AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಮ್ಮೆ ತಂದೆಯಾದ ಧ್ರುವ ಸರ್ಜಾ; ವಿಶೇಷ ದಿನದಂದು ಜನಿಸಿತು ಮಗು

ಇತ್ತೀಚೆಗೆ ಮೇಘನಾ ರಾಜ್ ನಟನೆಯ ‘ತತ್ಸಮ ತದ್ಭವ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದ ಮೂಲಕ ಮೇಘನಾ ರಾಜ್ ಅವರು ನಟನೆಗೆ ಕಂಬ್ಯಾಕ್ ಮಾಡಿದ್ದಾರೆ. ಅವರ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕ ಬಗ್ಗೆ ವಿಚಾರ ಸರ್ಜಾ ಕುಟುಂಬಕ್ಕೆ ಖುಷಿ ತಂದಿತ್ತು. ಈಗ ಮತ್ತೊಂದು ಸಿಹಿ ಸುದ್ದಿಯನ್ನು ಈ ಕುಟುಂಬದವರು ನೀಡಿದ್ದಾರೆ.

ಮತ್ತೊಮ್ಮೆ ತಂದೆಯಾದ ಧ್ರುವ ಸರ್ಜಾ; ವಿಶೇಷ ದಿನದಂದು ಜನಿಸಿತು ಮಗು
ಧ್ರುವಾ-ಪ್ರೇರಣಾ
ರಾಜೇಶ್ ದುಗ್ಗುಮನೆ
|

Updated on:Sep 18, 2023 | 10:21 AM

Share

ಇಂದು (ಸೆಪ್ಟೆಂಬರ್ 18) ಎಲ್ಲೆಲ್ಲೂ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಧ್ರುವ ಸರ್ಜಾ ಮನೆಯಲ್ಲಿ ಈ ದಿನದ ಸಂಭ್ರಮ ಹೆಚ್ಚಿದೆ. ಇದಕ್ಕೆ ಕಾರಣ ಅವರು ಮತ್ತೆ ತಂದೆ ಆಗಿರೋದು. ಧ್ರುವ ಸರ್ಜಾ (Dhruva Sarja)  ಪತ್ನಿ ಪ್ರೇರಣಾಗೆ ಗಂಡು ಮಗು ಜನಿಸಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಸದ್ಯ ಧ್ರುವ ಸರ್ಜಾ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮಿಸುತ್ತಿದ್ದಾರೆ.

ಧ್ರುವ ಸರ್ಜಾ ಹಾಗೂ ಪ್ರೇರಣಾ 2019ರಲ್ಲಿ ಮದುವೆ ಆದರು. ಕಳೆದ ವರ್ಷ ಅಕ್ಟೋಬರ್​ 2ರಂದು ಧ್ರುವ ಸರ್ಜಾಗೆ ಹೆಣ್ಣು ಮಗು ಜನಿಸಿತು. ಈಗ ಅವರು ಮತ್ತೊಮ್ಮೆ ತಂದೆ ಆಗಿದ್ದಾರೆ. ಈ ವಿಚಾರವನ್ನು ಅವರು ಹಂಚಿಕೊಂಡಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಸರ್ಜಾ ಕುಟುಂಬಕ್ಕೆ ಈ ದಿನ ಸಖತ್ ವಿಶೇಷ ಎನಿಸಿದೆ. ಧ್ರುವ ಸರ್ಜಾ ಕುಟುಂಬದವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ.

ಇತ್ತೀಚೆಗೆ ಮೇಘನಾ ರಾಜ್ ನಟನೆಯ ‘ತತ್ಸಮ ತದ್ಭವ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದ ಮೂಲಕ ಮೇಘನಾ ರಾಜ್ ಅವರು ನಟನೆಗೆ ಕಂಬ್ಯಾಕ್ ಮಾಡಿದ್ದಾರೆ. ಅವರ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕ ಬಗ್ಗೆ ವಿಚಾರ ಸರ್ಜಾ ಕುಟುಂಬಕ್ಕೆ ಖುಷಿ ತಂದಿತ್ತು. ಈಗ ಮತ್ತೊಂದು ಸಿಹಿ ಸುದ್ದಿಯನ್ನು ಈ ಕುಟುಂಬದವರು ನೀಡಿದ್ದಾರೆ. ಧ್ರುವ ಬರ್ತ್​ಡೇಗೂ ಕೆಲವೇ ದಿನ ಮೊದಲು ಅವರು ಮತ್ತೊಮ್ಮೆ ತಂದೆ ಆಗಿದ್ದಾರೆ.

ಇದನ್ನೂ ಓದಿ: ಅಣ್ಣನ ಸಮಾಧಿ ಮೇಲೆ ಮಲಗಿ ಮಗಳ ಜೊತೆ ಆಟವಾಡಿದ ಧ್ರುವ ಸರ್ಜಾ

ಧ್ರುವ ಸರ್ಜಾ ಬ್ಯಾಕ್​ ಟು ಬ್ಯಾಕ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರ ನಟನೆಯ ‘ಮಾರ್ಟಿನ್’ ಚಿತ್ರದ ಟೀಸರ್ ಗಮನ ಸೆಳೆದಿದೆ. ಈ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ಇದರ ಜೊತೆಗೆ ‘ಕೆಡಿ’ ಚಿತ್ರದ ಕೆಲಸಗಳಲ್ಲೂ ಅವರು ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಪ್ರೇಮ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಸಂಜಯ್ ದತ್ ಅವರು ಮತ್ತೊಮ್ಮೆ ವಿಲನ್ ಪಾತ್ರದ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:13 am, Mon, 18 September 23

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ