AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ರುವ ಸರ್ಜಾಗೆ ಬರ್ತ್​ಡೇ ಸಂಭ್ರಮ; ಹುಟ್ಟುಹಬ್ಬದ ದಿನ ಅಣ್ಣನ ಕೊನೆಯ ಸಿನಿಮಾ ನೋಡಲಿದ್ದಾರೆ ‘ಮಾರ್ಟಿನ್’

ಧ್ರುವ ಸರ್ಜಾ ಅವರಿಗೆ ಈ ವರ್ಷದ ಬರ್ತ್​ಡೇ ವಿಶೇಷ ಎನಿಸಿಕೊಳ್ಳಲು ಹಲವು ಕಾರಣಗಳು ಇವೆ. ಅಣ್ಣನ ಸಿನಿಮಾ ರಿಲೀಸ್ ಆಗುತ್ತಿರುವುದು ಒಂದು ಕಡೆಯದಾರೆ, ಈ ವರ್ಷ ಧ್ರುವ ಮತ್ತೊಮ್ಮೆ ತಂದೆ ಆಗಿದ್ದಾರೆ. ಈ ಎಲ್ಲಾ ಕಾರಣದಿಂದ ಧ್ರುವ ಸರ್ಜಾ ಸಂಭ್ರಮದಿಂದ ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ.

ಧ್ರುವ ಸರ್ಜಾಗೆ ಬರ್ತ್​ಡೇ ಸಂಭ್ರಮ; ಹುಟ್ಟುಹಬ್ಬದ ದಿನ ಅಣ್ಣನ ಕೊನೆಯ ಸಿನಿಮಾ ನೋಡಲಿದ್ದಾರೆ ‘ಮಾರ್ಟಿನ್’
ಧ್ರುವ ಸರ್ಜಾ
Follow us
ರಾಜೇಶ್ ದುಗ್ಗುಮನೆ
|

Updated on: Oct 06, 2023 | 7:07 AM

ಬರ್ತ್​ಡೇ ದಿನ ಅವರ ನಟನೆಯ ಸಿನಿಮಾ ಅಥವಾ ಟ್ರೇಲರ್, ಪೋಸ್ಟರ್ ರಿಲೀಸ್ ಆಗೋದು ಸಾಮಾನ್ಯ. ಹಾಗಂತ ಧ್ರುವ ಸರ್ಜಾ (Dhruva Sarja) ಬರ್ತ್​ಡೇ ದಿನ ಅವರ ಸಿನಿಮಾ ರಿಲೀಸ್ ಆಗುತ್ತಿಲ್ಲ. ಆದಾಗ್ಯೂ ಅವರಿಗೆ ಈ ದಿನ ವಿಶೇಷ ಅಂತೂ ಹೌದು. ಕಾರಣ, ಅವರ ಅಣ್ಣ ಚಿರಂಜೀವಿ ಸರ್ಜಾ ನಟನೆಯ ಕೊನೆಯ ಚಿತ್ರ ‘ರಾಜಮಾರ್ತಾಂಡ’ ಸಿನಿಮಾ ರಿಲೀಸ್ ಆಗಲಿದೆ. ಬರ್ತ್​ಡೇ ದಿನ ಈ ಚಿತ್ರವನ್ನು ಧ್ರುವ ಸರ್ಜಾ ವೀಕ್ಷಿಸಲಿದ್ದಾರೆ. ಕಾರಣಾಂತರಗಳಿಂದ ಸಿನಿಮಾದ ಕೆಲಸ ವಿಳಂಬ ಆಗಿತ್ತು.

ಧ್ರುವ ಸರ್ಜಾ ಅವರಿಗೆ ಈ ವರ್ಷದ ಬರ್ತ್​ಡೇ ವಿಶೇಷ ಎನಿಸಿಕೊಳ್ಳಲು ಹಲವು ಕಾರಣಗಳು ಇವೆ. ಅಣ್ಣನ ಸಿನಿಮಾ ರಿಲೀಸ್ ಆಗುತ್ತಿರುವುದು ಒಂದು ಕಡೆಯಾದರೆ, ಈ ವರ್ಷ ಧ್ರುವ ಮತ್ತೊಮ್ಮೆ ತಂದೆ ಆಗಿದ್ದಾರೆ. ಈ ಎಲ್ಲಾ ಕಾರಣದಿಂದ ಧ್ರುವ ಸರ್ಜಾ ಸಂಭ್ರಮದಿಂದ ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಫ್ಯಾನ್ಸ್ ಕಡೆಯಿಂದ ಧ್ರುವ ಸರ್ಜಾಗೆ ವಿಶ್​​ ಬರುತ್ತಿವೆ.

ಧ್ರುವ ಸರ್ಜಾ ಅವರು ತರಾತುರಿಯಲ್ಲಿ ಸಿನಿಮಾ ಮಾಡುವವರಲ್ಲ. ಅವರು ಅಳೆದು ತೂಗಿ ಸಿನಿಮಾ ಒಪ್ಪಿಕೊಳ್ಳುತ್ತಾರೆ. 2012ರಲ್ಲಿ ರಿಲೀಸ್ ಆದ ‘ಅದ್ದೂರಿ’ ಅವರ ಅಭಿನಯದ ಮೊದಲ ಸಿನಿಮಾ. ಈ ಚಿತ್ರ ಸೂಪರ್ ಹಿಟ್ ಆಯಿತು. ಆ ಬಳಿಕ ‘ಬಹದ್ದೂರ್’, ‘ಭರ್ಜರಿ’ ಮಾಡಿ ಫೇಮಸ್ ಆದರು. 2017ರ ಬಳಿಕ ಅವರು ಹೀರೋ ಆಗಿ ಮತ್ತೆ ದೊಡ್ಡ ಪರದೆಗೆ ಬಂದಿದ್ದು 2021ರಲ್ಲಿ. ಆ ವರ್ಷ ಅವರ ನಟನೆಯ ‘ಪೊಗರು’ ಚಿತ್ರ ರಿಲೀಸ್ ಆಯಿತು.

ಇದನ್ನೂ ಓದಿ: ‘ನಮ್ಮ ಅಣ್ಣನ ಸಿನಿಮಾ ನೋಡಿ ಅಂತ ಎಲ್ಲ ತಾಯಂದಿರಲ್ಲಿ ಮನವಿ ಮಾಡ್ತೀನಿ’: ಧ್ರುವ ಸರ್ಜಾ

ಸದ್ಯ ಧ್ರುವ ಸರ್ಜಾ ಅವರು ‘ಮಾರ್ಟಿನ್’ ಹಾಗೂ ‘ಕೆಡಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಕಡೆಯಿಂದ ಹೊಸ ಅಪ್​​ಡೇಟ್ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ‘ಮಾರ್ಟಿನ್’ ಸಿನಿಮಾ ಸೆಟ್ಟೇರಿ ಬಹಳ ಸಮಯ ಕಳೆದಿದೆ. ಕಳೆದ ಸೆಪ್ಟೆಂಬರ್​ನಲ್ಲೇ ಸಿನಿಮಾ ರಿಲೀಸ್ ಆಗಬೇಕಿತ್ತು. ಈ ಸೆಪ್ಟೆಂಬರ್ ಕಳೆದರೂ ಸಿನಿಮಾದ ರಿಲೀಸ್ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಕನ್ನಡ, ಮಲಯಾಳಂ, ತೆಲುಗು, ತಮಿಳು ಹಾಗೂ ಹಿಂದಿಯಲ್ಲಿ ಚಿತ್ರ ಬಿಡುಗಡೆ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ