AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಧರ್ಮ ಕೀರ್ತಿರಾಜ್ ನಟನೆಯ 25ನೇ ಸಿನಿಮಾ ‘ನಯನ ಮನೋಹರ’

ಧರ್ಮ ಕೀರ್ತಿರಾಜ್ ಅವರ 25ನೇ ಸಿನಿಮಾಗೆ ಶುಭ ಕೋರಲು ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ಪ್ರಿಯಾಂಕಾ ಉಪೇಂದ್ರ, ವಿನೋದ್ ಪ್ರಭಾಕರ್ ಅವರು ಕಾರ್ಯಕ್ರಮಕ್ಕೆ ಬಂದು ಚಿತ್ರತಂಡಕ್ಕೆ ವಿಶ್ ಮಾಡಿದರು. ನವೀನ್ ಶಂಕರ್, ಸಿಂಧೂ ಲೋಕನಾಥ್, ಅನುಷಾ ರೈ, ಐಶ್ವರ್ಯ ಸಿಂಧೋಗಿ ಮುಂತಾದವರು ಬಂದಿದ್ದರು.

ಬಿಗ್ ಬಾಸ್ ಧರ್ಮ ಕೀರ್ತಿರಾಜ್ ನಟನೆಯ 25ನೇ ಸಿನಿಮಾ ‘ನಯನ ಮನೋಹರ’
Nayana Manohara Movie Title Launch
ಮದನ್​ ಕುಮಾರ್​
|

Updated on: Dec 25, 2025 | 8:32 PM

Share

ನಟ ಧರ್ಮ ಕೀರ್ತಿರಾಜ್ (Dharma Keerthiraj) ಅವರು ಬಿಗ್ ಬಾಸ್ ಶೋ ಮೂಲಕ ಖ್ಯಾತಿ ಹೆಚ್ಚಿಸಿಕೊಂಡರು. ಹಲವು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಈಗ ಅವರು 25ನೇ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗೆ ‘ನಯನ ಮನೋಹರ’ (Nayana Manohara) ಎಂದು ಶೀರ್ಷಿಕೆ ಇಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಟೈಟಲ್ ಅನಾವರಣ ಆಯಿತು. ಜೊತೆಗೆ ಟೀಸರ್ ಕೂಡ ಬಿಡುಗಡೆ ಮಾಡಲಾಗಿದೆ. ಯುಬಿ ಸಿಟಿಯ ಮ್ಯಾರಿಯಟ್ ಅಪಾರ್ಟ್‌ಮೆಂಟ್ಸ್‌ನಲ್ಲಿ ಈ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು. ಅನುಷ್ ಸಿದ್ದಪ್ಪ ಅವರು ‘ಎಕ್ಸ್ಕ್ವಿಸಿಟ್ ಎಂಟರ್‌ಟೈನ್‌ಮೆಂಟ್ಸ್’ ಮೂಲಕ ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ.

ಪುನೀತ್ ಕೆಜಿಆರ್ ಅವರು ‘ನಯನ ಮನೋಹರ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ತಮ್ಮದೇ ‘ಲಾಸ್ಟ್ ಬೆಂಚ್ ವಂಡರ್ಸ್ ಸಿನ್ಸ್ 1990’ ಎಂಬ ತಂಡದೊಂದಿಗೆ ಅವರು ಈ ಸಿನಿಮಾ ಮಾತ್ತಿದ್ದಾರೆ. ‘ಇದು ನಿಮ್ಮನ್ನು ನಿಮಗೆ ಪರಿಚಯಿಸುವ ಸುಂದರ ಕಾವ್ಯ’ ಎಂಬ ಟ್ಯಾಗ್​ಲೈನ್ ಈ ಸಿನಿಮಾಗೆ ಇದೆ. ಈ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಉಪೇಂದ್ರ ಹಾಗೂ ವಿನೋದ್ ಪ್ರಭಾಕರ್ ಅವರು ಅತಿಥಿಗಳಾಗಿ ಆಗಮಿಸಿದ್ದರು.

ವೇದಿಕೆಯಲ್ಲಿ ಧರ್ಮ ಕೀರ್ತಿರಾಜ್ ಅವರು ಮಾತನಾಡಿದರು. ‘ಅಪ್ಪ, ಅಮ್ಮ, ಅಕ್ಕ ಬಂದಿರುವುದು ನನಗೆ ಶಕ್ತಿ ತಂದಿದೆ. 25ನೇ ಸಿನಿಮಾ ಒಂದು ಮೈಲಿಗಲ್ಲು. ಮುಖ್ಯವಾದ ಹೀರೋ ಅಂದರೆ ನಿರ್ಮಾಪಕರು. ನನ್ನ ಅದೃಷ್ಟಕ್ಕೆ ಅವರೇ ಕಾರಣ. ನಿರ್ದೇಶಕರು ಕಥೆ ಹೇಳಿದಾಗ ಬಹಳ ಸಂತೋಷ ಆಯಿತು. 3 ಶೇಡ್‌ಗಳಲ್ಲಿ ಕಾಣಿಸಿಕೊಳ್ಳುತ್ತೇನೆ’ ಎಂದು ಧರ್ಮ ಕೀರ್ತಿರಾಜ್ ಮಾಹಿತಿ ನೀಡಿದರು.

ವಾಸುಕಿ ವೈಭವ್ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ನಿರ್ದೇಶಕ ಪುನೀತ್ ಕೆಜಿಆರ್ ಮಾತನಾಡಿ, ‘ಈ ಸಿನಿಮಾ ಧರ್ಮ ಕೀರ್ತಿರಾಜ್ ಅವರಿಗೆ ಗೆಲುವು ಕೊಡುತ್ತದೆ’ ಎಂದು ಆಶಾಭಾವನೆ ವ್ಯಕ್ತಪಡಿಸಿದರು. ನಾಯಕಿ ಯಾರು ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ನಿರ್ದೇಶಕರು ಹೇಳಿದ್ದಾರೆ. ಈ ಚಿತ್ರತಂಡಕ್ಕೆ ಪ್ರಿಯಾಂಕಾ ಉಪೇಂದ್ರ, ವಿನೋದ್ ಪ್ರಭಾಕರ್ ಶುಭ ಹಾರೈಸಿದರು.

ಇದನ್ನೂ ಓದಿ: ಟಾಲಿವುಡ್​ಗೆ ಧರ್ಮ ಕೀರ್ತಿರಾಜ್; ಅಪ್ಸರೆಯ ಜೊತೆ ಸಿನಿಮಾ

ಪ್ರಿಯಾಂಕಾ ಉಪೇಂದ್ರ ಮಾತನಾಡಿ, ‘ಸಿನಿಮಾ 100ನೇ ದಿನ ಪ್ರದರ್ಶನ ಕಂಡು ಇದೇ ಜಾಗದಲ್ಲಿ ಸಂಭ್ರಮಿಸೋಣ. ನಿರ್ಮಾಪಕರ ಅಭಿರುಚಿ ಏನು ಎಂಬುದು ತುಣುಕುಗಳಲ್ಲಿ ಕಂಡುಬಂದಿದೆ. ಟೀಸರ್‌ನಲ್ಲಿ ಇರುವಂತೆಯೇ ಸಿನಿಮಾ ಮಾಡಿ’ ಎಂದು ಸಲಹೆ ನೀಡಿದರು. ‘ಟೀಸರ್ ಚೆನ್ನಾಗಿ ಬಂದಿದೆ. ಉತ್ತಮ ಸಿನಿಮಾ ಇದಾಗಲಿದೆ ಅಂತ ಅನಿಸಿದೆ. ಪಾತ್ರದ ಪರಿಚಯ ಚೆನ್ನಾಗಿ ಮಾಡಿದ್ದೀರಿ’ ಎಂದು ವಿನೋದ್ ಪ್ರಭಾಕರ್ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ