AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ

‘ನಿನ್ನ ಸನಿಹಕೆ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಧನ್ಯಾ ರಾಮ್​ಕುಮಾರ್ ಕಾಲಿಟ್ಟರು. ಆ ಬಳಿಕ ‘ಹೈಡ್ ಆ್ಯಂಡ್ ಸೀಕ್’ ಸಿನಿಮಾದಲ್ಲಿ ನಟಿಸಿದರು. ಈ ವರ್ಷ ಬಿಡುಗಡೆ ಆದ ‘ದಿ ಜಡ್ಜ್​ಮೆಂಟ್’ ಚಿತ್ರದಲ್ಲೂ ಅವರು ನಟಿಸಿದ್ದಾರೆ. ಈಗ ಪೃಥ್ವಿ ಅಂಬಾರ್ ನಟನೆಯ ‘ಚೌಕಿದಾರ್’ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ನಾಯಕಿ ಆಗಿ ಬಣ್ಣ ಹಚ್ಚುತ್ತಿದ್ದಾರೆ.

ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ
ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ
ರಾಜೇಶ್ ದುಗ್ಗುಮನೆ
|

Updated on:Jun 28, 2024 | 10:10 AM

Share

ನಟಿ ಧನ್ಯಾ ರಾಮ್​ಕುಮಾರ್ ಅವರು ಇತ್ತೀಚೆಗೆ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈಗ ಅವರಿಗೆ ಹೊಸ ಆಫರ್ ಸಿಕ್ಕಿದೆ. ‘ರಥಾವರ’ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ಅವರು ‘ಚೌಕಿದಾರ್’ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಪೃಥ್ವಿ ಅಂಬಾರ್ ಅವರು ನಟಿಸುತ್ತಿದ್ದು, ಧನ್ಯರಾಮ್ ಕುಮಾರ್ ಜೋಡಿಯಾಗಿದ್ದಾರೆ. ಈ ವಿಚಾರ ಕೇಳಿ ಧನ್ಯಾ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

‘ನಿನ್ನ ಸನಿಹಕೆ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ಧನ್ಯಾ ರಾಮ್​ಕುಮಾರ್. ಆ ಬಳಿಕ ‘ಹೈಡ್ ಆ್ಯಂಡ್ ಸೀಕ್’ ಸಿನಿಮಾದಲ್ಲಿ ನಟಿಸಿದರು. ಈ ವರ್ಷ ಬಿಡುಗಡೆ ಆದ ‘ದಿ ಜಡ್ಜ್​ಮೆಂಟ್’ ಚಿತ್ರದಲ್ಲೂ ಅವರು ಬಣ್ಣ ಹಚ್ಚಿದರು. ಈಗ ಪೃಥ್ವಿ ಅಂಬಾರ್ ನಟನೆಯ ‘ಚೌಕಿದಾರ್’ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ಹೀರೋಯಿನ್ ಆಗಿ ಬಣ್ಣ ಹಚ್ಚುತ್ತಿದ್ದಾರೆ.

‘ಚೌಕಿದಾರ್’ ಕೇವಲ ಕನ್ನಡ ಮಾತ್ರವಲ್ಲದೆ ಬಹುಭಾಷೆಯಲ್ಲಿ ಸಿದ್ಧವಾಗುತ್ತಿದೆ. ಈವರೆಗೆ ಸಿನಿಮಾಗಳಲ್ಲಿ ಲವರ್‌ ಬಾಯ್‌ ಆಗಿ ಪೃಥ್ವಿ ಅಂಬಾರ್‌ ನಟಿಸಿದ್ದರು. ಈ ಬಾರಿ ಅವರು ಆ್ಯಕ್ಷನ್ ಸಿನಿಮಾಗಳ ಮೂಲಕ ರಂಜಿಸಲು ರೆಡಿ ಆಗಿದ್ದಾರೆ. ಇದು ಕಂಪ್ಲೀಟ್ ಆ್ಯಕ್ಷನ್ ಸಿನಿಮಾವಲ್ಲ. ಫ್ಯಾಮಿಲಿ ಎಂಟರ್ ಟೈನರ್ ವಿಚಾರಗಳೂ ಚಿತ್ರದಲ್ಲಿ ಇವೆ.

ಇದನ್ನೂ ಓದಿ: ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್​ ಹೊಸ ಸಿನಿಮಾ ‘ಜೂನಿ’: ಹೇಗಿದೆ ನೋಡಿ ಫಸ್ಟ್​ ಲುಕ್​

ಡಾ. ಕಲ್ಲಹಳ್ಳಿ ಚಂದ್ರಶೇಖರ್ ಚೌಕಿದಾರ್ ‘ವಿದ್ಯಾ ಶೇಖರ್ ಎಂಟರ್​ಟೇನ್​ಮೆಂಟ್’ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸಚಿನ್‌ ಬಸ್ರೂರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಜುಲೈ ಮೂರರಂದು ಬೆಂಗಳೂರಿನ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ‘ಚೌಕಿದಾರ್’ ಸಿನಿಮಾ ಮುಹೂರ್ತ ನೆರವೇರಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:00 am, Fri, 28 June 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?