ಟಾಲಿವುಡ್​ ನಾನಿ ಸಿನಿಮಾ ಸೆಟ್​ ಸೇರಿಕೊಂಡ ದೀಕ್ಷಿತ್​ ಶೆಟ್ಟಿ; ‘ದಿಯಾ’ ಹೀರೋಗೆ ಬಂಪರ್​ ಆಫರ್​

ನಾನಿ ‘ಮೀಟ್​ ಕ್ಯೂಟ್​’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದನ್ನು ನಾನಿ ಅವರೇ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಬರುವ ಪ್ರಮುಖ ಪಾತ್ರಕ್ಕೆ ದೀಕ್ಷಿತ್​ ಆಯ್ಕೆ ಮಾಡಿಕೊಳ್ಳಲಾಗಿದೆ.

ಟಾಲಿವುಡ್​ ನಾನಿ ಸಿನಿಮಾ ಸೆಟ್​ ಸೇರಿಕೊಂಡ ದೀಕ್ಷಿತ್​ ಶೆಟ್ಟಿ; ‘ದಿಯಾ’ ಹೀರೋಗೆ ಬಂಪರ್​ ಆಫರ್​
ಟಾಲಿವುಡ್​ ನಾನಿ ಸಿನಿಮಾ ಸೆಟ್​ ಸೇರಿಕೊಂಡ ದೀಕ್ಷಿತ್​ ಶೆಟ್ಟಿ; ‘ದಿಯಾ’ ಹೀರೋಗೆ ಬಂಪರ್​ ಆಫರ್​
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 23, 2021 | 3:21 PM

ನಟ ದೀಕ್ಷಿತ್ ಶೆಟ್ಟಿ ಅಭಿನಯದ ‘ದಿಯಾ’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈ ಸಿನಿಮಾದಿಂದ ದೀಕ್ಷಿತ್​ ಶೆಟ್ಟಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿತ್ತು. ಇದರಿಂದ ಅವರಿಗೆ ಆಫರ್​ಗಳ ಸಂಖ್ಯೆ ಹೆಚ್ಚಿತ್ತು. ನಂತರ ಅವರು ತೆಲುಗಿನ ‘ಮುಗ್ಗುರು ಮೊನಗಲ್ಲು’ ಸಿನಿಮಾದಲ್ಲೂ ನಟಿಸಿ ಟಾಲಿವುಡ್​ ಮಂದಿಗೆ ಪರಿಚಯವಾದರು. ಈಗ ಅವರಿಗೆ ಮತ್ತೊಂದು ತೆಲುಗು ಸಿನಿಮಾದಲ್ಲಿ ನಟಿಸೋಕೆ ಅವಕಾಶ ಸಿಕ್ಕಿದೆ. ಅದು ಖ್ಯಾತ ನಟ ನಾನಿ ಜತೆ ಅನ್ನೋದು ವಿಶೇಷ.

ನಾನಿ ‘ಮೀಟ್​ ಕ್ಯೂಟ್​’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದನ್ನು ನಾನಿ ಅವರೇ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಬರುವ ಪ್ರಮುಖ ಪಾತ್ರಕ್ಕೆ ದೀಕ್ಷಿತ್​ ಆಯ್ಕೆ ಮಾಡಿಕೊಳ್ಳಲಾಗಿದೆ. ದೀಕ್ಷಿತ್​ಗೆ ಜತೆಯಾಗಿ ಆಕಾಂಕ್ಷಾ ಸಿಂಗ್​ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದಲ್ಲಿ ದೀಕ್ಷಿತ್​ ಪಾತ್ರ ತುಂಬಾನೇ ಪ್ರಾಮುಖ್ಯತೆ ವಹಿಸಲಿದೆಯಂತೆ.

ನಾನಿ ಟಾಲಿವುಡ್​ನಲ್ಲಿ ಬಹುಬೇಡಿಕೆಯ ನಟ. ಅವರ ಸಿನಿಮಾ ಮೇಲೆ ಅಭಿಮಾನಿಗಳಿಗೆ ದೊಡ್ಡ ನಿರೀಕ್ಷೆ ಇರುತ್ತದೆ. ಇನ್ನು, ಅವರ ಜತೆ ನಟಿಸಿದರೆ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್​ ಸಿಗಲಿದೆ. ಈಗ ದೀಕ್ಷಿತ್​ಗೆ ನಾನಿ ಜತೆ ತೆರೆ ಹಂಚಿಕೊಳ್ಳೋಕೆ ಅವಕಾಶ ಸಿಕ್ಕಿದ್ದು, ಅವರ ಕರಿಯರ್​ಗೆ ಮೈಲೇಜ್​ ಸಿಗುವ ನಿರೀಕ್ಷೆ ಇದೆ. ಈ ಸಿನಿಮಾವನ್ನು ನಾನಿ ನಿರ್ಮಾಣ ಮಾಡಿದರೆ, ಅವರ ಸಹೋದರಿ ದೀಪ್ತಿ ಗಂಟಾ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಇನ್ನೂ ಕೆಲ ಖ್ಯಾತ ಕಲಾವಿದರು ನಟಿಸುವ ಸಾಧ್ಯತೆ ಇದೆ.

‘ದಿಯಾ’ ಸಿನಿಮಾ 2020ರ ಆರಂಭದಲ್ಲಿ ತೆರೆಕಂಡಿತ್ತು. ಕೆ.ಎಸ್​. ಅಶೋಕ್​ ಈ ಸಿನಿಮಾ ನಿರ್ದೇಶನ ಮಾಡಿದ್ದರು. ಪೃಥ್ವಿ ಅಂಬರ್, ದೀಕ್ಷಿತ್​ ಶೆಟ್ಟಿ, ಖುಷಿ ರವಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಸಿನಿಮಾ ಹಿಂದಿಗೆ ರಿಮೇಕ್​ ಆಗುತ್ತಿದೆ. ತೆಲುಗಿನಲ್ಲಿ ಈ ಸಿನಿಮಾ ರಿಮೇಕ್​ ಆಗಿ ತೆರೆಕಂಡಿದೆ.

ಇದನ್ನೂ ಓದಿ: ಅದ್ಭುತವಾಗಿ ಕಿಸ್​ ಮಾಡುವ ಪುರುಷರೆಂದರೆ ಇಷ್ಟ ಎಂದ ಮಲೈಕಾ ಅರೋರಾ; ಮದುವೆ ವಿಚಾರದಲ್ಲಿ ಮೌನ

ಸರಳ ಸುಂದರಿ ದಿಯಾ ಮಿರ್ಜಾಳ ಫ್ಯಾಶನ್ ಸ್ಟೇಟ್​ಮೆಂಟ್​ ಸಹ ಸರಳ ಆದರೆ ಅಷ್ಟೇ ಸುಂದರ!

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ