AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ನಟ ಧೀರೇಂದ್ರ ಗೋಪಾಲ್ ಪತ್ನಿ ನಿಧನ

ವಿಚಿತ್ರ ಎಂದರೆ 1999ರಲ್ಲಿ ಧೀರೇಂದ್ರ ಗೋಪಾಲ್​ ಅವರಿಗೆ ಹರಿಹರದಲ್ಲೇ ಹೃದಯಾಘಾತವಾಗಿತ್ತು.  ಹೃದಯಾಘಾತವಾಗಿತ್ತು. ಇದರಿಂದ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು.

ಹೃದಯಾಘಾತದಿಂದ ನಟ ಧೀರೇಂದ್ರ ಗೋಪಾಲ್ ಪತ್ನಿ ನಿಧನ
ಧೀರೇಂದ್ರ ಗೋಪಾಲ್​ ಪತ್ನಿ
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on:May 06, 2021 | 1:36 PM

Share

ಕನ್ನಡ ಚಲನಚಿತ್ರರಂಗದ ಖ್ಯಾತ ಖಳ ನಟ ಧೀರೇಂದ್ರ ಗೋಪಾಲ್ ಪತ್ನಿ ಸುನಂದಮ್ಮ ನಿಧನ ಹೊಂದಿದ್ದಾರೆ. ಅವರಿಗೆ 68 ವರ್ಷ ಆಗಿತ್ತು. ದಾವಣಗೆರೆ ಜಿಲ್ಲೆಯ ಹರಿಹರದ ಸ್ವಗೃಹದಲ್ಲಿ ಇಬ್ಬರು ಪುತ್ರರರ ಜತೆ ಗೋಪಾಲಮ್ಮ ವಾಸವಾಗಿದ್ದರು.   ಇಂದು ಮಧ್ಯಾಹ್ನ ಅವರಿಗೆ ಹೃದಯಾಘಾತವಾಗಿದೆ. ತೀವ್ರ ಪ್ರಮಾಣದಲ್ಲಿ ಹೃದಯಾಘಾತವಾದ್ದರಿಂದ ಅವರು ಮನೆಯಲ್ಲೇ ಮೃತಪಟ್ಟಿದ್ದಾರೆ. ನಗರದ ದಾಲ್ಮೀಯಾ ಘಾಟ್​​ನಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆದಿದೆ.

ಸುನಂದಮ್ಮ ರಂಗ ಕಲಾವಿದೆ ಆಗಿದ್ದರು. ದಾವಣಗೆರೆ ಮತ್ತು ಹರಿಹರದಲ್ಲಿ ನಾಟಕ ಪ್ರದರ್ಶನದ ವೇಳೆ ನಟ ಧೀರೇಂದ್ರ ಗೋಪಾಲ್ ಪರಿಚಯ ಆಗಿತ್ತು. ಪರಿಚಯ ಪ್ರೀತಿಯಾಗಿ ಬದಲಾಗಿತ್ತು. ಧೀರೇಂದ್ರ ಗೋಪಾಲ್​ ಅವರು 350ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಅಂದಿನ ಕಾಲದಲ್ಲಿ ಬೇಡಿಕೆಯ ಖಳನಟರಾಗಿದ್ದರು. ಸ್ಟಾರ್​​ ನಟರ ಸಿನಿಮಾಗಳಲ್ಲಿ ಅವರೇ ವಿಲನ್​ ಪಾತ್ರ ಮಾಡುತ್ತಿದ್ದರು.

ವಿಚಿತ್ರ ಎಂದರೆ 1999ರಲ್ಲಿ ಧೀರೇಂದ್ರ ಗೋಪಾಲ್​ ಅವರಿಗೆ ಹರಿಹರದಲ್ಲೇ ಹೃದಯಾಘಾತವಾಗಿತ್ತು.  ಹೃದಯಾಘಾತವಾಗಿತ್ತು. ಇದರಿಂದ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ನಂತರ ಡಿಸೆಂಬರ್​ 25, 2000ರಲ್ಲಿ ಮತ್ತೊಮ್ಮೆ ಅವರಿಗೆ ಹೃದಯಾಘಾತವಾಯಿತು. ಈ ವೇಳೆ ಅವರು ಮೃತಪಟ್ಟಿದ್ದರು. ಆಗ ಅವರಿಗೆ 59 ವರ್ಷ ವಯಸ್ಸು. ಈಗ ಅವರ ಪತ್ನಿ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ:

Ramu Kanagal: ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊರೊನಾದಿಂದ ನಿಧನCovid-19 Karnataka Update: ಕರ್ನಾಟಕದಲ್ಲಿ ಒಂದೇ ದಿನ 50 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು, ಇದು ಈವರೆಗಿನ ದಾಖಲೆ

Published On - 8:36 pm, Wed, 5 May 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ