Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhruva Sarja: ಮತ್ತೆ ತಂದೆ ಆಗಲಿದ್ದಾರೆ ಧ್ರುವ; ಖುಷಿ ಸುದ್ದಿ ಕೊಟ್ಟ ಸರ್ಜಾ ಕುಟುಂಬ

2019ರಲ್ಲಿ ಧ್ರುವ ಮತ್ತು ಪ್ರೇರಣಾ ಮದುವೆ ಆದರು. ಕಳೆದ ವರ್ಷ ಅಕ್ಟೋಬರ್​ 2ರಂದು ಅವರಿಗೆ ಹೆಣ್ಣು ಮಗು ಜನಿಸಿತು. ಈಗ ಧ್ರುವ ಹಾಗೂ ಪ್ರೇರಣಾ ಕಡೆಯಿಂದ ಮತ್ತೊಂದು ಸಿಹಿ ಸುದ್ದಿ ಬಂದಿದೆ. ಸೆಪ್ಟೆಂಬರ್ ತಿಂಗಳಲ್ಲಿ ಪ್ರೇರಣಾ ಮತ್ತೆ ತಾಯಿ ಆಗುತ್ತಿದ್ದಾರೆ.

Dhruva Sarja: ಮತ್ತೆ ತಂದೆ ಆಗಲಿದ್ದಾರೆ ಧ್ರುವ; ಖುಷಿ ಸುದ್ದಿ ಕೊಟ್ಟ ಸರ್ಜಾ ಕುಟುಂಬ
ಧ್ರುವಾ-ಪ್ರೇರಣಾ
Follow us
ರಾಜೇಶ್ ದುಗ್ಗುಮನೆ
|

Updated on: Aug 25, 2023 | 11:23 AM

ನಟ ಧ್ರುವ ಸರ್ಜಾ (Dhruva Sarja) ಅವರು ಸ್ಯಾಂಡಲ್​​ವುಡ್​ನಲ್ಲಿ ಸಖತ್ ಬ್ಯುಸಿ ಇದ್ದಾರೆ. ಸದ್ಯ ‘ಮಾರ್ಟಿನ್​’ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಅವರು ಅಭಿಮಾನಿಗಳಿಗೆ ಖುಷಿ ಸುದ್ದಿ ಒಂದನ್ನು ನೀಡಿದ್ದಾರೆ. ಅವರು ಮತ್ತೊಮ್ಮೆ ತಂದೆ ಆಗುತ್ತಿದ್ದಾರೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾ ಮೂಲಕ ಅವರು ಹಂಚಿಕೊಂಡಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್ ಖುಷಿಪಟ್ಟಿದ್ದಾರೆ. ಸೆಪ್ಟೆಂಬರ್​ನಲ್ಲಿ ಸರ್ಜಾ ಕುಟುಂಬಕ್ಕೆ (Sarja Family) ಹೊಸ ಸದಸ್ಯನ ಆಗಮನ ಆಗಲಿದೆ.

2019ರಲ್ಲಿ ಧ್ರುವ ಮತ್ತು ಪ್ರೇರಣಾ ಮದುವೆ ಆದರು. ಕಳೆದ ವರ್ಷ ಅಕ್ಟೋಬರ್​ 2ರಂದು ಅವರಿಗೆ ಹೆಣ್ಣು ಮಗು ಜನಿಸಿತು. ಈಗ ಧ್ರುವ ಹಾಗೂ ಪ್ರೇರಣಾ ಕಡೆಯಿಂದ ಮತ್ತೊಂದು ಸಿಹಿ ಸುದ್ದಿ ಬಂದಿದೆ. ಸೆಪ್ಟೆಂಬರ್ ತಿಂಗಳಲ್ಲಿ ಪ್ರೇರಣಾ ಮತ್ತೆ ತಾಯಿ ಆಗುತ್ತಿದ್ದಾರೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ ಧ್ರುವ.

ಗ್ರಾಫಿಕ್ಸ್ ವಿಡಿಯೋ ಒಂದನ್ನು ಮಾಡಲಾಗಿದೆ. ಎಲ್ಲರಿಗೂ ಒಂದು ಸರ್​ಪ್ರೈಸ್ ಇದೆ ಎಂದು ಮೊದಲು ಹೇಳಲಾಗಿದೆ. ವಿಡಿಯೋ ಕೊನೆಯಲ್ಲಿ ಧ್ರುವ ಮಗಳನ್ನು ಎತ್ತಿಕೊಂಡಿರುತ್ತಾರೆ. ವಿಡಿಯೋ ಕೊನೆಯಲ್ಲಿ ಪ್ರೇರಣಾ ಪ್ರೆಗ್ನೆಂಟ್ ಅನ್ನೋ ವಿಚಾರವನ್ನು ಧ್ರುವ ರಿವೀಲ್ ಮಾಡುತ್ತಾರೆ. ಸದ್ಯ ಧ್ರುವ ಸರ್ಜಾಗೆ ಎಲ್ಲರೂ ವಿಶ್ ತಿಳಿಸುತ್ತಿದ್ದಾರೆ. ಸೆಪ್ಟೆಂಬರ್​ನಲ್ಲಿ ಮಗು ಜನಿಸಲಿದೆ ಎಂದು ಧ್ರುವ ತಿಳಿಸಿದ್ದಾರೆ.

ಇದನ್ನೂ ಓದಿ: Dhruva Sarja: ಜಿಮ್​ನಲ್ಲಿ ಧ್ರುವ ಸರ್ಜಾ ಸಖತ್ ವರ್ಕೌಟ್​; ಇಲ್ಲಿದೆ ವೈರಲ್ ವಿಡಿಯೋ

ಧ್ರುವ ಸರ್ಜಾಗೆ ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ಮಾರ್ಟಿನ್’ ಸಿನಿಮಾದ ಟೀಸರ್ ಗಮನ ಸೆಳೆದಿದೆ. ಈ ಚಿತ್ರ ಶೀಘ್ರದಲ್ಲೇ ರಿಲೀಸ್ ಆಗಲಿದೆ. ಇದರ ಜೊತೆಗೆ ‘ಕೆಡಿ’ ಸಿನಿಮಾ ಕೆಲಸಗಳಲ್ಲೂ ಅವರು ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ನಿರ್ದೇಶಕ ಪ್ರೇಮ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದಲ್ಲಿ ಸಂಜಯ್ ದತ್ ಅವರು ಖಡಕ್ ವಿಲನ್ ಪಾತ್ರದ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್