AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Dhruva Sarja: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹುಟ್ಟುಹಬ್ಬಕ್ಕೆ ‘ಮಾರ್ಟಿನ್’ ಸಿನಿಮಾ ಪೋಸ್ಟರ್ ರಿಲೀಸ್

Martin Poster: ಅಣ್ಣ ಚಿರು ಅಗಲಿಕೆಯ ನೋವು ಹಾಗೂ ಕೊರೊನಾ ಹಿನ್ನೆಲೆಯಲ್ಲಿ ಅಭಿಮಾನಿಗಳ‌ ಜೊತೆಗಿನ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ನಟ ಧ್ರುವ ಸರ್ಜಾ ಬ್ರೇಕ್ ಹಾಕಿದ್ದಾರೆ. ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗೆ ಈ ಬಗ್ಗೆ ಸಂದೇಶ ರವಾನಿಸಿದ್ದಾರೆ.

Happy Birthday Dhruva Sarja: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹುಟ್ಟುಹಬ್ಬಕ್ಕೆ ‘ಮಾರ್ಟಿನ್’ ಸಿನಿಮಾ ಪೋಸ್ಟರ್ ರಿಲೀಸ್
ಮಾರ್ಟಿನ್’ ಸಿನಿಮಾ ಪೋಸ್ಟರ್ ರಿಲೀಸ್
TV9 Web
| Edited By: |

Updated on:Oct 06, 2021 | 9:24 AM

Share

ನಟ ಧ್ರುವ ಸರ್ಜಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅದ್ದೂರಿ, ಬಹದ್ದೂರ್​, ಭರ್ಜರಿ, ಪೊಗರು ಸಿನಿಮಾಗಳ ಮೂಲಕ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಇಂದು (ಅಕ್ಟೋಬರ್ 6) ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹುಟ್ಟುಹಬ್ಬದ ಸಂಭ್ರಮ. ಧ್ರುವ ಹುಟ್ಟುಹಬ್ಬದ ಗಿಫ್ಟ್ ಆಗಿ ಮಾರ್ಟಿನ್ ಪೋಸ್ಟರ್ ರಿಲೀಸ್ ಆಗಿದೆ. ಐದು ಭಾಷೆಯಲ್ಲಿ ಮಾರ್ಟಿನ್ ಪೋಸ್ಟರ್ ರಿಲೀಸ್ ಮಾಡಿದ ಚಿತ್ರತಂಡ ಆ ಮೂಲಕ ವಿಶೇಷವಾಗಿ ನಟ ಧ್ರುವ ಸರ್ಜಾ ಅವರಿಗೆ ಶುಭ ಹಾರೈಸಿದೆ. ಇನ್ನು ಸೆಲೆಬ್ರಿಟಿಗಳು, ಅಭಿಮಾನಿಗಳು,ಸ್ನೇಹಿತರಿಂದ ಧ್ರುವ ಸರ್ಜಾ ಅವರಿಗೆ ಬರ್ತ್​ಡೇ ವಿಶ್​ ಹರಿದುಬರುತ್ತಿದೆ.

ಧ್ರುವ ಸರ್ಜಾ ಹುಟ್ಟುಹಬ್ಬದ ದಿನವನ್ನು ದೊಡ್ಡದಾಗಿ ಸೆಲೆಬ್ರೇಟ್ ಮಾಡಬೇಕು ಎಂಬ ಆಸೆ ಅಭಿಮಾನಿಗಳಿಗೆ ಇದ್ದೇ ಇರುತ್ತದೆ. ಆದರೆ ಆ ಬಗ್ಗೆ ಧ್ರುವ ಸರ್ಜಾ ಒಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬಾರಿ ಜನ್ಮದಿನ ಆಚರಿಸಿಕೊಳ್ಳದೇ ಇರಲು ಅವರು ನಿರ್ಧರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಶೇರ್ ಮಾಡಿಕೊಳ್ಳುವ ಮೂಲಕ ಅವರು ತಮ್ಮ ತೀರ್ಮಾನ ಏನೆಂಬುದನ್ನು ಈಗಾಗಲೇ ತಿಳಿಸಿದ್ದಾರೆ.

ಅಣ್ಣ ಚಿರು ಅಗಲಿಕೆಯ ನೋವು ಹಾಗೂ ಕೊರೊನಾ ಹಿನ್ನೆಲೆಯಲ್ಲಿ ಅಭಿಮಾನಿಗಳ‌ ಜೊತೆಗಿನ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ನಟ ಧ್ರುವ ಸರ್ಜಾ ಬ್ರೇಕ್ ಹಾಕಿದ್ದಾರೆ. ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗೆ ಈ ಬಗ್ಗೆ ಸಂದೇಶ ರವಾನಿಸಿದ್ದಾರೆ.

ಸಿಂಪಲ್ ಆಗಿ ಬರ್ತ್ ಡೇ ಸೆಲೆಬ್ರೆಶನ್ ಪ್ಲಾನ್ ಮಾಡಿರುವ‌ ಧ್ರುವ ಸರ್ಜಾ, ಸದ್ಯ ಬೆಂಗಳೂರಿನಲ್ಲಿಲ್ಲ ವೈಜಾಗ್​ನಲ್ಲಿ ಶೂಟಿಂಗ್​ನಲ್ಲಿರುವುದಾಗಿ ಹೇಳಿಕೊಂಡಿದ್ದಾರೆ. ಹೀಗಾಗಿ ಅಭಿಮಾನಿಗಳಿಗೆ ಬರ್ತ್ ಡೇಗೆ ಆಗಮಿಸದಂತೆ ಮನವಿ ಮಾಡಿದ್ದಾರೆ. ಪ್ರತೀ ವರ್ಷ ಅಕ್ಟೋಬರ್ 6 ರಂದು ಧ್ರುವ ಮನೆ ಮುಂದೆ ಅಭಿಮಾನಿಗಳ ಜಾತ್ರೆ ನೆರವೇರುತ್ತಿತ್ತು. ಆದರೆ ಈ ಬಾರಿ ಅದಕ್ಕೆ ಅವಕಾಶ ಇಲ್ಲದಂತಾಗಿದೆ. ಅದ್ದೂರಿ ಸಿನಿಮಾ ಮೂಲಕ ಗಾಂಧೀನಗರಕ್ಕೆ ಎಂಟ್ರಿ ಕೊಟ್ಟಿದ್ದ ಧ್ರುವ ಇತ್ತೀಚೆಗೆ ಪೊಗರುನಲ್ಲಿ ಕಮಾಲ್ ಮಾಡಿದ್ದರು.

ಇದನ್ನೂ ಓದಿ:

Dhruva Sarja: ‘ನಾನೇನು ದೊಡ್ಡ ಸೆಲೆಬ್ರಿಟಿ ಅಲ್ಲ’: ಬರ್ತ್​ಡೇ ಬಗ್ಗೆ ಮುಖ್ಯ ನಿರ್ಧಾರ ಪ್ರಕಟಿಸಿದ ಧ್ರುವ ಸರ್ಜಾ

ಓಟಿಟಿ ಮೇಲೆ ಹೆಚ್ಚಿತು ಸಿನಿ ಮಂದಿಯ ಪ್ರೀತಿ; ಬಹುನಿರೀಕ್ಷಿತ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ರಿಲೀಸ್​

Published On - 8:04 am, Wed, 6 October 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ