AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಣ್ಣನ ಡ್ಯುಯೆಟ್ ನೋಡಿ ನವಜೋಡಿಗಳು ನೋಡಲೇ ಬೇಕೆಂದ ಅಭಿಷೇಕ್ ಅಂಬರೀಷ್

Rajayoga: ಹಾಸ್ಯ ನಟ, ಪೋಷಕ ನಟನಾಗಿ ಪರಿಚಿತವಾಗಿರುವ ಧರ್ಮಣ್ಣ ಕಡೂರು ಇದೇ ಮೊದಲ ಬಾರಿಗೆ ನಾಯಕ ನಟನಾಗಿ 'ರಾಜಯೋಗ' ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾದ ಹಾಡನ್ನು ಅಭಿಷೇಕ್ ಅಂಬರೀಶ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ಇದು ನವಜೋಡಿಗಳು ನೋಡಲೇ ಬೇಕಾದ ಹಾಡು ಎಂದಿದ್ದಾರೆ ಯಂಗ್ ರೆಬಲ್ ಸ್ಟಾರ್.

ಧರ್ಮಣ್ಣನ ಡ್ಯುಯೆಟ್ ನೋಡಿ ನವಜೋಡಿಗಳು ನೋಡಲೇ ಬೇಕೆಂದ ಅಭಿಷೇಕ್ ಅಂಬರೀಷ್
ರಾಜಯೋಗ
ಮಂಜುನಾಥ ಸಿ.
|

Updated on: Oct 13, 2023 | 6:58 PM

Share

ನಟ ಧರ್ಮಣ್ಣ ಕಡೂರು (Dharmanna Kaduru) ಅವರಿಗೆ ‘ರಾಜಯೋಗ’ ಪ್ರಾರಂಭವಾಗಿದೆ. ಪೋಷಕ ಪಾತ್ರ, ಹಾಸ್ಯ ಪಾತ್ರಗಳಿಗೆ ಸೀಮಿತವಾಗಿದ್ದ ಧರ್ಮಣ್ಣ ‘ರಾಜಯೋಗ’ ಸಿನಿಮಾ ಮೂಲಕ ನಾಯಕ ನಟನಾಗಿದ್ದಾರೆ. ‘ರಾಜಯೋಗ’ ಸಿನಿಮಾದ ಟ್ರೈಲರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ‘ರಾಜಯೋಗ’ ಸಿನಿಮಾ ಕೌಟುಂಬಿಕ ಸಿನಿಮಾ ಆಗಿದ್ದು ಭರಪೂರ ಹಾಸ್ಯವೂ ಇದೆ. ಟ್ರೈಲರ್ ಮೂಲಕ ನಿರೀಕ್ಷೆ ಮೂಡಿಸಿರುವ ‘ರಾಜಯೋಗ’ ಸಿನಿಮಾದ ಮೊದಲ ಹಾಡು ಇದೀಗ ಬಿಡುಗಡೆಯಾಗಿದೆ.

ಧರ್ಮಣ್ಣರ ‘ರಾಜಯೋಗ’ ಸಿನಿಮಾದ ಮೊದಲ ಹಾಡನ್ನು ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಬಿಡುಗಡೆ ಮಾಡಿದ್ದಾರೆ. ರೊಮ್ಯಾಂಟಿಕ್ ಹಾಡು ಇದಾಗಿದ್ದು, ನವಜೋಡಿಯ ಭಾವನೆಗಳನ್ನು ಹಾಡು ಒಳಗೊಂಡಿದೆ. ಹಾಡು ಬಿಡುಗಡೆ ಮಾಡಿದ ಅಭೀಷೇಕ್ ಹಾಡನ್ನು ಬಹುವಾಗಿ ಮೆಚ್ಚಿಕೊಂಡಿದ್ದು ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ ಮಾತ್ರವಲ್ಲದೆ ಈ ಹಾಡನ್ನು ನವ ಜೋಡಿಗಳು ನೋಡಲೇ ಬೇಕು ಎಂದು ಒತ್ತಾಯಿಸಿದ್ದಾರೆ.

‘ರಾಜಯೋಗ’ ಸಿನಿಮಾವನ್ನು ಲಿಂಗರಾಜ ಉಚ್ಚಂಗಿ ದುರ್ಗ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಹಾಡುಗಳಿಗೆ ಅಕ್ಷಯ್ ಎಸ್ ರಿಷಬ್ ಸಂಗೀತ ನೀಡಿದ್ದಾರೆ. ಸದ್ಯ ರಿಲೀಸ್ ಆಗಿರುವ ‘ಬಿ ಎಂ ಗಂಡು…’ ಹಾಡಿಗೆ ಲಿಂಗರಾಜು ಅವರೇ ಸಾಹಿತ್ಯ ಬರೆದಿದ್ದು ಖ್ಯಾತ ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಮತ್ತು ಗಾಯಕಿ ಅನನ್ಯಾ ಭಟ್ ಹಾಡಿದ್ದಾರೆ. ಟ್ರೈಲರ್ ಮೂಲಕ ಗಮನ ಸೆಳೆದಿರುವ ‘ರಾಜಯೋಗ’ ಇದೀಗ ಹಾಡಿನ ಮೂಲಕವು ಅಭಿಮಾನಿಗಳ ಹೃದಯ ಗೆಲ್ಲುತ್ತಿದೆ.

ಇದನ್ನೂ ಓದಿ:‘ಒಳ್ಳೇದಾಗ್ಲಿ ಅಂತ ಆಶೀರ್ವಾದ ಮಾಡಿ’: ‘ರಾಜಯೋಗ’ ಬಂದ ಮೇಲೆ ಮನವಿ ಮಾಡಿಕೊಂಡ ಧರ್ಮಣ್ಣ

ಅಂದಹಾಗೆ ನಿರ್ದೇಶಕ ಲಿಂಗರಾಜು ಅವರಿಗೆ ಇದು ಮೊದಲ ಸಿನಿಮಾ. ಈ ಮೊದಲು ಕಿರುತೆರೆಯಲ್ಲಿ ಕೆಲಸ ಮಾಡಿದ್ದ ಲಿಂಗರಾಜು, ‘ರಾಜಯೋಗ’ ಸಿನಿಮಾ ಮೂಲಕ ಮೊದಲ ಬಾರಿಗೆ ನಿರ್ದೇಶಕರಾಗಿ ಸ್ಯಾಂಡ‌ವುಡ್‌ ಪ್ರವೇಶಿಸುತ್ತಿದ್ದಾರೆ. ಇನ್ನೂ ಈ ಸಿನಿಮಾದಲ್ಲಿ ಧರ್ಮಣ್ಣ ಬಿಟ್ಟರೆ ಉಳಿದವರೆಲ್ಲ ಹೊಸಬರು. ಧರ್ಮಣ್ಣ ಅವರಿಗೆ ನಾಯಕಿಯಾಗಿ ನಿರೀಕ್ಷಾ ರಾವ್ ನಟಿಸಿದ್ದಾರೆ. ನಿರೀಕ್ಷಾ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ನಟಿಸಿದ್ದು ಧರ್ಮಣ್ಣ ಪತ್ನಿಯಾಗಿ ಮಿಂಚಿದ್ದಾರೆ.

ಕುಮಾರ ಕಂಠೀರವ, ಈ ಸಿನಿಮಾ ಶ್ರೀರಾಮ ರಕ್ಷಾ ಪ್ರೊಡಕ್ಷನ್‌ ಮೂಲಕ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ವಿಶೇಷ ಎಂದರೆ ನಟ ಧರ್ಮಣ್ಣ ಈ ಸಿನಿಮಾ ಮೂಲಕ ನಿರ್ಮಾಪಕರಾಗಿಯೂ ಬಡ್ತಿ ಪಡೆದುಕೊಂಡಿದ್ದಾರೆ. ಈ ಸಿನಿಮಾದ ಸಹನಿರ್ಮಾಣ ಧರ್ಮಣ್ಣ ಅವರದ್ದೇ. ಇನ್ನುಳಿದಂತೆ ದೀಕ್ಷಿತ್ ಕೃಷ್ಣ, ಪ್ರಭು, ಲಿಂಗರಾಜು, ನೀರಜ್ ಗೌಡ ಕೂಡ ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಸದ್ಯ ಟ್ರೈಲರ್ ಮತ್ತು ಹಾಡು ಬಿಡುಗಡೆ ಆಗಿ ಸದ್ದು ಮಾಡುತ್ತಿರುವ ‘ರಾಜಯೋಗ’ ಸಿನಿಮಾ ನವೆಂಬರ್ ಮೊದಲ ವಾರದಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ