AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಟಿಎಂ’ ಸಿನಿಮಾ ಹಾಡು ಬಿಡುಗಡೆ, ಮುದ್ದಾಗಿ ಕಾಣ್ತಿದೆ ದೀಕ್ಷಿತ್-ಸಂಜನಾ ಜೋಡಿ

Dheekshith Shetty: ಬಹುಭಾಷಾ ನಟರಾಗಿ ಗುರುತಿಸಿಕೊಂಡಿರುವ ದೀಕ್ಷಿತ್ ಶೆಟ್ಟಿ, ಕನ್ನಡದಲ್ಲಿ ನಟಿಸಿರುವ ‘ಕೆಟಿಎಂ’ ಸಿನಿಮಾದ ಹೊಸ ಹಾಡೊಂದು ಬಿಡುಗಡೆ ಆಗಿದೆ.

‘ಕೆಟಿಎಂ’ ಸಿನಿಮಾ ಹಾಡು ಬಿಡುಗಡೆ, ಮುದ್ದಾಗಿ ಕಾಣ್ತಿದೆ ದೀಕ್ಷಿತ್-ಸಂಜನಾ ಜೋಡಿ
ಮಂಜುನಾಥ ಸಿ.
|

Updated on:Feb 04, 2024 | 10:01 PM

Share

ಕನ್ನಡದ ‘ದಿಯಾ’ (Dia) ಸಿನಿಮಾ ಮೂಲಕ ಗಮನಕ್ಕೆ ಬಂದ ನಟ ದೀಕ್ಷಿತ್ ಶೆಟ್ಟಿ (Dheekshith Shetty) ಈಗ ಬಹುಭಾಷಾ ನಟನಾಗಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಕೆಲವು ದೊಡ್ಡ ಪ್ರಾಜೆಕ್ಟ್​ಗಳನ್ನು ಬಾಚಿಕೊಂಡಿರುವ ದೀಕ್ಷಿತ್ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದು ಬಿಟ್ಟಿಲ್ಲ. ತೆಲುಗಿನ ‘ದಸರಾ’, ರಶ್ಮಿಕಾ ಮಂದಣ್ಣ ಜೊತೆಗೆ ‘ಗರ್ಲ್ ಫ್ರೆಂಡ್’ ಸಿನಿಮಾಗಳಲ್ಲಿ ನಟಿಸಿರುವ ದೀಕ್ಷಿತ್‌ ಶೆಟ್ಟಿ ನಟಿಸಿರುವ ಕನ್ನಡ ಸಿನಿಮಾ ‘ಕೆಟಿಎಂ’ನ ಟೀಸರ್ ಈ ಹಿಂದೆ ಬಿಡುಗಡೆ ಆಗಿ ಸಖತ್ ಗಮನ ಸೆಳೆದಿತ್ತು. ಇದೀಗ ಸಿನಿಮಾದ ಹೊಸ ಹಾಡೊಂದು ಬಿಡುಗಡೆ ಆಗಿದ್ದು, ದೀಕ್ಷಿತ್ ಶೆಟ್ಟಿ ಹಾಗೂ ಸಂಜನಾರ ಜೋಡಿ ಬಲು ಮುದ್ದಾಗಿ ಕಾಣುತ್ತಿದೆ.

ಸಿನಿಮಾ ತನ್ನ ಟೀಸರ್‌ ಮೂಲಕ ಒಂದಷ್ಟು ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಇದೀಗ ಚಿತ್ರತಂಡ ಹಾಡುಗಳ ಮೂಲಕ ಪ್ರೇಕ್ಷಕರಿಗೆ ಆಮಂತ್ರಣ ನೀಡುತ್ತಿದೆ. ಕೆಟಿಎಂ ಸಿನಿಮಾದ ಹಾಡುಗಳು ಕೇಳುಗರನ್ನು ಮೋಡಿ ಮಾಡುತ್ತಿವೆ. ಈ ಹಿಂದೆ ಬಿಡುಗಡೆಯಾಗಿದ್ದ ಎರಡು ಸಾಂಗ್ಸ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ‌. ಮಿಲಿಯನ್ ವೀವ್ಸ್ ಪಡೆದುಕೊಂಡಿರುವ ಕೆಟಿಎಂ ಹಾಡುಗಳು ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚು ಮಾಡಿವೆ‌. ಇದೀಗ ಕೆಟಿಎಂ ಸಿನಿಮಾದ ಮೂರನೇ ಹಾಡು ಅನಾವರಣಗೊಂಡಿದೆ. ಎಲ್ಲಾ ನೀನೇನೆ ಎಂಬ ಮೆಲೋಡಿ ಹಾಡು ಇದೀಗ ಬಿಡುಗಡೆ ಆಗಿದ್ದು, ಧನಂಜಯ್ ರಂಜನ್ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಚೇತನ್ ರಾವ್ ಸಂಚಿತ್ ಹೆಗ್ಡೆ ಜೊತೆಗೂಡಿ ಧ್ವನಿಯಾಗುವುದರ ಜೊತೆಗೆ ಸಂಗೀತ ಒದಗಿಸಿದ್ದಾರೆ.

ಇದನ್ನೂ ಓದಿ:ತೆಲುಗು, ತಮಿಳು ಬಳಿಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟ ಕನ್ನಡದ ನಟ ದೀಕ್ಷಿತ್ ಶೆಟ್ಟಿ

ಈ ಹಿಂದೆ ‘ಅಥರ್ವ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದ್ದ ಅರುಣ್‌ ‘ಕೆಟಿಎಂ’ ಸಿನಿಮಾಕ್ಕೆ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. ಮಹಾಸಿಂಹ ಮೂವೀಸ್‌ ಬ್ಯಾನರ್‌ನಲ್ಲಿ ವಿನಯ್‌ ‘ಕೆಟಿಎಂ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ನವಿರಾದ ಪ್ರೇಮಕಹಾನಿ ಇರುವ ‘ಕೆಟಿಎಂ’ ಸಿನಿಮಾದಲ್ಲಿ ದೀಕ್ಷಿತ್‌ ಶೆಟ್ಟಿ ನಾಲ್ಕು ವಿಭಿನ್ನ ಶೇಡ್‌ನ‌ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಕಾಜಲ್‌ ಕುಂದರ್‌ ಹಾಗೂ ಸಂಜನಾ ನಾಯಕಿಯರಾಗಿದ್ದಾರೆ. ಉಳಿದಂತೆ ಉಷಾ ಭಂಡಾರಿ, ಪ್ರಕಾಶ್‌ ತುಮ್ಮಿನಾಡು, ಬಿಗ್ ಬಾಸ್ ಖ್ಯಾತಿಯ ತುಕಾಲಿ ಸಂತು, ರಘು ರಾಮನಕೊಪ್ಪ, ಶಾನಿಲ್‌ ಗುರು, ಬಾಬು ಹಿರಣಯ್ಯ, ದೇವ್‌ ದೇವಯ್ಯ, ಅಭಿಷೇಕ್‌ ಮೊದಲಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಸಿನಿಮಾಕ್ಕೆ ನವೀನ್‌ ಛಾಯಾಗ್ರಹಣ, ಅರ್ಜುನ್‌ ಕಿಟ್ಟು ಸಂಕಲನವಿದೆ. ಉಡುಪಿ, ಮಂಗಳೂರು, ಕಾರ್ಕಳ, ಬೆಂಗಳೂರು ಸುತ್ತಮುತ್ತ “ಕೆಟಿಎಂ’ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ಇದೇ ಫೆಬ್ರವರಿ 16ರಂದು ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ದೀಕ್ಷಿತ್ ಶೆಟ್ಟಿ ಪ್ರಸ್ತುತ ತೆಲುಗಿನ ‘ಗರ್ಲ್​ಫ್ರೆಂಡ್’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಜೊತೆ ನಟಿಸುತ್ತಿದ್ದಾರೆ. ಅದರ ಜೊತೆ ಕನ್ನಡದ ‘ಬ್ಲಿಂಕ್’, ‘ಕೆಟಿಎಂ’, ‘ಶೀಘ್ರಮೇವ ಕಲ್ಯಾಣ ಪ್ರಾಪ್ತಿರಸ್ತು’, ‘ಸ್ಟ್ರಾಬೆರ್ರಿ’, ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತೆಲುಗು ಮಾತ್ರವೇ ಅಲ್ಲದೆ ಒಂದು ತಮಿಳು ಹಾಗೂ ಮಲಯಾಳಂ ಸಿನಿಮಾದಲ್ಲಿಯೂ ದೀಕ್ಷಿತ್ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:00 pm, Sun, 4 February 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್