ಸಂಕ್ರಾಂತಿಗೆ ಧನ್ವೀರ್ ಹೊಸಸಿನಿಮಾ ಶೀರ್ಷಿಕೆ ಘೋಷಣೆ; ರಕ್ತಸಿಕ್ತ ಚಾಕು ಹಿಡಿದು ಬಂದ ‘ವಾಮನ’

ಕನ್ನಡ ಮತ್ತು ತೆಲುಗು ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆಗಿ ಕೆಲಸ ಮಾಡಿ ಅನುಭವ ಹೊಂದಿರುವ ಶಂಕರ್ ರಾಮನ್ ಅವರು ಧನ್ವೀರ್​ ನಟನೆಯ 3ನೇ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ.

ಸಂಕ್ರಾಂತಿಗೆ ಧನ್ವೀರ್ ಹೊಸಸಿನಿಮಾ ಶೀರ್ಷಿಕೆ ಘೋಷಣೆ; ರಕ್ತಸಿಕ್ತ ಚಾಕು ಹಿಡಿದು ಬಂದ ‘ವಾಮನ’
ಧನ್ವೀರ್​
Follow us
| Updated By: ರಾಜೇಶ್ ದುಗ್ಗುಮನೆ

Updated on: Jan 14, 2022 | 4:38 PM

ನಟ ಧನ್ವೀರ್ (Dhanveer)​ ಈಗತಾನೇ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಆದಾಗ್ಯೂ ಅವರಿಗೆ ಇರುವ ಅಭಿಮಾನಿ ಬಳಗ ಚಿಕ್ಕದೇನಲ್ಲ. ಈಗ ಸಂಕ್ರಾಂತಿ (Makara Sankranti 2022) ಪ್ರಯುಕ್ತ ಅವರ ಮೂರನೇ ಸಿನಿಮಾದ ಟೈಟಲ್​ ಹಾಗೂ ಫಸ್ಟ್​ ಲುಕ್​ ಪೋಸ್ಟರ್​ ಲಾಂಚ್​​ ಆಗಿದೆ. ಈ ಚಿತ್ರಕ್ಕೆ ‘ವಾಮನ’ (Vamana) ಎನ್ನುವ ಶೀರ್ಷಿಕೆ ಫೈನಲ್​ ಆಗಿದೆ. ಈ ಪೋಸ್ಟರ್​ ನೋಡಿ ಅವರ ಅಭಿಮಾನಿಗಳಲ್ಲಿ ಇದ್ದ ಕುತೂಹಲ ಹೆಚ್ಚಾಗಿದೆ. ಫಸ್ಟ್​ಲುಕ್​ ಪೋಸ್ಟರ್​ನಲ್ಲಿ ಧನ್ವೀರ್​ ಅವರು ಕೈನಲ್ಲಿ ಚಾಕು ಹಿಡಿದು ನಿಂತಿದ್ದಾರೆ. ಚಾಕು ಸಂಪೂರ್ಣವಾಗಿ ರಕ್ತಸಿಕ್ತವಾಗಿದೆ. ಈ ಮೂಲಕ ಸಿನಿಮಾದಲ್ಲಿ ರೌಡಿಸಂ, ರಕ್ತದ ಕಥೆಯನ್ನು ಹೇಳಲಾಗುತ್ತಿದೆ ಎಂಬುದನ್ನು ನಿರ್ದೇಶಕರು ಬಿಟ್ಟುಕೊಟ್ಟಿದ್ದಾರೆ.

ಈ ಚಿತ್ರಕ್ಕೆ ನಿರ್ದೇಶನ ಮಾಡುವವರು ಯಾರು ಎಂಬುದು ಕೂಡ ಬಹಿರಂಗ ಆಗಿದೆ. ಕನ್ನಡ ಮತ್ತು ತೆಲುಗು ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆಗಿ ಕೆಲಸ ಮಾಡಿ ಅನುಭವ ಹೊಂದಿರುವ ಶಂಕರ್ ರಾಮನ್ ಅವರು ಧನ್ವೀರ್​ ನಟನೆಯ 3ನೇ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಚಿತ್ರರಂಗದಲ್ಲಿ ಅವರದ್ದು 13 ವರ್ಷಗಳ ಅನುಭವ. ಈಗ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಧನ್ವೀರ್​ಗಾಗಿ ಶಂಕರ್ ರಾಮನ್ ಅವರು ಮಾಫಿಯಾ ಲೋಕದ ಕಥೆ ಸಿದ್ಧಪಡಿಸಿದ್ದಾರೆ. ಈ ಸಿನಿಮಾ ಮಾಸ್​ ಆಕ್ಷನ್ ಎಂಟರ್​ಟೇನರ್​ ಪ್ರಕಾರದಲ್ಲಿ ಮೂಡಿಬರಲಿದೆ.

‘ಬಜಾರ್​’ ಸಿನಿಮಾ ಮೂಲಕ ಧನ್ವೀರ್​ ಸ್ಯಾಂಡಲ್​ವುಡ್​ಗೆ ಕಾಲಿಟ್ಟರು. ಮೊದಲ ಸಿನಿಮಾದಲ್ಲಿಯೇ ಗಮನ ಸೆಳೆದರು. ಸದ್ಯ ಧನ್ವೀರ್​ ಗೌಡ ‘ಬೈ ಟು ಲವ್​’ ಸಿನಿಮಾದ ಬಿಡುಗಡೆಗಾಗಿ ಕಾದಿದ್ದಾರೆ. ಅದು ಅವರ 2ನೇ ಸಿನಿಮಾ. ಮೂರನೇ ಚಿತ್ರಕ್ಕಾಗಿ ಧನ್ವೀರ್​ ಅವರು ಒಂದಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಪಾತ್ರಕ್ಕಾಗಿ ತಯಾರಿ ನಡೆಯುತ್ತಿದೆ. ದೇಹವನ್ನು ಹುರಿಗೊಳಿಸಿಕೊಂಡು ಅವರು ಕ್ಯಾಮೆರಾ ಎದುರಿಸಲಿದ್ದಾರೆ. ಮೊದಲೆರಡು ಸಿನಿಮಾಗಳಿಗಿಂತಲೂ ಈ ಚಿತ್ರ ಭಿನ್ನವಾಗಿ ಇರಲಿದೆ ಎಂಬ ಭರವಸೆಯನ್ನು ಅವರು ನೀಡಿದ್ದಾರೆ. ಈ ಸಿನಿಮಾದಲ್ಲಿ ಬೇರೆ ಯಾವೆಲ್ಲ ಕಲಾವಿದರು ಇರಲಿದ್ದಾರೆ ಎಂಬುದು ಕೂಡ ಇನ್ನಷ್ಟೇ ತಿಳಿಯಬೇಕಿದೆ. ಜ.20ರಿಂದ ಈ ಚಿತ್ರಕ್ಕೆ ಶೂಟಿಂಗ್​ ಆರಂಭ ಆಗಲಿದೆ ಎಂಬ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: Samanvi Funeral: ಬೆಂಗಳೂರಿನಲ್ಲಿ ನೆರವೇರಿದ ಬಾಲನಟಿ ಸಮನ್ವಿ ಅಂತ್ಯಕ್ರಿಯೆ; ಮುಗಿಲುಮುಟ್ಟಿದ ಆಕ್ರಂದನ

ಸಮನ್ವಿಗೆ ಅಪ್ಪನ ಕೊನೆಯ ಮುತ್ತು; ಇಲ್ಲಿದೆ ಮನಕಲಕುವ ವಿಡಿಯೋ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ