AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿಗೆ ಧನ್ವೀರ್ ಹೊಸಸಿನಿಮಾ ಶೀರ್ಷಿಕೆ ಘೋಷಣೆ; ರಕ್ತಸಿಕ್ತ ಚಾಕು ಹಿಡಿದು ಬಂದ ‘ವಾಮನ’

ಕನ್ನಡ ಮತ್ತು ತೆಲುಗು ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆಗಿ ಕೆಲಸ ಮಾಡಿ ಅನುಭವ ಹೊಂದಿರುವ ಶಂಕರ್ ರಾಮನ್ ಅವರು ಧನ್ವೀರ್​ ನಟನೆಯ 3ನೇ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ.

ಸಂಕ್ರಾಂತಿಗೆ ಧನ್ವೀರ್ ಹೊಸಸಿನಿಮಾ ಶೀರ್ಷಿಕೆ ಘೋಷಣೆ; ರಕ್ತಸಿಕ್ತ ಚಾಕು ಹಿಡಿದು ಬಂದ ‘ವಾಮನ’
ಧನ್ವೀರ್​
TV9 Web
| Edited By: |

Updated on: Jan 14, 2022 | 4:38 PM

Share

ನಟ ಧನ್ವೀರ್ (Dhanveer)​ ಈಗತಾನೇ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಆದಾಗ್ಯೂ ಅವರಿಗೆ ಇರುವ ಅಭಿಮಾನಿ ಬಳಗ ಚಿಕ್ಕದೇನಲ್ಲ. ಈಗ ಸಂಕ್ರಾಂತಿ (Makara Sankranti 2022) ಪ್ರಯುಕ್ತ ಅವರ ಮೂರನೇ ಸಿನಿಮಾದ ಟೈಟಲ್​ ಹಾಗೂ ಫಸ್ಟ್​ ಲುಕ್​ ಪೋಸ್ಟರ್​ ಲಾಂಚ್​​ ಆಗಿದೆ. ಈ ಚಿತ್ರಕ್ಕೆ ‘ವಾಮನ’ (Vamana) ಎನ್ನುವ ಶೀರ್ಷಿಕೆ ಫೈನಲ್​ ಆಗಿದೆ. ಈ ಪೋಸ್ಟರ್​ ನೋಡಿ ಅವರ ಅಭಿಮಾನಿಗಳಲ್ಲಿ ಇದ್ದ ಕುತೂಹಲ ಹೆಚ್ಚಾಗಿದೆ. ಫಸ್ಟ್​ಲುಕ್​ ಪೋಸ್ಟರ್​ನಲ್ಲಿ ಧನ್ವೀರ್​ ಅವರು ಕೈನಲ್ಲಿ ಚಾಕು ಹಿಡಿದು ನಿಂತಿದ್ದಾರೆ. ಚಾಕು ಸಂಪೂರ್ಣವಾಗಿ ರಕ್ತಸಿಕ್ತವಾಗಿದೆ. ಈ ಮೂಲಕ ಸಿನಿಮಾದಲ್ಲಿ ರೌಡಿಸಂ, ರಕ್ತದ ಕಥೆಯನ್ನು ಹೇಳಲಾಗುತ್ತಿದೆ ಎಂಬುದನ್ನು ನಿರ್ದೇಶಕರು ಬಿಟ್ಟುಕೊಟ್ಟಿದ್ದಾರೆ.

ಈ ಚಿತ್ರಕ್ಕೆ ನಿರ್ದೇಶನ ಮಾಡುವವರು ಯಾರು ಎಂಬುದು ಕೂಡ ಬಹಿರಂಗ ಆಗಿದೆ. ಕನ್ನಡ ಮತ್ತು ತೆಲುಗು ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆಗಿ ಕೆಲಸ ಮಾಡಿ ಅನುಭವ ಹೊಂದಿರುವ ಶಂಕರ್ ರಾಮನ್ ಅವರು ಧನ್ವೀರ್​ ನಟನೆಯ 3ನೇ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಚಿತ್ರರಂಗದಲ್ಲಿ ಅವರದ್ದು 13 ವರ್ಷಗಳ ಅನುಭವ. ಈಗ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಧನ್ವೀರ್​ಗಾಗಿ ಶಂಕರ್ ರಾಮನ್ ಅವರು ಮಾಫಿಯಾ ಲೋಕದ ಕಥೆ ಸಿದ್ಧಪಡಿಸಿದ್ದಾರೆ. ಈ ಸಿನಿಮಾ ಮಾಸ್​ ಆಕ್ಷನ್ ಎಂಟರ್​ಟೇನರ್​ ಪ್ರಕಾರದಲ್ಲಿ ಮೂಡಿಬರಲಿದೆ.

‘ಬಜಾರ್​’ ಸಿನಿಮಾ ಮೂಲಕ ಧನ್ವೀರ್​ ಸ್ಯಾಂಡಲ್​ವುಡ್​ಗೆ ಕಾಲಿಟ್ಟರು. ಮೊದಲ ಸಿನಿಮಾದಲ್ಲಿಯೇ ಗಮನ ಸೆಳೆದರು. ಸದ್ಯ ಧನ್ವೀರ್​ ಗೌಡ ‘ಬೈ ಟು ಲವ್​’ ಸಿನಿಮಾದ ಬಿಡುಗಡೆಗಾಗಿ ಕಾದಿದ್ದಾರೆ. ಅದು ಅವರ 2ನೇ ಸಿನಿಮಾ. ಮೂರನೇ ಚಿತ್ರಕ್ಕಾಗಿ ಧನ್ವೀರ್​ ಅವರು ಒಂದಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಪಾತ್ರಕ್ಕಾಗಿ ತಯಾರಿ ನಡೆಯುತ್ತಿದೆ. ದೇಹವನ್ನು ಹುರಿಗೊಳಿಸಿಕೊಂಡು ಅವರು ಕ್ಯಾಮೆರಾ ಎದುರಿಸಲಿದ್ದಾರೆ. ಮೊದಲೆರಡು ಸಿನಿಮಾಗಳಿಗಿಂತಲೂ ಈ ಚಿತ್ರ ಭಿನ್ನವಾಗಿ ಇರಲಿದೆ ಎಂಬ ಭರವಸೆಯನ್ನು ಅವರು ನೀಡಿದ್ದಾರೆ. ಈ ಸಿನಿಮಾದಲ್ಲಿ ಬೇರೆ ಯಾವೆಲ್ಲ ಕಲಾವಿದರು ಇರಲಿದ್ದಾರೆ ಎಂಬುದು ಕೂಡ ಇನ್ನಷ್ಟೇ ತಿಳಿಯಬೇಕಿದೆ. ಜ.20ರಿಂದ ಈ ಚಿತ್ರಕ್ಕೆ ಶೂಟಿಂಗ್​ ಆರಂಭ ಆಗಲಿದೆ ಎಂಬ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: Samanvi Funeral: ಬೆಂಗಳೂರಿನಲ್ಲಿ ನೆರವೇರಿದ ಬಾಲನಟಿ ಸಮನ್ವಿ ಅಂತ್ಯಕ್ರಿಯೆ; ಮುಗಿಲುಮುಟ್ಟಿದ ಆಕ್ರಂದನ

ಸಮನ್ವಿಗೆ ಅಪ್ಪನ ಕೊನೆಯ ಮುತ್ತು; ಇಲ್ಲಿದೆ ಮನಕಲಕುವ ವಿಡಿಯೋ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ