AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನ್ವಿತಾ-ಧೀರೇನ್​ ಲಿಪ್​ ಲಾಕ್​; ಪ್ರೇಮಿಗಳ ದಿನಕ್ಕೆ ರೊಮ್ಯಾಂಟಿಕ್​ ಆಗಿ ಕಾಣಿಸಿಕೊಂಡ ಜೋಡಿ

‘ಶಿವ 143’ ಚಿತ್ರಕ್ಕೆ ಅನಿಲ್​ ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಚೊಚ್ಚಲ ಚಿತ್ರದಲ್ಲೇ ಧೀರೇನ್​ ರಾಮ್​ಕುಮಾರ್ ಬೋಲ್ಡ್​ ಆದಂತಹ ಪಾತ್ರ ಆಯ್ಕೆ ಮಾಡಿಕೊಂಡಿದ್ದಾರೆ. ಅವರಿಗೆ ಮಾನ್ವಿತಾ ಕಾಮತ್​ ಸಾಥ್​ ನೀಡಿದ್ದಾರೆ.

ಮಾನ್ವಿತಾ-ಧೀರೇನ್​ ಲಿಪ್​ ಲಾಕ್​; ಪ್ರೇಮಿಗಳ ದಿನಕ್ಕೆ ರೊಮ್ಯಾಂಟಿಕ್​ ಆಗಿ ಕಾಣಿಸಿಕೊಂಡ ಜೋಡಿ
ಮಾನ್ವಿತಾ ಕಾಮತ್​, ಧೀರೇನ್​ ರಾಮ್​ಕುಮಾರ್​
TV9 Web
| Edited By: |

Updated on: Feb 14, 2022 | 1:23 PM

Share

ನಟಿ ಮಾನ್ವಿತಾ ಕಾಮತ್​ (Manvitha Kamath) ಅವರು ಚಂದನವನದಲ್ಲಿ ಸಖತ್​ ಜನಪ್ರಿಯತೆ ಪಡೆದುಕೊಂಡಿದ್ದಾರೆ. ‘ಕೆಂಡಸಂಪಿಗೆ’, ‘ಟಗರು’, ‘ಚೌಕ’ ಸಿನಿಮಾಗಳ ಮೂಲಕ ಅವರ ಖ್ಯಾತಿ ಕರುನಾಡಿನಾದ್ಯಂತ ಹಬ್ಬಿದೆ. ಸಿನಿಮಾ ಮತ್ತು ಪಾತ್ರಗಳ ಆಯ್ಕೆಯಲ್ಲಿ ತಮ್ಮದೇ ಆದ ಒಂದಷ್ಟು ನಿಯಮಗಳನ್ನು ಪಾಲಿಸುತ್ತಿರುವ ಅವರು ಈಗ ‘ಶಿವ 143’ (Shiva 143 Movie) ಚಿತ್ರದ ಮೂಲಕ ಗಮನ ಸೆಳೆಯಲು ಸಜ್ಜಾಗಿದ್ದಾರೆ. ಈ ಚಿತ್ರದಲ್ಲಿ ಡಾ. ರಾಜ್​ಕುಮಾರ್​ ಕುಟುಂಬದ ಕುಡಿ ಧೀರೇನ್​ ರಾಮ್​ಕುಮಾರ್​ ಮತ್ತು ಮಾನ್ವಿತಾ ಕಾಮತ್​ ಜೋಡಿಯಾಗಿ ನಟಿಸಿದ್ದಾರೆ. ಪ್ರೇಮಿಗಳ ದಿನದ ಪ್ರಯುಕ್ತ ಇಂದು (ಫೆ.14) ‘ಶಿವ 143’ ಸಿನಿಮಾದ ಹೊಸ ಹಾಡು ಬಿಡುಗಡೆ ಆಗಿದೆ. ಈ ಹಾಡಿನಲ್ಲಿ ಮಾನ್ವಿತಾ ಕಾಮತ್​ ಹಾಗೂ ಧೀರೇನ್​ ರಾಮ್​ಕುಮಾರ್​ (Dheeren Ramkumar) ತುಂಬ ಬೋಲ್ಡ್​ ಆಗಿ ನಟಿಸಿದ್ದಾರೆ. ಇಬ್ಬರ ನಡುವಿನ ಲಿಪ್​ ಲಾಕ್​ ದೃಶ್ಯಗಳು ಪಡ್ಡೆಗಳ ಕಣ್ಣು ಕುಕ್ಕುತ್ತಿವೆ. ಸಖತ್​ ರೊಮ್ಯಾಂಟಿಕ್​ ಆಗಿ ಮೂಡಿಬಂದಿರುವ ಈ ಹಾಡಿನ ದೃಶ್ಯ ತುಣುಕುಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಒಂದಲ್ಲ ಎರಡಲ್ಲ, ಹತ್ತಾರು ಬಾರಿ ಮಾನ್ವಿತಾ ಮತ್ತು ಧೀರೇನ್​ ಲಿಪ್​ ಲಾಕ್​ ಮಾಡಿದ್ದಾರೆ. ಈ ಮೂಲಕ ‘ಶಿವ 143’ ಚಿತ್ರದ ಮೇಲಿನ ಕೌತುಕ ಹೆಚ್ಚುವಂತೆ ಮಾಡಿದ್ದಾರೆ.

ಪ್ರೇಮಿಗಳ ದಿನದ ಸಲುವಾಗಿ ಬಿಡುಗಡೆ ಆಗಿರುವ ‘ಮಳೆ ಹನಿಯೇ..’ ಹಾಡಿಗೆ ಕ್ರಾಂತಿ ಕುಮಾರ್​ ಸಾಹಿತ್ಯ ಬರೆದಿದ್ದಾರೆ. ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ನಿಹಾಲ್​ ಮತ್ತು ಪೃಥ್ವಿ ಭಟ್​ ಕಂಠದಿಂದ ಈ ಹಾಡು ಮೂಡಿಬಂದಿದೆ. ಈ ಗೀತೆಯಲ್ಲಿ ಮಾನ್ವಿತಾ ಕಾಮತ್​ ಮತ್ತು ಧೀರೇನ್​ ಕಾಣಸಿಕೊಂಡಿರುವ ಪರಿ ನೋಡಿ ಪ್ರೇಕ್ಷಕರು ಅಚ್ಚರಿಪಟ್ಟಿದ್ದಾರೆ. ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

‘ಶಿವ 143’ ಚಿತ್ರಕ್ಕೆ ಅನಿಲ್​ ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಧೀರೇನ್​ ರಾಮ್​ಕುಮಾರ್​ ಅವರಿಗೆ ಇದು ಮೊದಲ ಸಿನಿಮಾ. ಚೊಚ್ಚಲ ಚಿತ್ರದಲ್ಲೇ ಅವರು ಬೋಲ್ಡ್​ ಆದಂತಹ ಪಾತ್ರ ಆಯ್ಕೆ ಮಾಡಿಕೊಂಡಿದ್ದಾರೆ. ಅವರಿಗೆ ಮಾನ್ವಿತಾ ಕಾಮತ್​ ಸಾಥ್​ ನೀಡಿದ್ದಾರೆ. ಇಬ್ಬರ ನಡುವಿನ ಕೆಮಿಸ್ಟ್ರಿ ಈ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗುವ ಸೂಚನೆ ಸಿಕ್ಕಿದೆ. ಈ ಹಾಡಿನಲ್ಲಿ ಬಗೆಬಗೆಯ ಮುತ್ತಿನಾಟ ಇರುವುದು ಯಾಕೆ? ಕಿಸ್ಸಿಂಗ್​ ದೃಶ್ಯಗಳಿಗೆ ಕಥೆಯಲ್ಲಿ ಎಷ್ಟು ಮಹತ್ವ ಇದೆ? ಎಂಬಿತ್ಯಾದಿ ಪ್ರಶ್ನೆಗಳು ಈಗ ಪ್ರೇಕ್ಷಕರ ಮನದಲ್ಲಿ ಮೂಡಿವೆ. ಈ ಚಿತ್ರಕ್ಕೆ ಜಯಣ್ಣ, ಭೋಗೇಂದ್ರ ಮತ್ತು ಡಾ. ಸೂರಿ ಬಂಡವಾಳ ಹೂಡಿದ್ದಾರೆ.

ಬಹಳ ಹಿಂದೆಯೇ ಸೆಟ್ಟೇರಿದ್ದ ‘ಶಿವ 143’ ಚಿತ್ರ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ಸಿನಿಮಾದ ಕೆಲಸಗಳು ವಿಳಂಬ ಆದವು. ಆದಷ್ಟು ಬೇಗ ಈ ಸಿನಿಮಾವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇದನ್ನೂ ಓದಿ:

ಮಾನ್ವಿತಾ ಕಾಮತ್​ ರಂಗುರಂಗಿನ ಫೋಟೋಶೂಟ್​

ಪೃಥ್ವಿ ಅಂಬರ್​-ಮಾನ್ವಿತಾ ಕಾಮತ್​ ಈಗ ‘ಹ್ಯಾಪಿಲಿ ಮ್ಯಾರೀಡ್’

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ