AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಲಿದೆ ‘ಯುಕೆ ಲವ್ ​ಸ್ಟೋರಿ’; ಇದು ಉತ್ತರ ಕರ್ನಾಟಕದ ಪ್ರೇಮ್​ ಕಹಾನಿ

ಚಂದನವನದಲ್ಲಿ ಉತ್ತರ ಕರ್ನಾಟಕದ ಕಥೆಗಳು ಕಡಿಮೆ ಎಂಬ ಮಾತಿದೆ. ಈಗ ‘ಯುಕೆ ಲವ್ ಸ್ಟೋರಿ’ ಸಿನಿಮಾ ತಂಡದವರು ಉತ್ತರ ಕರ್ನಾಟಕ ಭಾಗದ ಕಥೆ ಹೇಳಲು ಸಜ್ಜಾಗಿದ್ದಾರೆ. ಧರ್ಮ ಕೀರ್ತಿರಾಜ್​ ಅಭಿನಯದ ಈ ಸಿನಿಮಾಗೆ ಇತ್ತೀಚೆಗೆ ಮುಹೂರ್ತ ಮಾಡಲಾಗಿದೆ. ಈ ವೇಳೆ ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡದವರು ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಬರಲಿದೆ ‘ಯುಕೆ ಲವ್ ​ಸ್ಟೋರಿ’; ಇದು ಉತ್ತರ ಕರ್ನಾಟಕದ ಪ್ರೇಮ್​ ಕಹಾನಿ
‘ಯುಕೆ ಲವ್​ ಸ್ಟೋರಿ’ ಸಿನಿಮಾ ಚಿತ್ರತಂಡ
ಮದನ್​ ಕುಮಾರ್​
|

Updated on:Feb 15, 2024 | 6:16 PM

Share

ಕರ್ನಾಟಕದ ಎಲ್ಲ ಜಿಲ್ಲೆ, ಪ್ರದೇಶಗಳ ಕಥೆಗಳು ದೊಡ್ಡ ಪರದೆಗೆ ಬರಬೇಕು ಎಂಬುದು ಅನೇಕರ ಬಯಕೆ. ಉತ್ತರ ಕರ್ನಾಟಕದಲ್ಲಿ (North Karnataka) ಹಲವು ಕಹಾನಿಗಳಿವೆ. ಆದರೆ ಆ ಭಾಗದ ಕಥೆಯನ್ನು ಇಟ್ಟುಕೊಂಡು ಸಿನಿಮಾ ಮಾಡಿದ್ದು ವಿರಳ. ಅಂಥ ಕೊರತೆಯನ್ನು ನೀಗಿಸುವ ಪ್ರಯತ್ನದ ರೀತಿಯಲ್ಲಿ ಒಂದು ಹೊಸ ಸಿನಿಮಾ ಸೆಟ್ಟೇರಿದೆ. ‘ಯುಕೆ ಲವ್ ಸ್ಟೋರಿ’ (UK Love Story) ಎಂಬುದು ಈ ಸಿನಿಮಾದ ಶೀರ್ಷಿಕೆ. ಈ ಸಿನಿಮಾದ ಮುಹೂರ್ತ ಕಾರ್ಯಕ್ರಮವು ಇತ್ತೀಚೆಗೆ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಸಂಭ್ರಮದಿಂದ ನಡೆಯಿತು. ಈ ಸಿನಿಮಾದಲ್ಲಿ ನಟ ಧರ್ಮ ಕೀರ್ತಿರಾಜ್​ (Dharma Keerthiraj) ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಚಿತ್ರದ ಶೀರ್ಷಿಕೆಯೇ ಗಮನ ಸೆಳೆಯುಂತಿದೆ.

‘ಯುಕೆ ಲವ್​ ಸ್ಟೋರಿ’ ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಸ್ಯಾಂಡಲ್​ವುಡ್​ನ ಖ್ಯಾತ ನಟ ಅಜಯ್‌ ರಾವ್ ಅವರು ಹಾಜರಾಗಿದ್ದರು. ಸಿನಿಮಾದ ಪ್ರಥಮ ದೃಶ್ಯಕ್ಕೆ ಅವರು ಕ್ಲ್ಯಾಪ್ ಮಾಡಿ ಶುಭ ಕೋರಿದರು. ಈ ಚಿತ್ರಕ್ಕೆ ವಿಜಯ್‌ ಅವರು ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರ ಎರಡನೇ ಸಿನಿಮಾ. ‘ರೋಮನಾಸ್ ಕ್ರಿಯೇಶನ್ಸ್’ ಬ್ಯಾನರ್​ ಮೂಲಕ ಎಸ್.ಜೆ. ಸುರೇಶ್ ಆರೋಕ್ಯ ರಾಜ್ ನಿರ್ಮಾಣ ಅವರು ಮಾಡುತ್ತಿದ್ದಾರೆ. ಅದರ ಜೊತೆಗೆ ಒಂದು ಪಾತ್ರವನ್ನೂ ಅವರು ನಿಭಾಯಿಸುತ್ತಿದ್ದಾರೆ.

ಪಾತ್ರವರ್ಗ: ಈ ಸಿನಿಮಾದಲ್ಲಿ ಒರಟು ಹಳ್ಳಿ ಯುವಕನಾಗಿ ಧರ್ಮ ಕೀರ್ತಿರಾಜ್ ಅವರು ನಟಿಸಲಿದ್ದಾರೆ. ಅವರಿಗೆ ವಿಭಿನ್ನ ಲುಕ್‌ ಇರಲಿದೆ. ಮುಂದಿನ ದಿನಗಳಲ್ಲಿ ಆ ಲುಕ್​ ರಿವೀಲ್ ಆಗಲಿದೆ. 11 ಅಣ್ಣಂದಿರ ಮುದ್ದಿನ ತಂಗಿಯ ಪಾತ್ರದಲ್ಲಿ ಕಾವ್ಯಾ ಅವರು ನಟಿಸಲಿದ್ದಾರೆ. ಈ ಸಿನಿಮಾಗೆ ಅವರೇ ನಾಯಕಿ. ಸಾಧುಕೋಕಿಲ, ಗೋವಿಂದೇ ಗೌಡ, ಬಲರಾಜ ವಾಡಿ, ರವಿ ರೆಡ್ಡಿ, ಮೂರ್ತಿ ಗಿರಿನಗರ, ಮಂಡ್ಯ ಸಿದ್ದು, ಮಂಜು ಹೊನ್ನವಳ್ಳಿ ಸೇರಿದಂತೆ ಹಲವು ಕಲಾವಿದರು ‘ಯುಕೆ ಲವ್ ಸ್ಟೋರಿ’ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: ‘ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾದಲ್ಲಿದೆ ನೈಜ ಘಟನೆ; ಶೀಘ್ರದಲ್ಲೇ ರಿಲೀಸ್​

ಸಿನಿಮಾದ ಬಗ್ಗೆ ನಿರ್ದೇಶಕ ವಿಜಯ್​ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಯುಕೆ ಅಂದರೆ ಉತ್ತರ ಕರ್ನಾಟಕ. ಆ ಭಾಗದ ಒಂದು ರಗಡ್ ಪ್ರೇಮಕಥೆಯನ್ನು ಅವರು ಹೇಳಲಿದ್ದಾರೆ. ಕಲಬುರಗಿ ಜಿಲ್ಲೆಯ ಒಂದು ಪುಟ್ಟ ಹಳ್ಳಿಗೆ ಭೇಟಿ ನೀಡಿದ ಚಿತ್ರತಂಡದವರು ಅಲ್ಲಿನ ಮಂದಿಯ ಭಾಷೆ ಮತ್ತು ಬದುಕಿನ ಬಗ್ಗೆ ತಿಳಿದುಕೊಂಡು ಬಂದಿದ್ದಾರೆ. 6 ತಿಂಗಳ ಕಾಲ ಅಲ್ಲಿಯೇ ಇದ್ದುಕೊಂಡು ಚಿತ್ರಕಥೆ ಬರೆದಿರುವುದಾಗಿ ನಿರ್ದೇಶಕರು ಹೇಳಿಕೊಂಡಿದ್ದಾರೆ.

ವಿ. ಪಳನಿವೇಲು ಅವರ ಛಾಯಾಗ್ರಹಣ, ಸಿ.ಕೆ. ಕುಮಾರ್ ಅವರ ಸಂಕಲನ, ಚಂದ್ರು ಬಂಡೆ ಅವರ ಸಾಹಸ ನಿರ್ದೇಶನ, ಶಿವಶಕ್ತಿ ಷಣ್ಮುಗಂ ಅವರ ಕೊರಿಯೋಗ್ರಫಿಯಲ್ಲಿ ಈ ಸಿನಿಮಾ ಸಿದ್ಧವಾಗಲಿದೆ. ಕಲಬುರಗಿ, ಯಾದಗಿರಿ, ಹುಬ್ಬಳ್ಳಿ, ಬೆಳಗಾವಿ, ಕೊಳ್ಳೆಗಾಲ ಮುಂತಾದೆಡೆ ಶೂಟಿಂಗ್​ ನಡೆಯಲಿದೆ. ಈ ಸಿನಿಮಾಗೆ ‘ಐ ಲವ್​ ಯು’ ಖ್ಯಾತಿಯ ಕಿರಣ್ ತೋಟಂಬೈಲ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸಂತೋಷ್ ನಾಯಕ್ ಹಾಗೂ ಹನುರಾಜ್ ಮಧುಗಿರಿ ಅವರ ಸಾಹಿತ್ಯದಲ್ಲಿ ಹಾಡುಗಳು ಮೂಡಿಬರಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:34 pm, Thu, 15 February 24

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್