AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬದ ದಿನವೇ ಧೀರೇನ್​ ರಾಮ್​ಕುಮಾರ್​ ಹೆಸರು ಬದಲು; ಹೊಸ ಹೆಸರು ಏನು?

‘ತಾತನ ಹೆಸರು ಇಟ್ಟುಕೊಳ್ಳಬೇಕು ಎಂಬ ಆಲೋಚನೆ ನನಗೆ ಮೊದಲೇ ಇತ್ತು. ನಮ್ಮ ತಾತನ ಹೆಸರನ್ನು ನಾನು ಇಟ್ಟುಕೊಂಡಿದ್ದೇನೆ. ಬೇರೆಯವರ ಹೆಸರು ಇಟ್ಟುಕೊಂಡಿಲ್ಲ’ ಎಂದು ಧೀರೇನ್​ ಆರ್​. ರಾಜ್​ಕುಮಾರ್​ ಹೇಳಿದ್ದಾರೆ. ಕೊರಗಜ್ಜನ ದೇವಸ್ಥಾನಕ್ಕೆ ಹೋದಾಗಲೂ ಅವರಿಗೆ ಹೆಸರು ಬದಲಾವಣೆ ಬಗ್ಗೆ ಸಲಹೆ ಸಿಕ್ಕಿತ್ತು. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಈ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಹುಟ್ಟುಹಬ್ಬದ ದಿನವೇ ಧೀರೇನ್​ ರಾಮ್​ಕುಮಾರ್​ ಹೆಸರು ಬದಲು; ಹೊಸ ಹೆಸರು ಏನು?
ಕಾರ್ತಿಕ್​ ಗೌಡ, ಧೀರೇನ್​, ಯೋಗಿ ಜಿ. ರಾಜ್​
ಮದನ್​ ಕುಮಾರ್​
|

Updated on: Apr 29, 2024 | 7:16 PM

Share

ಚಿತ್ರರಂಗಕ್ಕೆ ಕಾಲಿಡುವಾಗ ಕೆಲವರು ಹೆಸರು ಬದಲಾವಣೆ ಮಾಡಿಕೊಳ್ಳುತ್ತಾರೆ. ಇನ್ನೂ ಕೆಲವರು ನಂತರದಲ್ಲಿ ಹೆಸರು ಬದಲಾವಣೆಯ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ಈಗ ನಟ ಧೀರೇನ್​ ರಾಮ್​ಕುಮಾರ್​ (Dheeren Ramkumar) ಕೂಡ ಅಂತಹ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂದು (ಏಪ್ರಿಲ್​ 29) ಅವರ ಜನ್ಮದಿನ. ಈ ವಿಶೇಷ ದಿನದಂದೇ ಅವರು ಹೊಸ ಸುದ್ದಿ ನೀಡಿದ್ದಾರೆ. ಅವರ ಹೆಸರು ಬದಲಾಗಿದೆ. ಧೀರೇನ್ ರಾಮ್ ಕುಮಾರ್ ಅವರ ಹೆಸರು ಧೀರೇನ್ ಆರ್. ರಾಜ್​ಕುಮಾರ್ (Dheeren R. Rajkumar) ಆಗಿ ಬದಲಾಗಿದೆ. ಡಾ. ರಾಜ್​ಕುಮಾರ್​ (Dr Rajkumar) ಕುಟುಂಬದ ಕುಡಿ ಆಗಿರುವ ಅವರು ತಾತನ ಹೆಸರನ್ನು ತಮ್ಮ ಹೆಸರಿನ ಜೊತೆ ಸೇರಿಸಿಕೊಂಡಿದ್ದಾರೆ.

ಎರಡು ಸಿನಿಮಾಗಳಲ್ಲಿ ಧೀರೇನ್​ ಆರ್​. ರಾಜ್​ಕುಮಾರ್​ ಅವರು ಬ್ಯುಸಿ ಆಗಿದ್ದಾರೆ. ‘ಕೊರಗಜ್ಜನ ದೇವಸ್ಥಾನಕ್ಕೆ ಹೋದಾಗ ತಾತನ ಹೆಸರು ಇಟ್ಟುಕೊಳ್ಳಿ ಎಂದು ಅರ್ಚಕರು ಸಲಹೆ ನೀಡಿದ್ದರು. ನನಗೂ ಸರಿ ಎನಿಸಿತು. ಅದಕ್ಕೆ ಒಂದು ಸಂದರ್ಭ ಬೇಕಿತ್ತು. ಈ ಸಿನಿಮಾ ಮೂಲಕ ಹೆಸರು ಬದಲಾಯಿಸಿಕೊಂಡಿದ್ದೇನೆ. ತಾತನ ಹೆಸರಿನ ಜೊತೆ ಮುಂದುವರಿಯುತ್ತೇನೆ. ಈ ಹೆಸರಿನಲ್ಲಿ ತೂಕ ಇದೆ, ಏಳಿಗೆ ಇದೆ. ಇದರಿಂದ ಪಾಸಿಟಿವ್​ ಆಗಿ ಒಂದು ಹೊಸ ಅಧ್ಯಾಯ ಆರಂಭ ಆಗಿದೆ’ ಎಂದು ಧೀರೇನ್​ ಅವರು ಹೇಳಿದ್ದಾರೆ.

View this post on Instagram

A post shared by KRG Studios (@krgstudios)

‘ಕೆಆರ್​ಜಿ ಸ್ಟೂಡಿಯೋಸ್’ ಸಂಸ್ಥೆಯು ಧೀರೇನ್​ ಅವರು ಹೊಸ ಹೆಸರಿನ ಮೂಲಕ ಮರುಪರಿಚಯಿಸುತ್ತಿದೆ. ಧೀರೇನ್ ಆರ್​. ರಾಜ್​ಕುಮಾರ್​ ಅವರ ಹುಟ್ಟುಹಬ್ಬದ ಪ್ರಯುಕ್ತ ಒಂದು ಹೊಸ ಸಿನಿಮಾವನ್ನು ಕೂಡ ‘ಕೆಆರ್​ಜಿ ಸ್ಟುಡಿಯೋಸ್​’ ಘೋಷಿಸಿದೆ. ಈ ಸಿನಿಮಾದ ಬಗ್ಗೆ ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ಹೊರಬರಲಿದೆ. ಅದಕ್ಕಾಗಿ ಧೀರೇನ್​ ಅವರ ಅಭಿಮಾನಿಗಳು ಕಾದಿದ್ದಾರೆ.

ಇದನ್ನೂ ಓದಿ: ಡಾ. ರಾಜ್​ಕುಮಾರ್​ ಹೇಳಿಕೊಟ್ಟ ಪಾಠ ಕಲಿಯಲೇ ಇಲ್ವಾ ಸ್ಯಾಂಡಲ್​ವುಡ್​ ನಟರು?

ಸ್ಯಾಂಡಲ್​ವುಡ್​ನಲ್ಲಿ ಹೊಸ ಪ್ರತಿಭೆಗಳಿಗೆ ‘ಕೆಆರ್​ಜಿ ಸ್ಟುಡಿಯೋಸ್​’ ಸಂಸ್ಥೆಯು ಅವಕಾಶ ನೀಡುವ ಉದ್ದೇಶ ಹೊಂದಿದೆ. ಅದಕ್ಕೆ ಒಂದಷ್ಟು ಉದಾಹರಣೆಗಳು ಕೂಡ ಸಿಗುತ್ತವೆ. ಇದೀಗ ಈ ನಿಟ್ಟಿನಲ್ಲಿ ಇನ್ನಷ್ಟು ಹೊಸ ಹೆಜ್ಜೆಗಳನ್ನು ಇಡುತ್ತಿದೆ. ಧೀರೇನ್ ಆರ್​. ರಾಜ್​ಕುಮಾರ್​ ಅವರ ಜೊತೆಗೆ ‘ಕೆಆರ್​ಜಿ ಸ್ಟುಡಿಯೋಸ್​’ ಮಾಡಲಿರುವ ಹೊಸ ಸಿನಿಮಾ ಬಗ್ಗೆ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ