AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ

‘ನಿನ್ನ ಸನಿಹಕೆ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಧನ್ಯಾ ರಾಮ್​ಕುಮಾರ್ ಕಾಲಿಟ್ಟರು. ಆ ಬಳಿಕ ‘ಹೈಡ್ ಆ್ಯಂಡ್ ಸೀಕ್’ ಸಿನಿಮಾದಲ್ಲಿ ನಟಿಸಿದರು. ಈ ವರ್ಷ ಬಿಡುಗಡೆ ಆದ ‘ದಿ ಜಡ್ಜ್​ಮೆಂಟ್’ ಚಿತ್ರದಲ್ಲೂ ಅವರು ನಟಿಸಿದ್ದಾರೆ. ಈಗ ಪೃಥ್ವಿ ಅಂಬಾರ್ ನಟನೆಯ ‘ಚೌಕಿದಾರ್’ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ನಾಯಕಿ ಆಗಿ ಬಣ್ಣ ಹಚ್ಚುತ್ತಿದ್ದಾರೆ.

ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ
ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ
ರಾಜೇಶ್ ದುಗ್ಗುಮನೆ
|

Updated on:Jun 28, 2024 | 10:10 AM

Share

ನಟಿ ಧನ್ಯಾ ರಾಮ್​ಕುಮಾರ್ ಅವರು ಇತ್ತೀಚೆಗೆ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈಗ ಅವರಿಗೆ ಹೊಸ ಆಫರ್ ಸಿಕ್ಕಿದೆ. ‘ರಥಾವರ’ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ಅವರು ‘ಚೌಕಿದಾರ್’ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಪೃಥ್ವಿ ಅಂಬಾರ್ ಅವರು ನಟಿಸುತ್ತಿದ್ದು, ಧನ್ಯರಾಮ್ ಕುಮಾರ್ ಜೋಡಿಯಾಗಿದ್ದಾರೆ. ಈ ವಿಚಾರ ಕೇಳಿ ಧನ್ಯಾ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

‘ನಿನ್ನ ಸನಿಹಕೆ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ಧನ್ಯಾ ರಾಮ್​ಕುಮಾರ್. ಆ ಬಳಿಕ ‘ಹೈಡ್ ಆ್ಯಂಡ್ ಸೀಕ್’ ಸಿನಿಮಾದಲ್ಲಿ ನಟಿಸಿದರು. ಈ ವರ್ಷ ಬಿಡುಗಡೆ ಆದ ‘ದಿ ಜಡ್ಜ್​ಮೆಂಟ್’ ಚಿತ್ರದಲ್ಲೂ ಅವರು ಬಣ್ಣ ಹಚ್ಚಿದರು. ಈಗ ಪೃಥ್ವಿ ಅಂಬಾರ್ ನಟನೆಯ ‘ಚೌಕಿದಾರ್’ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ಹೀರೋಯಿನ್ ಆಗಿ ಬಣ್ಣ ಹಚ್ಚುತ್ತಿದ್ದಾರೆ.

‘ಚೌಕಿದಾರ್’ ಕೇವಲ ಕನ್ನಡ ಮಾತ್ರವಲ್ಲದೆ ಬಹುಭಾಷೆಯಲ್ಲಿ ಸಿದ್ಧವಾಗುತ್ತಿದೆ. ಈವರೆಗೆ ಸಿನಿಮಾಗಳಲ್ಲಿ ಲವರ್‌ ಬಾಯ್‌ ಆಗಿ ಪೃಥ್ವಿ ಅಂಬಾರ್‌ ನಟಿಸಿದ್ದರು. ಈ ಬಾರಿ ಅವರು ಆ್ಯಕ್ಷನ್ ಸಿನಿಮಾಗಳ ಮೂಲಕ ರಂಜಿಸಲು ರೆಡಿ ಆಗಿದ್ದಾರೆ. ಇದು ಕಂಪ್ಲೀಟ್ ಆ್ಯಕ್ಷನ್ ಸಿನಿಮಾವಲ್ಲ. ಫ್ಯಾಮಿಲಿ ಎಂಟರ್ ಟೈನರ್ ವಿಚಾರಗಳೂ ಚಿತ್ರದಲ್ಲಿ ಇವೆ.

ಇದನ್ನೂ ಓದಿ: ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್​ ಹೊಸ ಸಿನಿಮಾ ‘ಜೂನಿ’: ಹೇಗಿದೆ ನೋಡಿ ಫಸ್ಟ್​ ಲುಕ್​

ಡಾ. ಕಲ್ಲಹಳ್ಳಿ ಚಂದ್ರಶೇಖರ್ ಚೌಕಿದಾರ್ ‘ವಿದ್ಯಾ ಶೇಖರ್ ಎಂಟರ್​ಟೇನ್​ಮೆಂಟ್’ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸಚಿನ್‌ ಬಸ್ರೂರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಜುಲೈ ಮೂರರಂದು ಬೆಂಗಳೂರಿನ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ‘ಚೌಕಿದಾರ್’ ಸಿನಿಮಾ ಮುಹೂರ್ತ ನೆರವೇರಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:00 am, Fri, 28 June 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!