AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿಗೆ ಧನ್ವೀರ್ ಹೊಸಸಿನಿಮಾ ಶೀರ್ಷಿಕೆ ಘೋಷಣೆ; ರಕ್ತಸಿಕ್ತ ಚಾಕು ಹಿಡಿದು ಬಂದ ‘ವಾಮನ’

ಕನ್ನಡ ಮತ್ತು ತೆಲುಗು ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆಗಿ ಕೆಲಸ ಮಾಡಿ ಅನುಭವ ಹೊಂದಿರುವ ಶಂಕರ್ ರಾಮನ್ ಅವರು ಧನ್ವೀರ್​ ನಟನೆಯ 3ನೇ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ.

ಸಂಕ್ರಾಂತಿಗೆ ಧನ್ವೀರ್ ಹೊಸಸಿನಿಮಾ ಶೀರ್ಷಿಕೆ ಘೋಷಣೆ; ರಕ್ತಸಿಕ್ತ ಚಾಕು ಹಿಡಿದು ಬಂದ ‘ವಾಮನ’
ಧನ್ವೀರ್​
TV9 Web
| Edited By: |

Updated on: Jan 14, 2022 | 4:38 PM

Share

ನಟ ಧನ್ವೀರ್ (Dhanveer)​ ಈಗತಾನೇ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಆದಾಗ್ಯೂ ಅವರಿಗೆ ಇರುವ ಅಭಿಮಾನಿ ಬಳಗ ಚಿಕ್ಕದೇನಲ್ಲ. ಈಗ ಸಂಕ್ರಾಂತಿ (Makara Sankranti 2022) ಪ್ರಯುಕ್ತ ಅವರ ಮೂರನೇ ಸಿನಿಮಾದ ಟೈಟಲ್​ ಹಾಗೂ ಫಸ್ಟ್​ ಲುಕ್​ ಪೋಸ್ಟರ್​ ಲಾಂಚ್​​ ಆಗಿದೆ. ಈ ಚಿತ್ರಕ್ಕೆ ‘ವಾಮನ’ (Vamana) ಎನ್ನುವ ಶೀರ್ಷಿಕೆ ಫೈನಲ್​ ಆಗಿದೆ. ಈ ಪೋಸ್ಟರ್​ ನೋಡಿ ಅವರ ಅಭಿಮಾನಿಗಳಲ್ಲಿ ಇದ್ದ ಕುತೂಹಲ ಹೆಚ್ಚಾಗಿದೆ. ಫಸ್ಟ್​ಲುಕ್​ ಪೋಸ್ಟರ್​ನಲ್ಲಿ ಧನ್ವೀರ್​ ಅವರು ಕೈನಲ್ಲಿ ಚಾಕು ಹಿಡಿದು ನಿಂತಿದ್ದಾರೆ. ಚಾಕು ಸಂಪೂರ್ಣವಾಗಿ ರಕ್ತಸಿಕ್ತವಾಗಿದೆ. ಈ ಮೂಲಕ ಸಿನಿಮಾದಲ್ಲಿ ರೌಡಿಸಂ, ರಕ್ತದ ಕಥೆಯನ್ನು ಹೇಳಲಾಗುತ್ತಿದೆ ಎಂಬುದನ್ನು ನಿರ್ದೇಶಕರು ಬಿಟ್ಟುಕೊಟ್ಟಿದ್ದಾರೆ.

ಈ ಚಿತ್ರಕ್ಕೆ ನಿರ್ದೇಶನ ಮಾಡುವವರು ಯಾರು ಎಂಬುದು ಕೂಡ ಬಹಿರಂಗ ಆಗಿದೆ. ಕನ್ನಡ ಮತ್ತು ತೆಲುಗು ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆಗಿ ಕೆಲಸ ಮಾಡಿ ಅನುಭವ ಹೊಂದಿರುವ ಶಂಕರ್ ರಾಮನ್ ಅವರು ಧನ್ವೀರ್​ ನಟನೆಯ 3ನೇ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಚಿತ್ರರಂಗದಲ್ಲಿ ಅವರದ್ದು 13 ವರ್ಷಗಳ ಅನುಭವ. ಈಗ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಧನ್ವೀರ್​ಗಾಗಿ ಶಂಕರ್ ರಾಮನ್ ಅವರು ಮಾಫಿಯಾ ಲೋಕದ ಕಥೆ ಸಿದ್ಧಪಡಿಸಿದ್ದಾರೆ. ಈ ಸಿನಿಮಾ ಮಾಸ್​ ಆಕ್ಷನ್ ಎಂಟರ್​ಟೇನರ್​ ಪ್ರಕಾರದಲ್ಲಿ ಮೂಡಿಬರಲಿದೆ.

‘ಬಜಾರ್​’ ಸಿನಿಮಾ ಮೂಲಕ ಧನ್ವೀರ್​ ಸ್ಯಾಂಡಲ್​ವುಡ್​ಗೆ ಕಾಲಿಟ್ಟರು. ಮೊದಲ ಸಿನಿಮಾದಲ್ಲಿಯೇ ಗಮನ ಸೆಳೆದರು. ಸದ್ಯ ಧನ್ವೀರ್​ ಗೌಡ ‘ಬೈ ಟು ಲವ್​’ ಸಿನಿಮಾದ ಬಿಡುಗಡೆಗಾಗಿ ಕಾದಿದ್ದಾರೆ. ಅದು ಅವರ 2ನೇ ಸಿನಿಮಾ. ಮೂರನೇ ಚಿತ್ರಕ್ಕಾಗಿ ಧನ್ವೀರ್​ ಅವರು ಒಂದಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಪಾತ್ರಕ್ಕಾಗಿ ತಯಾರಿ ನಡೆಯುತ್ತಿದೆ. ದೇಹವನ್ನು ಹುರಿಗೊಳಿಸಿಕೊಂಡು ಅವರು ಕ್ಯಾಮೆರಾ ಎದುರಿಸಲಿದ್ದಾರೆ. ಮೊದಲೆರಡು ಸಿನಿಮಾಗಳಿಗಿಂತಲೂ ಈ ಚಿತ್ರ ಭಿನ್ನವಾಗಿ ಇರಲಿದೆ ಎಂಬ ಭರವಸೆಯನ್ನು ಅವರು ನೀಡಿದ್ದಾರೆ. ಈ ಸಿನಿಮಾದಲ್ಲಿ ಬೇರೆ ಯಾವೆಲ್ಲ ಕಲಾವಿದರು ಇರಲಿದ್ದಾರೆ ಎಂಬುದು ಕೂಡ ಇನ್ನಷ್ಟೇ ತಿಳಿಯಬೇಕಿದೆ. ಜ.20ರಿಂದ ಈ ಚಿತ್ರಕ್ಕೆ ಶೂಟಿಂಗ್​ ಆರಂಭ ಆಗಲಿದೆ ಎಂಬ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: Samanvi Funeral: ಬೆಂಗಳೂರಿನಲ್ಲಿ ನೆರವೇರಿದ ಬಾಲನಟಿ ಸಮನ್ವಿ ಅಂತ್ಯಕ್ರಿಯೆ; ಮುಗಿಲುಮುಟ್ಟಿದ ಆಕ್ರಂದನ

ಸಮನ್ವಿಗೆ ಅಪ್ಪನ ಕೊನೆಯ ಮುತ್ತು; ಇಲ್ಲಿದೆ ಮನಕಲಕುವ ವಿಡಿಯೋ

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್‌ನ ಅಪರಾಧ ಚಟುವಟಿಕೆಗಳು
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್‌ನ ಅಪರಾಧ ಚಟುವಟಿಕೆಗಳು