AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಮಾರ್ಟಿನ್​ ಅಲ್ಲ’; ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ ಧ್ರುವ ಸರ್ಜಾ: ಯಾರು ನಿಜವಾದ ಮಾರ್ಟಿನ್​?

ಹೀರೋ ಪಾತ್ರದ ಹೆಸರನ್ನೇ ಚಿತ್ರದ ಶೀರ್ಷಿಕೆಯನ್ನಾಗಿ ಇಡುವ ಒಂದು ಟ್ರೆಂಡ್​ ಮೊದಲಿನಿಂದಲೂ ಇದೆ. ಹಾಗಾಗಿ, ‘ಮಾರ್ಟಿನ್​’ ಚಿತ್ರದಲ್ಲಿ ಧ್ರುವ ಸರ್ಜಾ ಅವರ ಪಾತ್ರದ ಹೆಸರು ಮಾರ್ಟಿನ್​ ಆಗಿರುತ್ತದೆ ಎಂಬುದು ಬಹುತೇಕರ ಊಹೆ. ಆದರೆ ಅದು ನಿಜವಲ್ಲ ಎನ್ನುತ್ತಿದೆ ಚಿತ್ರತಂಡ.

‘ನಾನು ಮಾರ್ಟಿನ್​ ಅಲ್ಲ’; ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ ಧ್ರುವ ಸರ್ಜಾ: ಯಾರು ನಿಜವಾದ ಮಾರ್ಟಿನ್​?
ಉದಯ್​ ಕೆ. ಮೆಹ್ತಾ, ಧ್ರುವ ಸರ್ಜಾ, ಎ.ಪಿ. ಅರ್ಜುನ್​
TV9 Web
| Edited By: |

Updated on: Aug 16, 2021 | 12:09 PM

Share

‘ಆ್ಯಕ್ಷನ್​ ಪ್ರಿನ್ಸ್​’ ಧ್ರುವ ಸರ್ಜಾ (Dhruva Sarja) ಅವರ ಹೊಸ ಸಿನಿಮಾ ‘ಮಾರ್ಟಿನ್​’ (Martin) ಸೆಟ್ಟೇರಿದೆ. 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಈ ಚಿತ್ರದ ಮುಹೂರ್ತ ನೆರವೇರಿಸಲಾಗಿರುವುದು ವಿಶೇಷ. ಧ್ರುವ ಸರ್ಜಾ ಅವರ ಮೊದಲ ಚಿತ್ರ ‘ಅದ್ದೂರಿ’ಗೆ ನಿರ್ದೇಶನ ಮಾಡಿದ್ದ ಎ.ಪಿ. ಅರ್ಜುನ್ (AP Arjun)​ ಅವರೇ ಈಗ ಮಾರ್ಟಿನ್​’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಖ್ಯಾತ ನಿರ್ಮಾಪಕ ಉದಯ್​ ಮೆಹ್ತಾ ಅವರು ಬಂಡವಾಳ ಹೂಡುತ್ತಿದ್ದಾರೆ. ಚಿತ್ರದ ಪಾತ್ರವರ್ಗದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ. ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದೆ. ಸಿನಿಮಾ ಸೆಟ್ಟೇರಿದ ದಿನವೇ ‘ನಾನು ಮಾರ್ಟಿನ್​ ಅಲ್ಲ’ ಎಂದಿದ್ದಾರೆ ಧ್ರುವ ಸರ್ಜಾ!

ಸಾಮಾನ್ಯವಾಗಿ ಹೀರೋ ಪಾತ್ರದ ಹೆಸರನ್ನೇ ಚಿತ್ರದ ಶೀರ್ಷಿಕೆಯನ್ನಾಗಿ ಇಡಲಾಗುತ್ತದೆ. ಅದೇ ರೀತಿ ‘ಮಾರ್ಟಿನ್​’ ಚಿತ್ರದಲ್ಲಿ ಧ್ರುವ ಸರ್ಜಾ ಅವರ ಪಾತ್ರದ ಹೆಸರು ಮಾರ್ಟಿನ್​ ಆಗಿರುತ್ತದೆ ಎಂಬುದು ಬಹುತೇಕರ ಊಹೆ. ಆದರೆ ಅದು ನಿಜವಲ್ಲ ಎಂದು ಧ್ರುವ ಸರ್ಜಾ ಆರಂಭದಲ್ಲಿಯೇ ಸ್ಪಷ್ಟಪಡಿಸುತ್ತಿದ್ದಾರೆ. ‘ಮಾರ್ಟಿನ್​ ಎಂಬುದು ಒಂದು ಹೆಸರು. ಆದರೆ ಈ ಚಿತ್ರದಲ್ಲಿ ನಾನು ಮಾರ್ಟಿನ್​ ಅಲ್ಲ. ಅದು ಯಾರು ಎಂಬುದು ಸಿನಿಮಾ ನೋಡಿದ ಮೇಲೆ ತಿಳಿಯಲಿದೆ. ಅದಕ್ಕಾಗಿಯೇ ಈ ಟೀಸರ್​ನಲ್ಲಿ Who is Martin ಎಂಬ ಡೈಲಾಗ್​ ಇದೆ’ ಎಂದಿದ್ದಾರೆ ಧ್ರುವ ಸರ್ಜಾ.

ಇಷ್ಟು ದಿನ ಧ್ರುವ ಸರ್ಜಾ ಅವರ ಎಲ್ಲ ಸಿನಿಮಾಗಳಲ್ಲಿ ಉದ್ದುದ್ದ ಡೈಲಾಗ್​ಗಳು ಫೇಮಸ್​ ಆಗುತ್ತಿದ್ದವು. ಆದರೆ ಮಾರ್ಟಿನ್​ ವಿಚಾರದಲ್ಲಿ ಒಂದು ಬದಲಾವಣೆ ಇರಲಿದೆ. ‘ಈ ಸಿನಿಮಾದಲ್ಲಿ ನಾನು ಉದ್ದುದ್ದ ಡೈಲಾಗ್​ ಹೊಡೆಯಲ್ಲ. ಎಲ್ಲವೂ ಚಿಕ್ಕದಾಗಿ, ಸ್ಟ್ರಾಂಗ್​ ಆಗಿರಲಿವೆ. ಪ್ರಶಾಂತ್​ ರಾಜಪ್ಪ ಡೈಲಾಗ್​ ಬರೆಯುತ್ತಿದ್ದಾರೆ’ ಎಂದು ಧ್ರುವ ಹೇಳಿದ್ದಾರೆ.

ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ತಯಾರಾಗಲಿದೆ. ಅಂದಾಜು ಮೂರು ಕೋಟಿ ರೂ. ಖರ್ಚು ಮಾಡಿ ಒಂದು ದೃಶ್ಯದ ಚಿತ್ರೀಕರಣ ಮಾಡಲಾಗುವುದು. ಮೂರು ಎಕರೆ ಜಾಗದಲ್ಲಿ ಜೈಲಿನ ಸೆಟ್​ ಹಾಕಲಾಗಿದೆ. ಅದು ಚಿತ್ರದಲ್ಲಿ ಹೈಲೈಟ್​ ಆಗಲಿದೆ ಎನ್ನುವ ಮೂಲಕ ಕುತೂಹಲ ಕೆರಳಿಸಿದ್ದಾರೆ ನಿರ್ಮಾಪಕ ಉದಯ್ ಕೆ.​ ಮೆಹ್ತಾ.

(ಮಾರ್ಟಿನ್​ ಚಿತ್ರದ ಟೀಸರ್​)

‘ಇದೊಂದು ಗ್ಯಾಂಗ್​ಸ್ಟರ್​ ಕಥೆ. ಆತನ ಲವ್​ಸ್ಟೋರಿ ಇದೆ. ತಾಯಿ-ಮಗನ ಸೆಂಟಿಮೆಂಟ್​ ಇದೆ. ಎಲ್ಲ ಭಾಷೆಗೂ ಈ ಟೈಟಲ್​ ಸೂಕ್ತ ಆಗಲಿದೆ. ಎಲ್ಲ ಭಾಷೆಗೂ ಹೊಂದಿಕೆ ಆಗುವಂತಹ ಶೈಲಿಯಲ್ಲಿ ಡೈಲಾಗ್​ ಇರಲಿದೆ. ಇನ್ನು ಕೆಲವೇ ದಿನಗಳಲ್ಲಿ ಹೀರೋಯಿನ್​ ಯಾರು ಎಂಬುದು ಗೊತ್ತಾಗುತ್ತದೆ’ ಎಂದಿದ್ದಾರೆ ನಿರ್ದೇಶಕ ಎ.ಪಿ. ಅರ್ಜುನ್​. ಈ ಚಿತ್ರಕ್ಕೆ ಸತ್ಯ ಹೆಗಡೆ ಛಾಯಾಗ್ರಹಣ, ಮಣಿ ಶರ್ಮಾ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ:

ಸೆಟ್ಟೇರಿದ ಧ್ರುವ ಸರ್ಜಾ ಹೊಸ ಚಿತ್ರ ‘ಮಾರ್ಟಿನ್’; ಶುಭ ಹಾರೈಸಿದ ರವಿಚಂದ್ರನ್​

‘ದುಬಾರಿ ಸಿನಿಮಾ ಖಂಡಿತಾ ಮಾಡ್ತೀವಿ’; ಜೊತೆಯಾಗಿ ನಿಂತು ಸ್ಪಷ್ಟನೆ ನೀಡಿದ ಧ್ರುವ ಸರ್ಜಾ-ನಂದಕಿಶೋರ್​

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!