AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ

‘ನಿನ್ನ ಸನಿಹಕೆ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಧನ್ಯಾ ರಾಮ್​ಕುಮಾರ್ ಕಾಲಿಟ್ಟರು. ಆ ಬಳಿಕ ‘ಹೈಡ್ ಆ್ಯಂಡ್ ಸೀಕ್’ ಸಿನಿಮಾದಲ್ಲಿ ನಟಿಸಿದರು. ಈ ವರ್ಷ ಬಿಡುಗಡೆ ಆದ ‘ದಿ ಜಡ್ಜ್​ಮೆಂಟ್’ ಚಿತ್ರದಲ್ಲೂ ಅವರು ನಟಿಸಿದ್ದಾರೆ. ಈಗ ಪೃಥ್ವಿ ಅಂಬಾರ್ ನಟನೆಯ ‘ಚೌಕಿದಾರ್’ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ನಾಯಕಿ ಆಗಿ ಬಣ್ಣ ಹಚ್ಚುತ್ತಿದ್ದಾರೆ.

ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ
ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ
ರಾಜೇಶ್ ದುಗ್ಗುಮನೆ
|

Updated on:Jun 28, 2024 | 10:10 AM

Share

ನಟಿ ಧನ್ಯಾ ರಾಮ್​ಕುಮಾರ್ ಅವರು ಇತ್ತೀಚೆಗೆ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈಗ ಅವರಿಗೆ ಹೊಸ ಆಫರ್ ಸಿಕ್ಕಿದೆ. ‘ರಥಾವರ’ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ಅವರು ‘ಚೌಕಿದಾರ್’ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಪೃಥ್ವಿ ಅಂಬಾರ್ ಅವರು ನಟಿಸುತ್ತಿದ್ದು, ಧನ್ಯರಾಮ್ ಕುಮಾರ್ ಜೋಡಿಯಾಗಿದ್ದಾರೆ. ಈ ವಿಚಾರ ಕೇಳಿ ಧನ್ಯಾ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

‘ನಿನ್ನ ಸನಿಹಕೆ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ಧನ್ಯಾ ರಾಮ್​ಕುಮಾರ್. ಆ ಬಳಿಕ ‘ಹೈಡ್ ಆ್ಯಂಡ್ ಸೀಕ್’ ಸಿನಿಮಾದಲ್ಲಿ ನಟಿಸಿದರು. ಈ ವರ್ಷ ಬಿಡುಗಡೆ ಆದ ‘ದಿ ಜಡ್ಜ್​ಮೆಂಟ್’ ಚಿತ್ರದಲ್ಲೂ ಅವರು ಬಣ್ಣ ಹಚ್ಚಿದರು. ಈಗ ಪೃಥ್ವಿ ಅಂಬಾರ್ ನಟನೆಯ ‘ಚೌಕಿದಾರ್’ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ಹೀರೋಯಿನ್ ಆಗಿ ಬಣ್ಣ ಹಚ್ಚುತ್ತಿದ್ದಾರೆ.

‘ಚೌಕಿದಾರ್’ ಕೇವಲ ಕನ್ನಡ ಮಾತ್ರವಲ್ಲದೆ ಬಹುಭಾಷೆಯಲ್ಲಿ ಸಿದ್ಧವಾಗುತ್ತಿದೆ. ಈವರೆಗೆ ಸಿನಿಮಾಗಳಲ್ಲಿ ಲವರ್‌ ಬಾಯ್‌ ಆಗಿ ಪೃಥ್ವಿ ಅಂಬಾರ್‌ ನಟಿಸಿದ್ದರು. ಈ ಬಾರಿ ಅವರು ಆ್ಯಕ್ಷನ್ ಸಿನಿಮಾಗಳ ಮೂಲಕ ರಂಜಿಸಲು ರೆಡಿ ಆಗಿದ್ದಾರೆ. ಇದು ಕಂಪ್ಲೀಟ್ ಆ್ಯಕ್ಷನ್ ಸಿನಿಮಾವಲ್ಲ. ಫ್ಯಾಮಿಲಿ ಎಂಟರ್ ಟೈನರ್ ವಿಚಾರಗಳೂ ಚಿತ್ರದಲ್ಲಿ ಇವೆ.

ಇದನ್ನೂ ಓದಿ: ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್​ ಹೊಸ ಸಿನಿಮಾ ‘ಜೂನಿ’: ಹೇಗಿದೆ ನೋಡಿ ಫಸ್ಟ್​ ಲುಕ್​

ಡಾ. ಕಲ್ಲಹಳ್ಳಿ ಚಂದ್ರಶೇಖರ್ ಚೌಕಿದಾರ್ ‘ವಿದ್ಯಾ ಶೇಖರ್ ಎಂಟರ್​ಟೇನ್​ಮೆಂಟ್’ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸಚಿನ್‌ ಬಸ್ರೂರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಜುಲೈ ಮೂರರಂದು ಬೆಂಗಳೂರಿನ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ‘ಚೌಕಿದಾರ್’ ಸಿನಿಮಾ ಮುಹೂರ್ತ ನೆರವೇರಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:00 am, Fri, 28 June 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ