AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ ನಾನಿ ಸಿನಿಮಾ ಸೆಟ್​ ಸೇರಿಕೊಂಡ ದೀಕ್ಷಿತ್​ ಶೆಟ್ಟಿ; ‘ದಿಯಾ’ ಹೀರೋಗೆ ಬಂಪರ್​ ಆಫರ್​

ನಾನಿ ‘ಮೀಟ್​ ಕ್ಯೂಟ್​’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದನ್ನು ನಾನಿ ಅವರೇ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಬರುವ ಪ್ರಮುಖ ಪಾತ್ರಕ್ಕೆ ದೀಕ್ಷಿತ್​ ಆಯ್ಕೆ ಮಾಡಿಕೊಳ್ಳಲಾಗಿದೆ.

ಟಾಲಿವುಡ್​ ನಾನಿ ಸಿನಿಮಾ ಸೆಟ್​ ಸೇರಿಕೊಂಡ ದೀಕ್ಷಿತ್​ ಶೆಟ್ಟಿ; ‘ದಿಯಾ’ ಹೀರೋಗೆ ಬಂಪರ್​ ಆಫರ್​
ಟಾಲಿವುಡ್​ ನಾನಿ ಸಿನಿಮಾ ಸೆಟ್​ ಸೇರಿಕೊಂಡ ದೀಕ್ಷಿತ್​ ಶೆಟ್ಟಿ; ‘ದಿಯಾ’ ಹೀರೋಗೆ ಬಂಪರ್​ ಆಫರ್​
TV9 Web
| Edited By: |

Updated on: Sep 23, 2021 | 3:21 PM

Share

ನಟ ದೀಕ್ಷಿತ್ ಶೆಟ್ಟಿ ಅಭಿನಯದ ‘ದಿಯಾ’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈ ಸಿನಿಮಾದಿಂದ ದೀಕ್ಷಿತ್​ ಶೆಟ್ಟಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿತ್ತು. ಇದರಿಂದ ಅವರಿಗೆ ಆಫರ್​ಗಳ ಸಂಖ್ಯೆ ಹೆಚ್ಚಿತ್ತು. ನಂತರ ಅವರು ತೆಲುಗಿನ ‘ಮುಗ್ಗುರು ಮೊನಗಲ್ಲು’ ಸಿನಿಮಾದಲ್ಲೂ ನಟಿಸಿ ಟಾಲಿವುಡ್​ ಮಂದಿಗೆ ಪರಿಚಯವಾದರು. ಈಗ ಅವರಿಗೆ ಮತ್ತೊಂದು ತೆಲುಗು ಸಿನಿಮಾದಲ್ಲಿ ನಟಿಸೋಕೆ ಅವಕಾಶ ಸಿಕ್ಕಿದೆ. ಅದು ಖ್ಯಾತ ನಟ ನಾನಿ ಜತೆ ಅನ್ನೋದು ವಿಶೇಷ.

ನಾನಿ ‘ಮೀಟ್​ ಕ್ಯೂಟ್​’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದನ್ನು ನಾನಿ ಅವರೇ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಬರುವ ಪ್ರಮುಖ ಪಾತ್ರಕ್ಕೆ ದೀಕ್ಷಿತ್​ ಆಯ್ಕೆ ಮಾಡಿಕೊಳ್ಳಲಾಗಿದೆ. ದೀಕ್ಷಿತ್​ಗೆ ಜತೆಯಾಗಿ ಆಕಾಂಕ್ಷಾ ಸಿಂಗ್​ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದಲ್ಲಿ ದೀಕ್ಷಿತ್​ ಪಾತ್ರ ತುಂಬಾನೇ ಪ್ರಾಮುಖ್ಯತೆ ವಹಿಸಲಿದೆಯಂತೆ.

ನಾನಿ ಟಾಲಿವುಡ್​ನಲ್ಲಿ ಬಹುಬೇಡಿಕೆಯ ನಟ. ಅವರ ಸಿನಿಮಾ ಮೇಲೆ ಅಭಿಮಾನಿಗಳಿಗೆ ದೊಡ್ಡ ನಿರೀಕ್ಷೆ ಇರುತ್ತದೆ. ಇನ್ನು, ಅವರ ಜತೆ ನಟಿಸಿದರೆ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್​ ಸಿಗಲಿದೆ. ಈಗ ದೀಕ್ಷಿತ್​ಗೆ ನಾನಿ ಜತೆ ತೆರೆ ಹಂಚಿಕೊಳ್ಳೋಕೆ ಅವಕಾಶ ಸಿಕ್ಕಿದ್ದು, ಅವರ ಕರಿಯರ್​ಗೆ ಮೈಲೇಜ್​ ಸಿಗುವ ನಿರೀಕ್ಷೆ ಇದೆ. ಈ ಸಿನಿಮಾವನ್ನು ನಾನಿ ನಿರ್ಮಾಣ ಮಾಡಿದರೆ, ಅವರ ಸಹೋದರಿ ದೀಪ್ತಿ ಗಂಟಾ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಇನ್ನೂ ಕೆಲ ಖ್ಯಾತ ಕಲಾವಿದರು ನಟಿಸುವ ಸಾಧ್ಯತೆ ಇದೆ.

‘ದಿಯಾ’ ಸಿನಿಮಾ 2020ರ ಆರಂಭದಲ್ಲಿ ತೆರೆಕಂಡಿತ್ತು. ಕೆ.ಎಸ್​. ಅಶೋಕ್​ ಈ ಸಿನಿಮಾ ನಿರ್ದೇಶನ ಮಾಡಿದ್ದರು. ಪೃಥ್ವಿ ಅಂಬರ್, ದೀಕ್ಷಿತ್​ ಶೆಟ್ಟಿ, ಖುಷಿ ರವಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಸಿನಿಮಾ ಹಿಂದಿಗೆ ರಿಮೇಕ್​ ಆಗುತ್ತಿದೆ. ತೆಲುಗಿನಲ್ಲಿ ಈ ಸಿನಿಮಾ ರಿಮೇಕ್​ ಆಗಿ ತೆರೆಕಂಡಿದೆ.

ಇದನ್ನೂ ಓದಿ: ಅದ್ಭುತವಾಗಿ ಕಿಸ್​ ಮಾಡುವ ಪುರುಷರೆಂದರೆ ಇಷ್ಟ ಎಂದ ಮಲೈಕಾ ಅರೋರಾ; ಮದುವೆ ವಿಚಾರದಲ್ಲಿ ಮೌನ

ಸರಳ ಸುಂದರಿ ದಿಯಾ ಮಿರ್ಜಾಳ ಫ್ಯಾಶನ್ ಸ್ಟೇಟ್​ಮೆಂಟ್​ ಸಹ ಸರಳ ಆದರೆ ಅಷ್ಟೇ ಸುಂದರ!

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​