AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ರುವ ಸರ್ಜಾ ‘ದುಬಾರಿ’ ಆಲೋಚನೆ ಸದ್ಯಕ್ಕೆ ಕೈಬಿಟ್ಟ ನಿರ್ಮಾಪಕರು; ಚಿತ್ರದಿಂದ ಹೊರನಡೆದ ನಿರ್ದೇಶಕ ನಂದ ಕಿಶೋರ್​?

ಚಿತ್ರದ ಬಹುತೇಕ ಶೂಟಿಂಗ್ ಬೇರೆ ಬೇರೆ ರಾಷ್ಟ್ರಗಳಲ್ಲಿ ನಡೆಯಲಿದೆ. ಸದ್ಯ, ಕೊವಿಡ್ ಇರುವುದರಿಂದ, ಬೇರೆ ರಾಷ್ಟ್ರಕ್ಕೆ ತೆರಳೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಸಿನಿಮಾ ಕೆಲಸವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಧ್ರುವ ಸರ್ಜಾ ‘ದುಬಾರಿ’ ಆಲೋಚನೆ ಸದ್ಯಕ್ಕೆ ಕೈಬಿಟ್ಟ ನಿರ್ಮಾಪಕರು; ಚಿತ್ರದಿಂದ ಹೊರನಡೆದ ನಿರ್ದೇಶಕ ನಂದ ಕಿಶೋರ್​?
ಧ್ರುವ ಸರ್ಜಾ
ರಾಜೇಶ್ ದುಗ್ಗುಮನೆ
| Edited By: |

Updated on: Jun 12, 2021 | 7:26 AM

Share

‘ಪೊಗರು’ ಸಿನಿಮಾ ತೆರೆಕಂಡ ನಂತರದಲ್ಲಿ ಧ್ರುವ ಸರ್ಜಾ ‘ದುಬಾರಿ’ ಸಿನಿಮಾ ಸೆಟ್​ ಸೇರಿಕೊಳ್ಳಬೇಕಿತ್ತು. ಆದರೆ, ಮುಹೂರ್ತ ನಡೆದಿದ್ದು ಬಿಟ್ಟರೆ ಈ ಚಿತ್ರದ ಯಾವುದೇ ಅಪ್​​ಡೇಟ್​ ಸಿಕ್ಕಿರಲಿಲ್ಲ. ಇತ್ತೀಚೆಗೆ ಚಿತ್ರದ ನಿರ್ದೇಶಕ ನಂದ ಕಿಶೋರ್ ಈ ಪ್ರಾಜೆಕ್ಟ್​ನಿಂದ ಹೊರ ಬಂದಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈಗ ಈ ಎಲ್ಲಾ ವಿಚಾರಗಳಿಗೆ ಸಿನಿಮಾ ನಿರ್ಮಾಪಕ ಉದಯ್​ ಕೆ . ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ.

ಆಂಗ್ಲ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ಉದಯ್​, ‘ನಂದಕಿಶೋರ್​ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನುವುದು ಸುಳ್ಳು. ನಂದ ಕಿಶೋರ್ ಅವರೇ ‘ದುಬಾರಿ’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಆದರೆ, ಸಿನಿಮಾವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಅಷ್ಟೇ’ ಎಂದಿದ್ದಾರೆ.

ಹಾಗಾದರೆ ಸಿನಿಮಾ ನಿಲ್ಲಲು ಕಾರಣ? ಹೆಸರಿಗೆ ತಕ್ಕಂತೆ ಇದು ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನಿಮಾ. ಚಿತ್ರದ ಬಹುತೇಕ ಶೂಟಿಂಗ್ ಬೇರೆ ಬೇರೆ ರಾಷ್ಟ್ರಗಳಲ್ಲಿ ನಡೆಯಲಿದೆ. ಸದ್ಯ, ಕೊವಿಡ್ ಇರುವುದರಿಂದ, ಬೇರೆ ರಾಷ್ಟ್ರಕ್ಕೆ ತೆರಳೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಸಿನಿಮಾ ಕೆಲಸವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಈ ವಿಚಾರ ಕೇಳಿ ಅಭಿಮಾನಿಗಳು ಬೇಸರ ಮಾಡಿಕೊಳ್ಳುವಂತಿಲ್ಲ. ಏಕೆಂದರೆ, ಒಂದು ಗುಡ್​ ನ್ಯೂಸ್ ಕೂಡ ಇದೆ. ಇದೇ ಸಮಯದಲ್ಲಿ ಹೊಸ ಸ್ಕ್ರಿಪ್ಟ್​​ ಒಂದನ್ನು ಸಿದ್ಧಪಡಿಸಲಾಗುತ್ತಿದ್ದು, ಧ್ರುವ ಅವರೇ ಚಿತ್ರದಲ್ಲಿ ಲೀಡ್​ ರೋಲ್​ ಮಾಡುತ್ತಿದ್ದಾರೆ. ಈ ಬಗ್ಗೆ ಶೀಘ್ರವೇ ಘೋಷಣೆ ಆಗಲಿದೆ.

ತೆಲುಗಿನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್​ ನಿರ್ದೇಶನದ ಸಿನಿಮಾಗೆ ಧ್ರುವ ನಾಯಕ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಈ ಪ್ರಾಜೆಕ್ಟ್​ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಈವರೆಗೆ ಹೊರಬಿದ್ದಿಲ್ಲ. ಫೆಬ್ರವರಿ ತಿಂಗಳಲ್ಲಿ ಪೊಗರು ಸಿನಿಮಾ ತೆರೆಗೆ ಬಂದಿತ್ತು. ಮೊದಲ ಮೂರು ದಿನಕ್ಕೆ ಈ ಚಿತ್ರ 30 ಕೋಟಿ ರೂ. ಕಲೆಕ್ಷನ್​ ಮಾಡಿತು. 6 ದಿನಗಳಲ್ಲಿ 46 ಕೋಟಿ ರೂ. ಗಳಿಸಿರುವ ಬಗ್ಗೆ ಮಾಹಿತಿ ಕೇಳಿಬಂದಿತ್ತು. ಒಟ್ಟಾರೆಯಾಗಿ ಈ ಚಿತ್ರಕ್ಕೆ 50 ಕೋಟಿಗೂ ಹೆಚ್ಚು ಕಲೆಕ್ಷನ್​ ಆಗಿದೆ ಎನ್ನಲಾಗುತ್ತಿದೆ. ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ಈ ಚಿತ್ರ ತೆರೆಕಂಡಿತ್ತು. ಧ್ರುವ ಸರ್ಜಾಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದರು.

ಇದನ್ನೂ ಓದಿ: Dhruva Sarja : ಧ್ರುವ ಸರ್ಜಾ ಬೌನ್ಸರ್​ಗೆ ಹಿಗ್ಗಾಮುಗ್ಗ ತರಾಟೆ, ನೂಕುನುಗ್ಗಲು ಜಟಾಪಟಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ