AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಂಧೂರಿ’ ಸಿನಿಮಾದಲ್ಲಿ ಧರ್ಮ ಕೀರ್ತಿರಾಜ್, ರಾಗಿಣಿ; ಇದು ಯಾರ ಜೀವನದ ಕಥೆ?

ಮೇ 10ರಂದು ‘ಸಿಂಧೂರಿ’ ಸಿನಿಮಾಗೆ ಶೂಟಿಂಗ್ ಆರಂಭ ಆಗಲಿದೆ. ಧರ್ಮ ಕೀರ್ತಿರಾಜ್, ರಾಗಿಣಿ ದ್ವಿವೇದಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಲಿದ್ದಾರೆ. ಸಕಲೇಶಪುರ ಮುಂತಾದ ಕಡೆಗಳಲ್ಲಿ ಒಂದೇ ಹಂತದಲ್ಲಿ 45 ದಿನಗಳ ಕಾಲ ಶೂಟಿಂಗ್ ಮಾಡಲು ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ ‘ಸಿಂಧೂರಿ’ ಸಿನಿಮಾಗೆ ಮುಹೂರ್ತ ಸಮಾರಂಭ ನೆರವೇರಿಸಲಾಗಿದೆ.

‘ಸಿಂಧೂರಿ’ ಸಿನಿಮಾದಲ್ಲಿ ಧರ್ಮ ಕೀರ್ತಿರಾಜ್, ರಾಗಿಣಿ; ಇದು ಯಾರ ಜೀವನದ ಕಥೆ?
Dharma Keerthiraj, Ragini Dwivedi
ಮದನ್​ ಕುಮಾರ್​
|

Updated on: Apr 30, 2025 | 9:02 PM

Share

ಧರ್ಮ ಕೀರ್ತಿರಾಜ್ ಮತ್ತು ರಾಗಿಣಿ ದ್ವಿವೇದಿ (Ragini Dwivedi) ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಹೊಸ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಈ ಸಿನಿಮಾಗೆ ‘ಸಿಂಧೂರಿ’ ಎಂದು ಶೀರ್ಷಿಕೆ ಇಡಲಾಗಿದೆ. ಎಸ್. ರಮೇಶ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ಶಂಕರ್ ಕೋನಮಾನಹಳ್ಳಿ ಅವರು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಬೆಂಗಳೂರಿನ ಬನಶಂಕರಿ ದೇವಸ್ಥಾನದಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಮುಹೂರ್ತ ನೆರವೇರಿಸಲಾಗಿದೆ. ಈ ವೇಳೆ ಚಿತ್ರತಂಡದ ಸದಸ್ಯರು ಭಾಗಿಯಾಗಿದ್ದರು. ಸುದ್ದಿಗೋಷ್ಠಿ ನಡೆಸಿ, ಸಿನಿಮಾ ಬಗ್ಗೆ ಮಾಹಿತಿ ನೀಡಿದರು. ‘ಸಿಂಧೂರಿ’ (Sindhuri) ಎಂಬ ಶೀರ್ಷಿಕೆ ಕೇಳಿದರೆ ಇದು ಯಾರ ಜೀವನದ ಕಥೆ ಎಂಬ ಪ್ರಶ್ನೆ ಮೂಡುತ್ತದೆ. ಅದಕ್ಕೆ ನಿರ್ದೇಶಕರು ಉತ್ತರ ನೀಡಿದ್ದಾರೆ.

‘ಶೀರ್ಷಿಕೆ ಕೇಳಿದರೆ ಇದು ರೋಹಿಣಿ ಸಿಂಧೂರಿ ಹಾಗೂ ಡಿ.ಕೆ. ರವಿ ಅವರ ಕಥೆಯಿರಬಹುದಾ ಎಂದು ಅನೇಕರು ನಮ್ಮ ಬಳಿ ಕೇಳಿದ್ದಾರೆ. ಆದರೆ ರೋಹಿಣಿ ಸಿಂಧೂರಿ ಅವರಿಗೂ ಈ ಸಿನಿಮಾಗೂ ಯಾವುದೇ ಸಂಬಂಧ ಇಲ್ಲ. ಇದೊಂದು ಕಾಲ್ಪನಿಕ ಕಹಾನಿ. ಮರ್ಡರ್ ಮಿಸ್ಟ್ರಿ ಕಥೆ ಈ ಸಿನಿಮಾದಲ್ಲಿ ಇರಲಿದೆ’ ಎಂದು ನಿರ್ದೇಶಕ ಶಂಕರ್ ಅವರು ತಿಳಿಸಿದರು. ಇದು ಅವರಿಗೆ 4ನೇ ಸಿನಿಮಾ.

ಈ ಸಿನಿಮಾದಲ್ಲಿ ರಾಗಿಣಿ ದ್ವಿವೇದಿ ಹಾಗೂ ಧರ್ಮ ಕೀರ್ತಿರಾಜ್ ಅವರು ಜೋಡಿಯಾಗಿ ಅಭಿನಯಿಸುತ್ತಿಲ್ಲ. ಸಿನಿಮಾದ ಕಥೆಗೆ ತಿರುವು ನೀಡುವಂತಹ ಪಾತ್ರದಲ್ಲಿ ರಾಗಿಣಿ ಅಭಿನಯಿಸುತ್ತಿದ್ದಾರೆ. ‘ನಾನು ಬಿಂಗೋ ಸಿನಿಮಾದ ಶೂಟಿಂಗ್ ಮಾಡುವಾಗ ರಾಗಿಣಿ ಅವರಿಗೆ ಈ ಕಥೆ ಹೇಳಿದ್ದೆ. ಅವರಿಗೆ ಅದು ಇಷ್ಟವಾಗಿ ಗ್ರೀನ್ ಸಿಗ್ನಲ್ ನೀಡಿದ್ದರು. ಈ ಸಿನಿಮಾದಲ್ಲಿ ಧರ್ಮ ಕೀರ್ತಿರಾಜ್ ಅವರು ಭಿನ್ನವಾದ ಪಾತ್ರ ಮಾಡಲಿದ್ದಾರೆ’ ಎಂದು ನಿರ್ದೇಶಕರು ಹೇಳಿದ್ದಾರೆ.

ಇದನ್ನೂ ಓದಿ
Image
ಅಭಿಮಾನಿಯ ಅತಿರೇಕ: ಮುಟ್ಟಲು ಬಂದವನಿಗೆ ಏಟು ಕೊಟ್ಟ ರಾಗಿಣಿ ದ್ವಿವೇದಿ
Image
ಮೋಹನ್​ಲಾಲ್​ ಜೊತೆ ಊಟ ಸವಿದ ರಾಗಿಣಿ ದ್ವಿವೇದಿ; ಕಾದಿದೆ ಸರ್ಪ್ರೈಸ್
Image
ಡ್ರಗ್ಸ್​ ಕೇಸ್​ನಲ್ಲಿ ರಾಗಿಣಿ ನಿರಪರಾಧಿ; ನಟಿಯ ವಿರುದ್ಧದ ಕೇಸ್ ಖುಲಾಸೆ
Image
Ragini Dwivedi: ರಾಗಿಣಿ ದ್ವಿವೇದಿ ಯೋಗ ಫೋಟೋಸ್; ನಟಿಯ ಯೋಗಾಭ್ಯಾಸ ನೋಡಿ ವಾವ್ ಎಂದ ಫ್ಯಾನ್ಸ್
Sindhuri Movie Team

Sindhuri Movie Team

ನಿರ್ಮಾಪಕ ಎಸ್. ರಮೇಶ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ‘ಒಂದಷ್ಟು ವರ್ಷಗಳ ಮೊದಲು ವಿಕ್ಕಿ ಎಂಬ ಸಿನಿಮಾ ಮಾಡಿದ್ದೆ. ಆ ಚಿತ್ರದ ನಿರ್ದೇಶಕರು ಮೋಸ ಮಾಡಿದರು. ಮುಂದೆ ಸಿನಿಮಾ ಮಾಡಬಾರದು ಅಂತ ನಿರ್ಧರಿಸಿದ್ದೆ. ಆದರೆ ಶಂಕರ್ ಬಂದು ಸಿಂಧೂರಿ ಕಥೆ ಹೇಳಿದರು. ದೇವರ ಆಶೀರ್ವಾದದಿಂದ ಇಂದು ಸಿನಿಮಾ ಆರಂಭಿಸಿದ್ದೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ಟಾಲಿವುಡ್​ಗೆ ಧರ್ಮ ಕೀರ್ತಿರಾಜ್; ಅಪ್ಸರೆಯ ಜೊತೆ ಸಿನಿಮಾ

ನಾರಾಯಣಸ್ವಾಮಿ, ರಮೀಜ್ ರಾಕಿ, ಸಂಗೀತ ನಿರ್ದೇಶಕ ಹಿತನ್ ಹಾಸನ್‍, ಛಾಯಾಗ್ರಾಹಕ ರಾಕೇಶ್‍ ಸಿ. ತಿಲಕ್, ಸಂಭಾಷಣಕಾರ ಹರೀಶ್‍ ಮುಂತಾದವರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು. ಈ ಸಿನಿಮಾದಲ್ಲಿ ನಟಿಸುತ್ತಿರುವುದಕ್ಕೆ ರಾಗಿಣಿ ದ್ವಿವೇದಿ ಮತ್ತು ಧರ್ಮ ಕೀರ್ತಿರಾಜ್ ಅವರು ಸಂತಸ ವ್ಯಕ್ತಪಡಿಸಿದರು. ‘ಈ ಸಿನಿಮಾ ಎಲ್ಲ ಪಾತ್ರಗಳಿಗೂ ಮಹತ್ವವಿದೆ. ಪ್ರೇಕ್ಷಕರನ್ನು ಹಿಡಿದಿಡುವ ಎಲ್ಲ ಅಂಶಗಳು ಈ ಸಿನಿಮಾದಲ್ಲಿವೆ’ ಎಂದಿದ್ದಾರೆ ರಾಗಿಣಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ