AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ರಾಜ್​ಕುಮಾರ್​ ಮೊಮ್ಮೊಗ ಧೀರೇನ್​​ ಜತೆ ‘ಜೇಮ್ಸ್​’ ನಿರ್ಮಾಪಕರ ಹೊಸ ಸಿನಿಮಾ ಅನೌನ್ಸ್​

Dheeren Ramkumar: ಧೀರೇನ್​ ರಾಮ್​ ಕುಮಾರ್ ಅವರ​ ಹೊಸ ಸಿನಿಮಾ ಅನೌನ್ಸ್​ ಆಗಿದೆ. ಕಿಶೋರ್​ ಪತ್ತಿಕೊಂಡ ನಿರ್ಮಾಣದ ಈ ಚಿತ್ರಕ್ಕೆ ಶಂಕರ್​ ಗುರು ನಿರ್ದೇಶನ ಮಾಡಲಿದ್ದಾರೆ.

ಡಾ. ರಾಜ್​ಕುಮಾರ್​ ಮೊಮ್ಮೊಗ ಧೀರೇನ್​​ ಜತೆ ‘ಜೇಮ್ಸ್​’ ನಿರ್ಮಾಪಕರ ಹೊಸ ಸಿನಿಮಾ ಅನೌನ್ಸ್​
ಧೀರೇನ್ ರಾಮ್ ಕುಮಾರ್
TV9 Web
| Edited By: |

Updated on: Apr 29, 2022 | 10:21 AM

Share

ಡಾ. ರಾಜ್​ಕುಮಾರ್​ ಅವರ ಇಡೀ ಕುಟುಂಬವೇ ಕಲೆಗಾಗಿ ಮೀಸಲಾಗಿದೆ. ಅಣ್ಣಾವ್ರ ಮಕ್ಕಳು ಮಾತ್ರವಲ್ಲದೇ ಮೊಮ್ಮಕ್ಕಳು ಕೂಡ ಈಗ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ರಾಘವೇಂದ್ರ ರಾಜ್​ಕುಮಾರ್​ ಪುತ್ರರಾದ ವಿನಯ್​ ರಾಜ್​ಕುಮಾರ್​, ಯುವ ರಾಜ್​ಕುಮಾರ್​ ಅವರು ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ರಾಮ್​ ಕುಮಾರ್​-ಪೂರ್ಣಿಮಾ ದಂಪತಿಯ ಮಕ್ಕಳಾದ ಧನ್ಯಾ ರಾಮ್​ ಕುಮಾರ್​ ಹಾಗೂ ಧೀರೇನ್​ ರಾಮ್​ ಕುಮಾರ್​ (Dheeren Ramkumar) ಅವರು ಈಗಾಗಲೇ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ಇಂದು (ಏ.29) ಧೀರೇನ್​ ಜನ್ಮದಿನದ ಪ್ರಯುಕ್ತ ಅವರ ಹೊಸ ಸಿನಿಮಾ ಅನೌನ್ಸ್​ ಆಗಿದೆ. ಈ ಸಿನಿಮಾಗೆ ಹಣ ಹೂಡುತ್ತಿರುವುದು ‘ಜೇಮ್ಸ್​’ ಚಿತ್ರದ (James Movie) ನಿರ್ಮಾಪಕರು ಎಂಬುದು ವಿಶೇಷ. ಹೌದು, ಪುನೀತ್​ ರಾಜ್​ಕುಮಾರ್​  ನಟನೆಯ ‘ಜೇಮ್ಸ್​’ ಸಿನಿಮಾವನ್ನು ನಿರ್ಮಿಸಿದ್ದ ಕಿಶೋರ್​ ಪತ್ತಿಕೊಂಡ (Kishore Pathikonda) ಅವರೇ ಈಗ ಡಾ. ರಾಜ್​ಕುಮಾರ್​ ಮೊಮ್ಮಗ ಧೀರೇನ್​ ರಾಮ್​ ಕುಮಾರ್​  ಜೊತೆಗೆ ಕೈ ಜೋಡಿಸಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ ಮೂಲಕ ಧೀರೆನ್​ ಜನ್ಮದಿನಕ್ಕೆ ಶುಭ ಕೋರಲಾಗಿದೆ. ಈ ಸುದ್ದಿ ತಿಳಿದು ಡಾ. ರಾಜ್​ ಫ್ಯಾಮಿಲಿ ಅಭಿಮಾನಿಗಳು ಖುಷಿ ಆಗಿದ್ದಾರೆ.

ಧೀರೇನ್​ ರಾಮ್​ ಕುಮಾರ್​ ಅವರು ಈಗಾಗಲೇ ‘ಶಿವ 143’ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಚಿತ್ರಕ್ಕೆ ಮಾನ್ವಿತಾ ಕಾಮತ್​ ನಾಯಕಿ. ಕಾರಣಾಂತರಗಳಿಂದ ಚಿತ್ರದ ಕೆಲಸಗಳು ವಿಳಂಬ ಆದವು. ಇತ್ತೀಚೆಗೆ ‘ಶಿವ 143’ ಸಿನಿಮಾದ ಹೊಸ ಹಾಡು ಬಿಡುಗಡೆ ಆಗಿ, ಪಡ್ಡೆಗಳ ನಿದ್ದೆ ಕೆಡಿಸಿತ್ತು. ಇನ್ನೇನು ಕೆಲವೇ ದಿನಗಳಲ್ಲಿ ಆ ಸಿನಿಮಾ ರಿಲೀಸ್​ ಆಗಲಿದೆ. ಅಷ್ಟರಲ್ಲಿ ಧೀರೇನ್​ ಅವರು ಹೊಸ ಚಿತ್ರ ಅನೌನ್ಸ್​ ಆಗಿದೆ.

‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ನಟಿಸಿದ್ದ ‘ಜೇಮ್ಸ್​’ ಸಿನಿಮಾ ಅದ್ದೂರಿಯಾಗಿ ಮೂಡಿಬಂದಿತ್ತು. ಮೇಕಿಂಗ್​ನಲ್ಲಿ ಯಾವುದೇ ರಾಜಿ ಮಾಡಿಕೊಳ್ಳದ ರೀತಿಯಲ್ಲಿ ಕಿಶೋರ್​ ಪತ್ತಿಕೊಂಡ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಅವರ ನಿರ್ಮಾಣ ಸಂಸ್ಥೆಯಿಂದ ಮೂಡಿಬರಲಿರುವ ಎರಡನೇ ಸಿನಿಮಾಗೆ ಧೀರೇನ್​ ರಾಮ್​ಕುಮಾರ್​ ನಾಯಕನಾಗಿರುವುದು ವಿಶೇಷ. ‘ಅಭಿಮಾನಿ ದೇವರುಗಳೇ ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಹಾಗೂ ಆಶೀರ್ವಾದದೊಂದಿಗೆ ನನ್ನ ಮುಂದಿನ ಹೆಜ್ಜೆ’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಧೀರೇನ್​ ಬರೆದುಕೊಂಡಿದ್ದಾರೆ.

ಈ ಸಿನಿಮಾಗೆ ಶಂಕರ್​ ಗುರು ನಿರ್ದೇಶನ ಮಾಡಲಿದ್ದಾರೆ. ಡಾಲಿ ಧನಂಜಯ ನಟನೆಯ ‘ಬಡವ ರಾಸ್ಕಲ್​’ ಸಿನಿಮಾಗೆ ನಿರ್ದೇಶನ ಮಾಡಿ ಗೆಲುವು ಕಂಡಿರುವ ಶಂಕರ್​ ಗುರು ಅವರು ಈ ಬಾರಿ ಧೀರೇನ್​ಗಾಗಿ ಯಾವ ರೀತಿಯ ಕಥೆ ಸಿದ್ಧಪಡಿಸಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ನಿರ್ಮಾಣ ಆಗಿದೆ. ಚಿತ್ರದ ಪಾತ್ರವರ್ಗದಲ್ಲಿ ಬೇರೆ ಯಾರೆಲ್ಲ ಇರಲಿದ್ದಾರೆ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬರಬೇಕಿದೆ.

ಪುನೀತ್​ ಧ್ವನಿಯೊಂದಿಗೆ ‘ಜೇಮ್ಸ್’ ಪ್ರದರ್ಶನ:

ಮಾ.17ರಂದು ‘ಜೇಮ್ಸ್​’ ಸಿನಿಮಾ ಬಿಡುಗಡೆ ಆದಾಗ ಅದರಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಧ್ವನಿ ಇರಲಿಲ್ಲ. ಆದರೆ ನಂತರ ಹೊಸ ತಂತ್ರಜ್ಞಾನದ ಮೂಲಕ ಅಪ್ಪು ಧ್ವನಿ ಅಳವಡಿಸಿ ಮರುಬಿಡುಗಡೆ ಮಾಡಲಾಯಿತು. ಪುನೀತ್​ ಧ್ವನಿ ಜೊತೆಗೆ ಸಿನಮಾ ನೋಡಿರುವ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ. ಗಲ್ಲಾ ಪೆಟ್ಟಿಗೆಯಲ್ಲಿ ಈ ಸಿನಿಮಾ ಉತ್ತಮ ಕಲೆಕ್ಷನ್​ ಮಾಡಿದೆ. ನಿರ್ಮಾಪಕರಿಗೆ ಲಾಭ ತಂದುಕೊಟ್ಟಿದೆ. ಈಗ ಎರಡನೇ ಬಾರಿಗೆ ನಿರ್ಮಾಪಕ ಕಿಶೋರ್​ ಪತ್ತಿಕೊಂಡ ಅವರು ಅಣ್ಣಾವ್ರ ಕುಟುಂಬದ ಜೊತೆ ಸಿನಿಮಾ ಮಾಡುತ್ತಿದ್ದಾರೆ.

ಇದನ್ನೂ ಓದಿ:

ಬ್ರೇಕಿಂಗ್​ ನ್ಯೂಸ್​ ನೀಡಿದ ‘ಹೊಂಬಾಳೆ ಫಿಲ್ಮ್ಸ್​’: ಯುವ ರಾಜ್​ಕುಮಾರ್​ ಜತೆ ಹೊಸ ಸಿನಿಮಾ ಘೋಷಣೆ

ಮಾನ್ವಿತಾ-ಧೀರೇನ್​ ಲಿಪ್​ ಲಾಕ್​; ಪ್ರೇಮಿಗಳ ದಿನಕ್ಕೆ ರೊಮ್ಯಾಂಟಿಕ್​ ಆಗಿ ಕಾಣಿಸಿಕೊಂಡ ಜೋಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ