಳು ಮಟ್ಟಕ್ಕೆ ಇಳಿಯಬಾರದು; ಧನುಶ್​ಗೆ ಛೀಮಾರಿ
ಧನುಶ್
ರಾಜೇಶ್ ದುಗ್ಗುಮನೆ
|

Updated on: Sep 16, 2025 | 7:17 AM

Share

ಸಿನಿಮಾ ಪ್ರಚಾರಕ್ಕಾಗಿ ನಟ-ನಟಿಯರು, ನಿರ್ದೇಶಕ-ನಿರ್ಮಾಪಕರು ಯಾವ ಹಂತಕ್ಕೆ ಬೇಕಿದ್ದರೂ ಹೋಗುತ್ತಾರೆ. ಕೆಲವೊಮ್ಮೆ ತಮ್ಮ ಜೀವನದಲ್ಲಿ ನಡೆಯದೇ ಇರುವ ಘಟನೆಯನ್ನು ನಡೆದಿದೆ ಎಂದು ಹೇಳಿ ಸಿಂಪತಿ ಗಿಟ್ಟಿಸಿಕೊಳ್ಳುತ್ತಾರೆ. ಈಗ ಧನುಶ್ (Dhanush) ಅವರು ಇದೇ ಟ್ರಿಕ್ ಬಳಸಿದರೇ ಎನ್ನುವ ಪ್ರಶ್ನೆ ಮೂಡಿದೆ. ಅವರು ಇಷ್ಟು ಕೀಳು ಮಟ್ಟಕ್ಕೆ ಇಳಿಯಬಾರದಿತ್ತು ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ.

ಇತ್ತೀಚೆಗೆ ಚೆನ್ನೈನಲ್ಲಿ ‘ಇಡ್ಲಿ ಕಡಾಯಿ’ ಸಿನಿಮಾದ ಈವೆಂಟ್ ನಡೆದಿದೆ. ಇದರಲ್ಲಿ ಧನುಶ್ ನಟಿಸಿದ್ದಾರೆ. ಇಡ್ಲಿ ಖರೀದಿ ಮಾಡಲು ಅವರು ಹೂ ಮಾರಾಟ ಮಾಡುತ್ತಿದ್ದಾಗಿ ಹೇಳಿದ್ದಾರೆ. ಅವರ ಹೇಳಿಕೆ ಬಗ್ಗೆ ಅನೇಕರು ಅನುಮಾನ ಹೊರಹಾಕಿದ್ದಾರೆ. ಸಿನಿಮಾ ಪ್ರಚಾರಕ್ಕಾಗಿ ಅವರು ಮಾಡಿರೋ ಟ್ರಿಕ್ ಇದು ಎಂದು ಅನೇಕರು ಹೇಳಿದ್ದಾರೆ.

‘ನಾನು ಬಾಲ್ಯದಲ್ಲಿ ಪ್ರತಿದಿನ ಇಡ್ಲಿ ತಿನ್ನಲು ಹಂಬಲಿಸುತ್ತಿದ್ದೆ. ಆದರೆ ನನಗೆ ಅವುಗಳನ್ನು ಖರೀದಿಸಲು ಹಣ ಇರುತ್ತಿರಲಿಲ್ಲ. ಹೀಗಾಗಿ, ನಾವು ಹೂವುಗಳನ್ನು ಸಂಗ್ರಹಿಸುತ್ತಿದ್ದೆವು. ನಾವು ಎಷ್ಟು ಹೂವನ್ನು ಸಂಗ್ರಹಿಸುತ್ತೇವೆ ಎಂಬುದರ ಆಧಾರದ ಮೇಲೆ ನಮಗೆ ಸಿಗೋ ಹಣ ನಿರ್ಧಾರ ಆಗುತ್ತಿತ್ತು. ನನ್ನ ಜೊತೆ ನನ್ನ ಸಹೋದರಿ, ಸೋದರಸಂಬಂಧಿಗಳು ಇದನ್ನು ಮಾಡುತ್ತಿದ್ದರು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
‘ಸು ಫ್ರಮ್ ಸೋ’ ಬಳಿಕ ಮತ್ತೊಂದು ಹಿಟ್ ಚಿತ್ರ; ‘ಏಳುಮಲೆ’ ಕಲೆಕ್ಷನ್ ಎಷ್ಟು?
Image
ರೇಣುಕಾಸ್ವಾಮಿ ಪತ್ನಿ ಸಹನಾಗೆ ಸಿಗಲಿದೆ ಸರ್ಕಾರಿ ಕೆಲಸ; ಶಾಸಕನ ಭರವಸೆ
Image
ಕಿರುತೆರೆ ನಟಿಯ ಪತಿ​ಗೆ ಕಾರು ಅಪಘಾತ; ಪ್ರಾಣಾಪಾಯದಿಂದ ಜಸ್ಟ್ ಮಿಸ್
Image
ಶರಣ್-ತರುಣ್ ಸುಧೀರ್ ಗೆಳೆತನ ಎಂಥದ್ದು? ಯಾರೂ ಊಹಿಸಲೂ ಸಾಧ್ಯವಿಲ್ಲ

‘ಈ ಕೆಲಸ ಮಾಡಿದ್ದಕ್ಕೆ ನಮಗೆ ತಲಾ 2 ರೂಪಾಯಿ ಸಿಗುತ್ತಿತ್ತು. ನಂತರ, ನಾವು ಸ್ಥಳೀಯ ಪಂಪ್ ಸೆಟ್‌ಗೆ ಹೋಗಿ ಸ್ನಾನ ಮಾಡುತ್ತಿದ್ದೆವು. ಮುಖ್ಯ ರಸ್ತೆಯಲ್ಲಿ ಕೇವಲ ಒಂದು ಟವಲ್‌ನೊಂದಿಗೆ ನಡೆಯುತ್ತಿದ್ದೆವು. ಆ ಹಣಕ್ಕೆ ನಮಗೆ ನಾಲ್ಕರಿಂದ ಐದು ಇಡ್ಲಿಗಳು ಸಿಗುತ್ತಿದ್ದವು. ಕಷ್ಟಪಟ್ಟು ದುಡಿದ ಹಣದಿಂದ ಆಹಾರ ತಿನ್ನುವಾಗ ಸಿಗುವ ತೃಪ್ತಿ ಮತ್ತು ರುಚಿಯನ್ನು ಯಾವುದೂ ಮೀರಿಸಲು ಸಾಧ್ಯವಿಲ್ಲ. ನನ್ನ ಬಾಲ್ಯದಲ್ಲಿ ಅನುಭವಿಸಿದ ಊಟದ ರುಚಿ ಈಗ ನನಗೆ ಸಿಗುತ್ತಿಲ್ಲ’ ಎಂದು ಧನುಶ್ ಹೇಳಿದ್ದಾರೆ.

ಇದನ್ನೂ ಓದಿ: ನೀರು ಕುಡಿಯುವಾಗ ಧನುಷ್​ ಬಗ್ಗೆ ಹೊಗಳಿಕೆ; ಎಲ್ಲವೂ ಮೂಗಲ್ಲೇ ಬಂತು

ಧನುಶ್ ಅವರು ಖ್ಯಾತ ನಿರ್ದೇಶಕ ಕಸ್ತೂರಿ ರಾಜ ಅವರ ಮಗ. ಹೀಗಾಗಿ, ಧನುಶ್ ಮಾತುಗಳ ಮೇಲೆ ಅನೇಕರು ಅನುಮಾನ ಹೊರಹಾಕಿದ್ದಾರೆ. ಕಸ್ತೂರಿ ರಾಜ ಅವರು ಧನುಶ್​ಗೆ ಹಣವನ್ನೇ ನೀಡುತ್ತಿರಲಿಲ್ಲವೇ? ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು ಇದು ಸಿಂಪತಿ ಗಳಿಸಿಕೊಳ್ಳೋ ಟ್ರಿಕ್ ಎಂದಿದ್ದಾರೆ. ಇನ್ನೂ ಕೆಲವರು ಧನುಶ್​ ಸ್ವಾಭಿಮಾನಿ ಅದಕ್ಕೆ ಈ ರೀತಿ ಮಾಡುತ್ತಿದ್ದರು ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!