AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhruva Sarja: ಮತ್ತೆ ತಂದೆ ಆಗಲಿದ್ದಾರೆ ಧ್ರುವ; ಖುಷಿ ಸುದ್ದಿ ಕೊಟ್ಟ ಸರ್ಜಾ ಕುಟುಂಬ

2019ರಲ್ಲಿ ಧ್ರುವ ಮತ್ತು ಪ್ರೇರಣಾ ಮದುವೆ ಆದರು. ಕಳೆದ ವರ್ಷ ಅಕ್ಟೋಬರ್​ 2ರಂದು ಅವರಿಗೆ ಹೆಣ್ಣು ಮಗು ಜನಿಸಿತು. ಈಗ ಧ್ರುವ ಹಾಗೂ ಪ್ರೇರಣಾ ಕಡೆಯಿಂದ ಮತ್ತೊಂದು ಸಿಹಿ ಸುದ್ದಿ ಬಂದಿದೆ. ಸೆಪ್ಟೆಂಬರ್ ತಿಂಗಳಲ್ಲಿ ಪ್ರೇರಣಾ ಮತ್ತೆ ತಾಯಿ ಆಗುತ್ತಿದ್ದಾರೆ.

Dhruva Sarja: ಮತ್ತೆ ತಂದೆ ಆಗಲಿದ್ದಾರೆ ಧ್ರುವ; ಖುಷಿ ಸುದ್ದಿ ಕೊಟ್ಟ ಸರ್ಜಾ ಕುಟುಂಬ
ಧ್ರುವಾ-ಪ್ರೇರಣಾ
ರಾಜೇಶ್ ದುಗ್ಗುಮನೆ
|

Updated on: Aug 25, 2023 | 11:23 AM

Share

ನಟ ಧ್ರುವ ಸರ್ಜಾ (Dhruva Sarja) ಅವರು ಸ್ಯಾಂಡಲ್​​ವುಡ್​ನಲ್ಲಿ ಸಖತ್ ಬ್ಯುಸಿ ಇದ್ದಾರೆ. ಸದ್ಯ ‘ಮಾರ್ಟಿನ್​’ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಅವರು ಅಭಿಮಾನಿಗಳಿಗೆ ಖುಷಿ ಸುದ್ದಿ ಒಂದನ್ನು ನೀಡಿದ್ದಾರೆ. ಅವರು ಮತ್ತೊಮ್ಮೆ ತಂದೆ ಆಗುತ್ತಿದ್ದಾರೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾ ಮೂಲಕ ಅವರು ಹಂಚಿಕೊಂಡಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್ ಖುಷಿಪಟ್ಟಿದ್ದಾರೆ. ಸೆಪ್ಟೆಂಬರ್​ನಲ್ಲಿ ಸರ್ಜಾ ಕುಟುಂಬಕ್ಕೆ (Sarja Family) ಹೊಸ ಸದಸ್ಯನ ಆಗಮನ ಆಗಲಿದೆ.

2019ರಲ್ಲಿ ಧ್ರುವ ಮತ್ತು ಪ್ರೇರಣಾ ಮದುವೆ ಆದರು. ಕಳೆದ ವರ್ಷ ಅಕ್ಟೋಬರ್​ 2ರಂದು ಅವರಿಗೆ ಹೆಣ್ಣು ಮಗು ಜನಿಸಿತು. ಈಗ ಧ್ರುವ ಹಾಗೂ ಪ್ರೇರಣಾ ಕಡೆಯಿಂದ ಮತ್ತೊಂದು ಸಿಹಿ ಸುದ್ದಿ ಬಂದಿದೆ. ಸೆಪ್ಟೆಂಬರ್ ತಿಂಗಳಲ್ಲಿ ಪ್ರೇರಣಾ ಮತ್ತೆ ತಾಯಿ ಆಗುತ್ತಿದ್ದಾರೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ ಧ್ರುವ.

ಗ್ರಾಫಿಕ್ಸ್ ವಿಡಿಯೋ ಒಂದನ್ನು ಮಾಡಲಾಗಿದೆ. ಎಲ್ಲರಿಗೂ ಒಂದು ಸರ್​ಪ್ರೈಸ್ ಇದೆ ಎಂದು ಮೊದಲು ಹೇಳಲಾಗಿದೆ. ವಿಡಿಯೋ ಕೊನೆಯಲ್ಲಿ ಧ್ರುವ ಮಗಳನ್ನು ಎತ್ತಿಕೊಂಡಿರುತ್ತಾರೆ. ವಿಡಿಯೋ ಕೊನೆಯಲ್ಲಿ ಪ್ರೇರಣಾ ಪ್ರೆಗ್ನೆಂಟ್ ಅನ್ನೋ ವಿಚಾರವನ್ನು ಧ್ರುವ ರಿವೀಲ್ ಮಾಡುತ್ತಾರೆ. ಸದ್ಯ ಧ್ರುವ ಸರ್ಜಾಗೆ ಎಲ್ಲರೂ ವಿಶ್ ತಿಳಿಸುತ್ತಿದ್ದಾರೆ. ಸೆಪ್ಟೆಂಬರ್​ನಲ್ಲಿ ಮಗು ಜನಿಸಲಿದೆ ಎಂದು ಧ್ರುವ ತಿಳಿಸಿದ್ದಾರೆ.

ಇದನ್ನೂ ಓದಿ: Dhruva Sarja: ಜಿಮ್​ನಲ್ಲಿ ಧ್ರುವ ಸರ್ಜಾ ಸಖತ್ ವರ್ಕೌಟ್​; ಇಲ್ಲಿದೆ ವೈರಲ್ ವಿಡಿಯೋ

ಧ್ರುವ ಸರ್ಜಾಗೆ ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ಮಾರ್ಟಿನ್’ ಸಿನಿಮಾದ ಟೀಸರ್ ಗಮನ ಸೆಳೆದಿದೆ. ಈ ಚಿತ್ರ ಶೀಘ್ರದಲ್ಲೇ ರಿಲೀಸ್ ಆಗಲಿದೆ. ಇದರ ಜೊತೆಗೆ ‘ಕೆಡಿ’ ಸಿನಿಮಾ ಕೆಲಸಗಳಲ್ಲೂ ಅವರು ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ನಿರ್ದೇಶಕ ಪ್ರೇಮ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದಲ್ಲಿ ಸಂಜಯ್ ದತ್ ಅವರು ಖಡಕ್ ವಿಲನ್ ಪಾತ್ರದ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ