AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ

‘ನಿನ್ನ ಸನಿಹಕೆ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಧನ್ಯಾ ರಾಮ್​ಕುಮಾರ್ ಕಾಲಿಟ್ಟರು. ಆ ಬಳಿಕ ‘ಹೈಡ್ ಆ್ಯಂಡ್ ಸೀಕ್’ ಸಿನಿಮಾದಲ್ಲಿ ನಟಿಸಿದರು. ಈ ವರ್ಷ ಬಿಡುಗಡೆ ಆದ ‘ದಿ ಜಡ್ಜ್​ಮೆಂಟ್’ ಚಿತ್ರದಲ್ಲೂ ಅವರು ನಟಿಸಿದ್ದಾರೆ. ಈಗ ಪೃಥ್ವಿ ಅಂಬಾರ್ ನಟನೆಯ ‘ಚೌಕಿದಾರ್’ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ನಾಯಕಿ ಆಗಿ ಬಣ್ಣ ಹಚ್ಚುತ್ತಿದ್ದಾರೆ.

ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ
ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ
ರಾಜೇಶ್ ದುಗ್ಗುಮನೆ
|

Updated on:Jun 28, 2024 | 10:10 AM

Share

ನಟಿ ಧನ್ಯಾ ರಾಮ್​ಕುಮಾರ್ ಅವರು ಇತ್ತೀಚೆಗೆ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈಗ ಅವರಿಗೆ ಹೊಸ ಆಫರ್ ಸಿಕ್ಕಿದೆ. ‘ರಥಾವರ’ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ಅವರು ‘ಚೌಕಿದಾರ್’ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಪೃಥ್ವಿ ಅಂಬಾರ್ ಅವರು ನಟಿಸುತ್ತಿದ್ದು, ಧನ್ಯರಾಮ್ ಕುಮಾರ್ ಜೋಡಿಯಾಗಿದ್ದಾರೆ. ಈ ವಿಚಾರ ಕೇಳಿ ಧನ್ಯಾ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

‘ನಿನ್ನ ಸನಿಹಕೆ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ಧನ್ಯಾ ರಾಮ್​ಕುಮಾರ್. ಆ ಬಳಿಕ ‘ಹೈಡ್ ಆ್ಯಂಡ್ ಸೀಕ್’ ಸಿನಿಮಾದಲ್ಲಿ ನಟಿಸಿದರು. ಈ ವರ್ಷ ಬಿಡುಗಡೆ ಆದ ‘ದಿ ಜಡ್ಜ್​ಮೆಂಟ್’ ಚಿತ್ರದಲ್ಲೂ ಅವರು ಬಣ್ಣ ಹಚ್ಚಿದರು. ಈಗ ಪೃಥ್ವಿ ಅಂಬಾರ್ ನಟನೆಯ ‘ಚೌಕಿದಾರ್’ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ಹೀರೋಯಿನ್ ಆಗಿ ಬಣ್ಣ ಹಚ್ಚುತ್ತಿದ್ದಾರೆ.

‘ಚೌಕಿದಾರ್’ ಕೇವಲ ಕನ್ನಡ ಮಾತ್ರವಲ್ಲದೆ ಬಹುಭಾಷೆಯಲ್ಲಿ ಸಿದ್ಧವಾಗುತ್ತಿದೆ. ಈವರೆಗೆ ಸಿನಿಮಾಗಳಲ್ಲಿ ಲವರ್‌ ಬಾಯ್‌ ಆಗಿ ಪೃಥ್ವಿ ಅಂಬಾರ್‌ ನಟಿಸಿದ್ದರು. ಈ ಬಾರಿ ಅವರು ಆ್ಯಕ್ಷನ್ ಸಿನಿಮಾಗಳ ಮೂಲಕ ರಂಜಿಸಲು ರೆಡಿ ಆಗಿದ್ದಾರೆ. ಇದು ಕಂಪ್ಲೀಟ್ ಆ್ಯಕ್ಷನ್ ಸಿನಿಮಾವಲ್ಲ. ಫ್ಯಾಮಿಲಿ ಎಂಟರ್ ಟೈನರ್ ವಿಚಾರಗಳೂ ಚಿತ್ರದಲ್ಲಿ ಇವೆ.

ಇದನ್ನೂ ಓದಿ: ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್​ ಹೊಸ ಸಿನಿಮಾ ‘ಜೂನಿ’: ಹೇಗಿದೆ ನೋಡಿ ಫಸ್ಟ್​ ಲುಕ್​

ಡಾ. ಕಲ್ಲಹಳ್ಳಿ ಚಂದ್ರಶೇಖರ್ ಚೌಕಿದಾರ್ ‘ವಿದ್ಯಾ ಶೇಖರ್ ಎಂಟರ್​ಟೇನ್​ಮೆಂಟ್’ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸಚಿನ್‌ ಬಸ್ರೂರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಜುಲೈ ಮೂರರಂದು ಬೆಂಗಳೂರಿನ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ‘ಚೌಕಿದಾರ್’ ಸಿನಿಮಾ ಮುಹೂರ್ತ ನೆರವೇರಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:00 am, Fri, 28 June 24

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು