AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ರುವ ಸರ್ಜಾಗೆ ಬರ್ತ್​ಡೇ ಸಂಭ್ರಮ; ಹುಟ್ಟುಹಬ್ಬದ ದಿನ ಅಣ್ಣನ ಕೊನೆಯ ಸಿನಿಮಾ ನೋಡಲಿದ್ದಾರೆ ‘ಮಾರ್ಟಿನ್’

ಧ್ರುವ ಸರ್ಜಾ ಅವರಿಗೆ ಈ ವರ್ಷದ ಬರ್ತ್​ಡೇ ವಿಶೇಷ ಎನಿಸಿಕೊಳ್ಳಲು ಹಲವು ಕಾರಣಗಳು ಇವೆ. ಅಣ್ಣನ ಸಿನಿಮಾ ರಿಲೀಸ್ ಆಗುತ್ತಿರುವುದು ಒಂದು ಕಡೆಯದಾರೆ, ಈ ವರ್ಷ ಧ್ರುವ ಮತ್ತೊಮ್ಮೆ ತಂದೆ ಆಗಿದ್ದಾರೆ. ಈ ಎಲ್ಲಾ ಕಾರಣದಿಂದ ಧ್ರುವ ಸರ್ಜಾ ಸಂಭ್ರಮದಿಂದ ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ.

ಧ್ರುವ ಸರ್ಜಾಗೆ ಬರ್ತ್​ಡೇ ಸಂಭ್ರಮ; ಹುಟ್ಟುಹಬ್ಬದ ದಿನ ಅಣ್ಣನ ಕೊನೆಯ ಸಿನಿಮಾ ನೋಡಲಿದ್ದಾರೆ ‘ಮಾರ್ಟಿನ್’
ಧ್ರುವ ಸರ್ಜಾ
ರಾಜೇಶ್ ದುಗ್ಗುಮನೆ
|

Updated on: Oct 06, 2023 | 7:07 AM

Share

ಬರ್ತ್​ಡೇ ದಿನ ಅವರ ನಟನೆಯ ಸಿನಿಮಾ ಅಥವಾ ಟ್ರೇಲರ್, ಪೋಸ್ಟರ್ ರಿಲೀಸ್ ಆಗೋದು ಸಾಮಾನ್ಯ. ಹಾಗಂತ ಧ್ರುವ ಸರ್ಜಾ (Dhruva Sarja) ಬರ್ತ್​ಡೇ ದಿನ ಅವರ ಸಿನಿಮಾ ರಿಲೀಸ್ ಆಗುತ್ತಿಲ್ಲ. ಆದಾಗ್ಯೂ ಅವರಿಗೆ ಈ ದಿನ ವಿಶೇಷ ಅಂತೂ ಹೌದು. ಕಾರಣ, ಅವರ ಅಣ್ಣ ಚಿರಂಜೀವಿ ಸರ್ಜಾ ನಟನೆಯ ಕೊನೆಯ ಚಿತ್ರ ‘ರಾಜಮಾರ್ತಾಂಡ’ ಸಿನಿಮಾ ರಿಲೀಸ್ ಆಗಲಿದೆ. ಬರ್ತ್​ಡೇ ದಿನ ಈ ಚಿತ್ರವನ್ನು ಧ್ರುವ ಸರ್ಜಾ ವೀಕ್ಷಿಸಲಿದ್ದಾರೆ. ಕಾರಣಾಂತರಗಳಿಂದ ಸಿನಿಮಾದ ಕೆಲಸ ವಿಳಂಬ ಆಗಿತ್ತು.

ಧ್ರುವ ಸರ್ಜಾ ಅವರಿಗೆ ಈ ವರ್ಷದ ಬರ್ತ್​ಡೇ ವಿಶೇಷ ಎನಿಸಿಕೊಳ್ಳಲು ಹಲವು ಕಾರಣಗಳು ಇವೆ. ಅಣ್ಣನ ಸಿನಿಮಾ ರಿಲೀಸ್ ಆಗುತ್ತಿರುವುದು ಒಂದು ಕಡೆಯಾದರೆ, ಈ ವರ್ಷ ಧ್ರುವ ಮತ್ತೊಮ್ಮೆ ತಂದೆ ಆಗಿದ್ದಾರೆ. ಈ ಎಲ್ಲಾ ಕಾರಣದಿಂದ ಧ್ರುವ ಸರ್ಜಾ ಸಂಭ್ರಮದಿಂದ ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಫ್ಯಾನ್ಸ್ ಕಡೆಯಿಂದ ಧ್ರುವ ಸರ್ಜಾಗೆ ವಿಶ್​​ ಬರುತ್ತಿವೆ.

ಧ್ರುವ ಸರ್ಜಾ ಅವರು ತರಾತುರಿಯಲ್ಲಿ ಸಿನಿಮಾ ಮಾಡುವವರಲ್ಲ. ಅವರು ಅಳೆದು ತೂಗಿ ಸಿನಿಮಾ ಒಪ್ಪಿಕೊಳ್ಳುತ್ತಾರೆ. 2012ರಲ್ಲಿ ರಿಲೀಸ್ ಆದ ‘ಅದ್ದೂರಿ’ ಅವರ ಅಭಿನಯದ ಮೊದಲ ಸಿನಿಮಾ. ಈ ಚಿತ್ರ ಸೂಪರ್ ಹಿಟ್ ಆಯಿತು. ಆ ಬಳಿಕ ‘ಬಹದ್ದೂರ್’, ‘ಭರ್ಜರಿ’ ಮಾಡಿ ಫೇಮಸ್ ಆದರು. 2017ರ ಬಳಿಕ ಅವರು ಹೀರೋ ಆಗಿ ಮತ್ತೆ ದೊಡ್ಡ ಪರದೆಗೆ ಬಂದಿದ್ದು 2021ರಲ್ಲಿ. ಆ ವರ್ಷ ಅವರ ನಟನೆಯ ‘ಪೊಗರು’ ಚಿತ್ರ ರಿಲೀಸ್ ಆಯಿತು.

ಇದನ್ನೂ ಓದಿ: ‘ನಮ್ಮ ಅಣ್ಣನ ಸಿನಿಮಾ ನೋಡಿ ಅಂತ ಎಲ್ಲ ತಾಯಂದಿರಲ್ಲಿ ಮನವಿ ಮಾಡ್ತೀನಿ’: ಧ್ರುವ ಸರ್ಜಾ

ಸದ್ಯ ಧ್ರುವ ಸರ್ಜಾ ಅವರು ‘ಮಾರ್ಟಿನ್’ ಹಾಗೂ ‘ಕೆಡಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಕಡೆಯಿಂದ ಹೊಸ ಅಪ್​​ಡೇಟ್ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ‘ಮಾರ್ಟಿನ್’ ಸಿನಿಮಾ ಸೆಟ್ಟೇರಿ ಬಹಳ ಸಮಯ ಕಳೆದಿದೆ. ಕಳೆದ ಸೆಪ್ಟೆಂಬರ್​ನಲ್ಲೇ ಸಿನಿಮಾ ರಿಲೀಸ್ ಆಗಬೇಕಿತ್ತು. ಈ ಸೆಪ್ಟೆಂಬರ್ ಕಳೆದರೂ ಸಿನಿಮಾದ ರಿಲೀಸ್ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಕನ್ನಡ, ಮಲಯಾಳಂ, ತೆಲುಗು, ತಮಿಳು ಹಾಗೂ ಹಿಂದಿಯಲ್ಲಿ ಚಿತ್ರ ಬಿಡುಗಡೆ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ