AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದ ವಿರುದ್ಧ ಈಜಲು ನಿರ್ಧರಿಸಿದ ‘ಧೀರ ಭಗತ್ ರಾಯ್’; ಡಿ.6ಕ್ಕೆ ಬಿಡುಗಡೆ

ದೊಡ್ಡ ಬಜೆಟ್​ನ ಸಿನಿಮಾಗಳ ಎದುರಿನಲ್ಲಿ ಸಣ್ಣ ಬಜೆಟ್​ನ ಸಿನಿಮಾಗಳನ್ನು ತೆರೆಕಾಣಿಸಲು ನಿರ್ಮಾಪಕರು ಹಿಂದೇಟು ಹಾಕುವುದು ಕಾಮನ್. ಆದರೆ ಕೆಲವು ಚಿತ್ರತಂಡಗಳು ದೊಡ್ಡ ಪ್ರವಾಹದ ವಿರುದ್ಧ ಕೂಡ ಈಜುವ ನಿರ್ಧಾರ ತೆಗೆದುಕೊಳ್ಳುತ್ತವೆ. ಅಂಥ ಸಿನಿಮಾಗಳ ಸಾಲಿನಲ್ಲಿ ನಿಲ್ಲುತ್ತಿದೆ ‘ಧೀರ ಭಗತ್ ರಾಯ್’ ಚಿತ್ರ. ಈ ಸಿನಿಮಾದಲ್ಲಿ ಹೊಸ ಕಲಾವಿದರು ನಟಿಸಿದ್ದಾರೆ.

ಪ್ರವಾಹದ ವಿರುದ್ಧ ಈಜಲು ನಿರ್ಧರಿಸಿದ ‘ಧೀರ ಭಗತ್ ರಾಯ್’; ಡಿ.6ಕ್ಕೆ ಬಿಡುಗಡೆ
‘ಧೀರ ಭಗತ್ ರಾಯ್’ ಚಿತ್ರತಂಡ
ಮದನ್​ ಕುಮಾರ್​
|

Updated on: Nov 11, 2024 | 4:20 PM

Share

ಈ ವರ್ಷ ಡಿಸೆಂಬರ್​ನಲ್ಲಿ ‘ಪುಷ್ಪ 2’ ಸಿನಿಮಾ ಧೂಳೆಬ್ಬಿಸಲಿದೆ. ಡಿಸೆಂಬರ್​ 5ರಂದು ಆ ಸಿನಿಮಾ ತೆರೆಕಾಣಲಿದೆ. ಮರುದಿನವೇ ಕನ್ನಡದ ‘ಧೀರ ಭಗತ್ ರಾಯ್’ ಸಿನಿಮಾ ಕೂಡ ಬಿಡುಗಡೆ ಆಗಲಿದೆ. ಇದನ್ನು ಪ್ರವಾಹದ ವಿರುದ್ಧ ಈಜುವುದು ಎಂದೇ ಹೇಳಬೇಕು. ಯಾಕೆಂದರೆ, ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ನಿರ್ಮಾಣ ಆಗಿರುವ ‘ಪುಷ್ಪ 2’ ಸಿನಿಮಾ ಬಿಡುಗಡೆ ಆದಾಗ ಬಹುಪಾಲು ಚಿತ್ರಮಂದಿರಗಳನ್ನು ಆಕ್ರಮಿಸಿಕೊಳ್ಳುತ್ತದೆ. ಆದರೆ ಅದೇ ಸಮಯದಲ್ಲಿ ‘ಧೀರ ಭಗತ್ ರಾಯ್’ ಸಿನಿಮಾ ಬಿಡುಗಡೆಯಾದರೆ ಚಿತ್ರಮಂದಿರಗಳ ಕೊರತೆ ಎದುರಾಗುವ ಸಾಧ್ಯತೆ ಇರುತ್ತದೆ. ಹಾಗಿದ್ದರೂ ಕೂಡ ದೊಡ್ಡ ಸಿನಿಮಾದ ಎದುರಿನಲ್ಲೇ ಪೈಪೋಟಿಗೆ ಇಳಿಯಲು ‘ಧೀರ ಭಗತ್ ರಾಯ್’ ಸಿನಿಮಾ ತಂಡ ನಿರ್ಧರಿಸಿದೆ.

ಟ್ರೇಲರ್​ ಮೂಲಕ ‘ಧೀರ ಭಗತ್ ರಾಯ್’ ಸಿನಿಮಾ ಗಮನ ಸೆಳೆದಿದೆ. ಸಮಾಜದಲ್ಲಿನ ಅನ್ಯಾಯಗಳ ವಿರುದ್ಧ ಗುಡುಗುವಂತಹ ಕಥೆ ಈ ಸಿನಿಮಾದಲ್ಲಿ ಇದೆ. ಉಳುವವನೇ ಹೊಲದ ಒಡೆಯ ಎಂಬ ಘೋಷವಾಕ್ಯದೊಂದಿಗೆ ಬಂದ ಭೂಸುಧಾರಣಾ ಕಾಯ್ದೆಯ ಅಂಶಗಳನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ‘ಕಾಟೇರ’ ಸಿನಿಮಾದಲ್ಲಿ ಸಹ ಇಂಥದ್ದೇ ವಿಷಯ ಇತ್ತು. ಹಾಗಾಗಿ ‘ಕಾಟೇರ’ ರೀತಿಯೇ ತಮ್ಮ ಸಿನಿಮಾಗೆ ಕೂಡ ಜನಬೆಂಬಲ ಸಿಗಲಿಗೆ ಎಂಬ ಆತ್ಮವಿಶ್ವಾಸ ‘ಧೀರ ಭಗತ್ ರಾಯ್’ ಚಿತ್ರತಂಡಕ್ಕೆ ಇದೆ.

ಈ ಸಿನಿಮಾದಲ್ಲಿ ಹೊಸ ಪ್ರತಿಭೆಗಳು ಪ್ರಮುಖ ಪಾತ್ರ ಮಾಡಿದ್ದಾರೆ. ರಾಕೇಶ್ ದಳವಾಯಿ ಅವರು ಹೀರೋ ಆಗಿ ನಟಿಸಿದ್ದಾರೆ. ಟ್ರೇಲರ್​ನಲ್ಲಿ ಅವರ ಆ್ಯಕ್ಷನ್​ ಅಬ್ಬರ ಕಾಣಿಸಿದೆ. ಹೊಸ ನಿರ್ದೇಶಕ ಕರ್ಣನ್ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್ ಹೇಳಿದ್ದಾರೆ. ಚೊಚ್ಚಲ ಸಿನಿಮಾದಲ್ಲೇ ಅವರು ಗಂಭೀರವಾದ ಕಥಾವಸ್ತುವನ್ನು ಆಯ್ದುಕೊಂಡಿದ್ದಾರೆ. ಟ್ರೇಲರ್​ ಮೂಲಕ ಅವರ ಕಸುಬು ಕಾಣಿಸಿದೆ.

‘ವೈಟ್ ಲೋಟಸ್ ಎಂಟರ್​ಟೇನ್ಮೆಂಟ್​’, ‘ಶ್ರೀ ಓಂ ಸಿನಿ ಎಂಟರ್​ಟೇನರ್ಸ್​’ ಸಂಸ್ಥೆಗಳ ಮೂಲಕ ‘ಧೀರ ಭಗತ್ ರಾಯ್’ ಸಿನಿಮಾ ನಿರ್ಮಾಣ ಆಗಿದೆ. ಹಲವು ವರ್ಷಗಳ ಹಿಂದೆ ‘ಬಾಹುಬಲಿ’ ಸಿನಿಮಾದ ಎದುರಿನಲ್ಲಿ ಕನ್ನಡದ ‘ರಂಗಿತರಂಗ’ ಸಿನಿಮಾ ಬಿಡುಗಡೆಯಾಗಿ ಗೆದ್ದಿತ್ತು. ಅದನ್ನೇ ಸ್ಫೂರ್ತಿಯಾಗಿ ಇಟ್ಟುಕೊಂಡು ‘ಪುಷ್ಪ 2’ ಸಿನಿಮಾದ ಎದುರು ‘ಧೀರ ಭಗತ್ ರಾಯ್’ ಸಿನಿಮಾವನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಪೈಪೋಟಿ ಹೇಗಿರಬಹುದು ಎಂಬುದನ್ನು ಕಾದುನೋಡಬೇಕು.

ಇದನ್ನೂ ಓದಿ: ಯಶ್​ಗೆ ಕನ್ನಡದಲ್ಲೇ ಪ್ರಶ್ನೆ ಕೇಳಿದ ಮುಂಬೈ ವ್ಯಕ್ತಿ; ರಾಕಿಂಗ್ ಸ್ಟಾರ್ ಉತ್ತರ ಹೇಗಿತ್ತು?

ಈ ಸಿನಿಮಾಗೆ ಪೂರ್ಣಚಂದ್ರ ತೇಜಸ್ವಿ ಅವರು ಸಂಗೀತ ನೀಡಿದ್ದಾರೆ. ಎನ್.ಎಂ. ವಿಶ್ವ ಅವರ ಸಂಕಲನ ಈ ಚಿತ್ರಕ್ಕಿದೆ. ಹೊಸ ನಟಿ ಸುಚರಿತಾ ಅವರು ನಾಯಕಿಯಾಗಿ ಅಭಿನಯಿಸಿದ್ದಾರೆ. ನೀನಾಸಂ ಅಶ್ವತ್ಥ್​, ಶರತ್ ಲೋಹಿತಾಶ್ವ, ಹರಿರಾಮ್, ಪ್ರವೀಣ್ ಗೌಡ ಹೆಚ್.ಸಿ, ಕೆ.ಎಮ್. ಸಂದೇಶ್, ಸುಧೀರ್ ಕುಮಾರ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​