AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಬರ್ದಸ್ತ್​ ಎಂಟ್ರಿ ನೀಡಿದ ‘ವಾಮನ’; ಸಿಕ್ಕಾಪಟ್ಟೆ ಮಾಸ್​ ಅವತಾರದಲ್ಲಿ ಧನ್ವೀರ್​ ಮಿಂಚಿಂಗ್​

Vaamana Movie Teaser: ‘ವಾಮನ’ ಟೀಸರ್​ ಮೂಡಿಬಂದಿರುವ ರೀತಿಗೆ ಮಾಸ್​ ಪ್ರೇಕ್ಷಕರು ಫಿದಾ ಆಗಿದ್ದಾರೆ. ಪಂಚಿಂಗ್ ಡೈಲಾಗ್ ಹೊಡೆಯುತ್ತಾ ಧನ್ವೀರ್ ಗೌಡ ಎಂಟ್ರಿ ನೀಡಿದ್ದಾರೆ.

ಜಬರ್ದಸ್ತ್​ ಎಂಟ್ರಿ ನೀಡಿದ ‘ವಾಮನ’; ಸಿಕ್ಕಾಪಟ್ಟೆ ಮಾಸ್​ ಅವತಾರದಲ್ಲಿ ಧನ್ವೀರ್​ ಮಿಂಚಿಂಗ್​
ಧನ್ವೀರ್ ಗೌಡ
TV9 Web
| Updated By: ಮದನ್​ ಕುಮಾರ್​|

Updated on: Aug 16, 2022 | 7:15 AM

Share

ಕನ್ನಡ ಚಿತ್ರರಂಗದಲ್ಲಿ ‘ಶೋಕ್ದಾರ್’ ಎಂದೇ ಫೇಮಸ್​ ಆಗಿರುವ ನಟ ಧನ್ವೀರ್ ಗೌಡ (Dhanveer Gowda) ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸುತ್ತಿರುವ ‘ವಾಮನ’ ಚಿತ್ರ (Vaamana Kannada Movie) ಸಖತ್​ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಿಂದ ಈಗೊಂದು ಟೀಸರ್ ಬಿಡುಗಡೆ ಮಾಡಲಾಗಿದೆ. ಜಬರ್ದಸ್ತ್ ಆಗಿ ಮೂಡಿಬಂದಿರುವ ಈ ಟೀಸರ್​ನಲ್ಲಿ ಧನ್ವೀರ್ ಅವರು ಪಕ್ಕಾ ಮಾಸ್ ಅವತಾರ ತಾಳಿದ್ದಾರೆ. ಹಲವು ಕಾರಣಗಳಿಂದ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಅದ್ದೂರಿ ವೆಚ್ಚದಲ್ಲಿ ನಿರ್ಮಾಣವಾದ ಸೆಟ್, ಮೈ ನವಿರೇಳಿಸುವಂತಹ ಸಾಹಸ ದೃಶ್ಯಗಳು ಹೈಲೈಟ್​ ಆಗುತ್ತಿವೆ. ಅಷ್ಟೇ ಅಲ್ಲದೇ, ಧನ್ವೀರ್ ಗೌಡ ಅವರ ಹೊಸ ಗೆಟಪ್, ಕಿಕ್​ ನೀಡುವಂತಹ ಹಿನ್ನೆಲೆ ಸಂಗೀತ, ಅದ್ದೂರಿ ಮೇಕಿಂಗ್​ ಮುಂತಾದ ಅಂಶಗಳಿಂದಾಗಿ ‘ವಾಮನ’ ಟೀಸರ್ ‘ವಾಮನ’ ಚಿತ್ರ (Vaamana Teaser) ಸದ್ದು ಮಾಡುತ್ತಿದೆ.

‘ವಾಮನ’ ಟೀಸರ್​ ಮೂಡಿಬಂದಿರುವ ರೀತಿಗೆ ಮಾಸ್​ ಪ್ರೇಕ್ಷಕರು ಫಿದಾ ಆಗಿದ್ದಾರೆ. ಪಂಚಿಂಗ್ ಡೈಲಾಗ್ ಹೊಡೆಯುತ್ತಾ ಎಂಟ್ರಿ ಕೊಡುವ ಧನ್ವೀರ್ ಅವರು ಗುಣ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 1.50 ನಿಮಿಷ ಇರುವ ‘ವಾಮನ’ ಟೀಸರ್ ಯೂಟ್ಯೂಬ್​ನಲ್ಲಿ ಧೂಳೆಬ್ಬಿಸುತ್ತಿದೆ. ಶಂಕರ್ ರಾಮನ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಧನ್ವೀರ್ ಗೌಡ ಅವರಿಗೆ ಜೋಡಿಯಾಗಿ ‘ಏಕ್ ಲವ್ ಯಾ’ ಖ್ಯಾತಿಯ ನಟಿ ರೀಷ್ಮಾ ನಾಣಯ್ಯ ಅಭಿನಯಿಸುತ್ತಿದ್ದಾರೆ. ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಈಗಾಗಲೇ ಶೇ. 70ರಷ್ಟು ಶೂಟಿಂಗ್ ಮಾಡಿರುವ ಚಿತ್ರತಂಡ, ಬಾಕಿ ಉಳಿದ ಭಾಗದ ಚಿತ್ರೀಕರಣದಲ್ಲಿ ನಿರತವಾಗಿದೆ. ರಿಯಲ್ ಎಸ್ಟೇಟ್ ಉದ್ಯಮಿ ಆಗಿರುವ ಚೇತನ್ ಕುಮಾರ್ ಅವರು ‘ಈಕ್ವಿನಾಕ್ಸ್ ಗ್ಲೋಬಲ್ ಎಂಟರ್​ಟೈನ್ಮೆಂಟ್’ ಬ್ಯಾನರ್​ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
Har Ghar Tiranga: ಚಿತ್ರಮಂದಿರದ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ‘ಗೋಲ್ಡನ್​ ಸ್ಟಾರ್​’ ಗಣೇಶ್​
Image
Aamir Khan: ಆಮಿ​ರ್​ ಖಾನ್​ ಮನೆ ಮೇಲೆ ಹಾರಾಡಿದ ರಾಷ್ಟ್ರ ಧ್ವಜ; ಫೋಟೋ ವೈರಲ್​
Image
ಸುದೀಪ್​, ಉಪ್ಪಿ, ತಾರಾ, ರಮೇಶ್​ ಮನೆ ಮೇಲೆ ತ್ರಿವರ್ಣ ಧ್ವಜ; ಇಲ್ಲಿದೆ ಫೋಟೋ ಗ್ಯಾಲರಿ
Image
‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಯಶ್ ಸಾಥ್​; ಫ್ಯಾನ್ಸ್ ಬಳಿ ರಾಕಿಂಗ್ ಸ್ಟಾರ್ ಹೊಸ ಕೋರಿಕೆ

ಇದು ಪಕ್ಕಾ ಸಾಹಸ ಪ್ರಧಾನ ಸಿನಿಮಾ ಎಂಬುದು ಟೀಸರ್ ನೋಡಿದರೆ ತಿಳಿಯುತ್ತದೆ. ಅದರ ಜೊತೆ ​ಲವ್ ಸ್ಟೋರಿ ಕೂಡ ಇರಲಿದೆ. ಸಖತ್​ ಕಮರ್ಷಿಯಲ್ ಆಗಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಖಳನಾಯಕನಾಗಿ ಸಂಪತ್ ನಟಿಸುತ್ತಿದ್ದಾರೆ. ಅಚ್ಯುತ್ ಕುಮಾರ್, ತಾರಾ ಅನುರಾಧ, ಶಿವರಾಜ್ ಕೆ.ಆರ್. ಪೇಟೆ, ಕಾಕ್ರೋಚ್ ಸುಧಿ ಸೇರಿದಂತೆ ಅನೇಕ ಖ್ಯಾತ ನಟ-ನಟಿಯರು ಈ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಅಜನೀಶ್ ಬಿ. ಲೋಕನಾಥ್ ಸಂಗೀತ ನಿರ್ದೇಶನ, ಮಹೇನ್ ಸಿಂಹ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ