AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಚಿತ್ರರಂಗಕ್ಕೆ ಕಾಲಿಟ್ಟ ದಿಯಾ ಖ್ಯಾತಿಯ ನಟ ದೀಕ್ಷಿತ್​ ಶೆಟ್ಟಿ; ಕನ್ನಡದಲ್ಲೂ ತೆರೆಕಾಣಲಿದೆ ಸಿನಿಮಾ

ಸಿನಿಮಾದಲ್ಲಿ ಕಾಮಿಡಿ ಹೈಲೈಟ್​ ಆಗಿರಲಿದೆ. ಇದರ ಜತೆ ಸಸ್ಪೆನ್ಸ್​ ಕಥೆಯೂ ಈ ಚಿತ್ರದಲ್ಲಿದೆ. ಒಂದು ಕೊಲೆ, ಅದಕ್ಕಾಗಿ ನಡೆಯುವ ಪೊಲೀಸ್ ತನಿಖೆ, ಅಲ್ಲೊಂದು ಹುಡುಕಾಟ ಮುದ್ದಾದ ಪ್ರೇಮ ಕಥೆ ಸಿನಿಮಾದಲ್ಲಿದೆ.

ತೆಲುಗು ಚಿತ್ರರಂಗಕ್ಕೆ ಕಾಲಿಟ್ಟ ದಿಯಾ ಖ್ಯಾತಿಯ ನಟ ದೀಕ್ಷಿತ್​ ಶೆಟ್ಟಿ; ಕನ್ನಡದಲ್ಲೂ ತೆರೆಕಾಣಲಿದೆ ಸಿನಿಮಾ
ದೀಕ್ಷಿತ್​ ಶೆಟ್ಟಿ
ರಾಜೇಶ್ ದುಗ್ಗುಮನೆ
| Edited By: |

Updated on: May 24, 2021 | 4:08 PM

Share

ದಿಯಾ ಖ್ಯಾತಿಯ ನಟ ದೀಕ್ಷಿತ್​ ಶೆಟ್ಟಿ ಏನು ಮಾಡುತ್ತಿದ್ದಾರೆ? ಯಾವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನುವ ಪ್ರಶ್ನೆ ಅಭಿಮಾನಿಗಳದ್ದಾಗಿತ್ತು. ಈಗ ಅವರು ವಿಶೇಷ ಪ್ರಾಜೆಕ್ಟ್​ ಮೂಲಕ ಪ್ರೇಕ್ಷಕರ ಎದುರು ಬರೋಕೆ ರೆಡಿ ಆಗಿದ್ದಾರೆ. ‘ಆಣಿ ಮುತ್ತುಗಳು’ ಎಂದು ಸಿನಿಮಾಗೆ ಹೆಸರಿಡಲಾಗಿದೆ. ಈ ಚಿತ್ರ ತೆಲುಗಿನಲ್ಲಿ ಸಿದ್ಧವಾಗಿದ್ದು, ಕಾಮಿಡಿ ಮತ್ತು ಸಸ್ಪೆನ್ಸ್ ಥ್ರಿಲ್ಲರ್​ ಶೈಲಿಯಲ್ಲಿ ಮೂಡಿ ಬಂದಿದೆ. ವಿಶೇಷ ಎಂದರೆ ಕನ್ನಡಕ್ಕೂ ಈ ಸಿನಿಮಾ ಡಬ್ ಆಗಲಿದೆ.

ಮೂಗ, ಕಿವುಡ ಮತ್ತು ಕುರುಡ ಈ ಮೂವರ ಹಿನ್ನೆಲೆಯಲ್ಲಿ ಇಡೀ ಚಿತ್ರದ ಕಥೆ ಸಾಗಲಿದೆ. ಇದರಲ್ಲಿ ಮೂಗನ ಪಾತ್ರದಲ್ಲಿ ದೀಕ್ಷಿತ್ ಶೆಟ್ಟಿ ನಟಿಸಿದ್ದಾರೆ. ಇನ್ನುಳಿದಂತೆ ಕಿವುಡನ ಪಾತ್ರದಲ್ಲಿ ಶ್ರೀನಿವಾಸ್ ರೆಡ್ಡಿ, ಕುರುಡನ ಪಾತ್ರದಲ್ಲಿ ಅಚ್ಯುತ್ ರಾಮ್ ರಾವ್ ನಟಿಸಿದ್ದಾರೆ. ಈ ಪಾತ್ರವನ್ನು ಅವರು ಹೇಗೆ ನಿರ್ವಹಿಸುತ್ತಿದ್ದಾರೆ ಎನ್ನುವ ಕುತೂಹಲ ಪ್ರೇಕ್ಷಕರಲ್ಲಿ ಮೂಡಿದೆ. ಚಿತ್ರಮಂದಿರ ಸ್ಟುಡಿಯೋಸ್​ ಬ್ಯಾನರ್​ನಲ್ಲಿ ಅಚ್ಯುತ್ ರಾಮಾರಾವ್ ನಿರ್ಮಾಣ ಮಾಡಿರುವ ‘ಆಣಿ ಮುತ್ತುಗಳು’ ಚಿತ್ರವನ್ನು ಅಭಿಷೇಕ್ ರೆಡ್ಡಿ ನಿರ್ದೇಶನ ಮಾಡಿದ್ದಾರೆ.

ಸಿನಿಮಾದಲ್ಲಿ ಕಾಮಿಡಿ ಹೈಲೈಟ್​ ಆಗಿರಲಿದೆ. ಇದರ ಜತೆ ಸಸ್ಪೆನ್ಸ್​ ಕಥೆಯೂ ಈ ಚಿತ್ರದಲ್ಲಿದೆ. ಒಂದು ಕೊಲೆ, ಅದಕ್ಕಾಗಿ ನಡೆಯುವ ಪೊಲೀಸ್ ತನಿಖೆ, ಅಲ್ಲೊಂದು ಹುಡುಕಾಟ ಮುದ್ದಾದ ಪ್ರೇಮ ಕಥೆ ಸಿನಿಮಾದಲ್ಲಿದೆ. ತ್ವಿಷಾ ಶರ್ಮಾ ನಾಯಕಿಯಾಗಿ ನಟಿಸಿದ್ದು, ದೀಕ್ಷಿತ್​ ಶೆಟ್ಟಿಗೆ ಜೋಡಿಯಾಗಿದ್ದಾರೆ. ನಟಿ ಶ್ವೇತಾ ವರ್ಮಾ ಸಹ ಪ್ರಮುಖ ಪಾತ್ರದಲ್ಲಿದ್ದಾರೆ.

ಅಪ್ಪಾರ್ಲ ಸಾಯಿ ಕಲ್ಯಾಣ್ ಕಥೆ, ಚಿತ್ರಕಥೆ ಬರೆದರೆ, ಗರುಡವೇಗ ಅಂಜಿ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಸುರೇಶ್ ಬೊಬ್ಲಿ ಸಂಗೀತ ನೀಡಿದ್ದಾರೆ. ಅಚ್ಯುತ್ ರಾಮಾರಾವ್ ನಿರ್ಮಾಣ ಮಾಡಿದ್ದು, ತೇಝ ಚೀಪುರುಪಲ್ಲಿ, ರವೀಂದ್ರ ರೆಡ್ಡಿ ಅಡ್ಡುಲ ಸಹ ನಿರ್ಮಾಪಕರಾಗಿದ್ದಾರೆ.

ಚಿತ್ರತಂಡ ಈಗಾಗಲೇ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿಕೊಂಡಿದೆ. ಸದ್ಯ, ಲಾಕ್​ಡೌನ್​ ಇರುವುದರಿಂದ ಚಿತ್ರಮಂದಿರಗಳು ಮುಚ್ಚಿವೆ. ಎಲ್ಲವೂ ಸಮಸ್ಥಿತಿಗೆ ಮರಳಿದ ನಂತರದಲ್ಲಿ ಸಿನಿಮಾವನ್ನು ತೆರೆಗೆ ತರುವ ಆಲೋಚನೆ ಚಿತ್ರತಂಡದ್ದು.

ಇದನ್ನೂ ಓದಿ: ‘ನಾನು ಜೈಲಿಗೆ ಹೋಗಲು ಹಿಂಜರಿಯುವುದಿಲ್ಲ’; ಪುತ್ರಿ ಸುಹಾನಾ ಬಾಯ್​ಫ್ರೆಂಡ್​ ಬಗ್ಗೆ ಶಾರುಖ್​ ಖಡಕ್​ ವಾರ್ನಿಂಗ್​

ಮತ್ತೆ ಒಂದಾಗಲಿದೆ ದಿಯಾ ಜೋಡಿ; ಹೇಗಿರಲಿದೆ ಈ ಸಿನಿಮಾ ಕಥೆ?

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?