AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ರುವ ಸರ್ಜಾ ‘ದುಬಾರಿ’ ಆಲೋಚನೆ ಸದ್ಯಕ್ಕೆ ಕೈಬಿಟ್ಟ ನಿರ್ಮಾಪಕರು; ಚಿತ್ರದಿಂದ ಹೊರನಡೆದ ನಿರ್ದೇಶಕ ನಂದ ಕಿಶೋರ್​?

ಚಿತ್ರದ ಬಹುತೇಕ ಶೂಟಿಂಗ್ ಬೇರೆ ಬೇರೆ ರಾಷ್ಟ್ರಗಳಲ್ಲಿ ನಡೆಯಲಿದೆ. ಸದ್ಯ, ಕೊವಿಡ್ ಇರುವುದರಿಂದ, ಬೇರೆ ರಾಷ್ಟ್ರಕ್ಕೆ ತೆರಳೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಸಿನಿಮಾ ಕೆಲಸವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಧ್ರುವ ಸರ್ಜಾ ‘ದುಬಾರಿ’ ಆಲೋಚನೆ ಸದ್ಯಕ್ಕೆ ಕೈಬಿಟ್ಟ ನಿರ್ಮಾಪಕರು; ಚಿತ್ರದಿಂದ ಹೊರನಡೆದ ನಿರ್ದೇಶಕ ನಂದ ಕಿಶೋರ್​?
ಧ್ರುವ ಸರ್ಜಾ
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Jun 12, 2021 | 7:26 AM

Share

‘ಪೊಗರು’ ಸಿನಿಮಾ ತೆರೆಕಂಡ ನಂತರದಲ್ಲಿ ಧ್ರುವ ಸರ್ಜಾ ‘ದುಬಾರಿ’ ಸಿನಿಮಾ ಸೆಟ್​ ಸೇರಿಕೊಳ್ಳಬೇಕಿತ್ತು. ಆದರೆ, ಮುಹೂರ್ತ ನಡೆದಿದ್ದು ಬಿಟ್ಟರೆ ಈ ಚಿತ್ರದ ಯಾವುದೇ ಅಪ್​​ಡೇಟ್​ ಸಿಕ್ಕಿರಲಿಲ್ಲ. ಇತ್ತೀಚೆಗೆ ಚಿತ್ರದ ನಿರ್ದೇಶಕ ನಂದ ಕಿಶೋರ್ ಈ ಪ್ರಾಜೆಕ್ಟ್​ನಿಂದ ಹೊರ ಬಂದಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈಗ ಈ ಎಲ್ಲಾ ವಿಚಾರಗಳಿಗೆ ಸಿನಿಮಾ ನಿರ್ಮಾಪಕ ಉದಯ್​ ಕೆ . ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ.

ಆಂಗ್ಲ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ಉದಯ್​, ‘ನಂದಕಿಶೋರ್​ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನುವುದು ಸುಳ್ಳು. ನಂದ ಕಿಶೋರ್ ಅವರೇ ‘ದುಬಾರಿ’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಆದರೆ, ಸಿನಿಮಾವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಅಷ್ಟೇ’ ಎಂದಿದ್ದಾರೆ.

ಹಾಗಾದರೆ ಸಿನಿಮಾ ನಿಲ್ಲಲು ಕಾರಣ? ಹೆಸರಿಗೆ ತಕ್ಕಂತೆ ಇದು ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನಿಮಾ. ಚಿತ್ರದ ಬಹುತೇಕ ಶೂಟಿಂಗ್ ಬೇರೆ ಬೇರೆ ರಾಷ್ಟ್ರಗಳಲ್ಲಿ ನಡೆಯಲಿದೆ. ಸದ್ಯ, ಕೊವಿಡ್ ಇರುವುದರಿಂದ, ಬೇರೆ ರಾಷ್ಟ್ರಕ್ಕೆ ತೆರಳೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಸಿನಿಮಾ ಕೆಲಸವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಈ ವಿಚಾರ ಕೇಳಿ ಅಭಿಮಾನಿಗಳು ಬೇಸರ ಮಾಡಿಕೊಳ್ಳುವಂತಿಲ್ಲ. ಏಕೆಂದರೆ, ಒಂದು ಗುಡ್​ ನ್ಯೂಸ್ ಕೂಡ ಇದೆ. ಇದೇ ಸಮಯದಲ್ಲಿ ಹೊಸ ಸ್ಕ್ರಿಪ್ಟ್​​ ಒಂದನ್ನು ಸಿದ್ಧಪಡಿಸಲಾಗುತ್ತಿದ್ದು, ಧ್ರುವ ಅವರೇ ಚಿತ್ರದಲ್ಲಿ ಲೀಡ್​ ರೋಲ್​ ಮಾಡುತ್ತಿದ್ದಾರೆ. ಈ ಬಗ್ಗೆ ಶೀಘ್ರವೇ ಘೋಷಣೆ ಆಗಲಿದೆ.

ತೆಲುಗಿನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್​ ನಿರ್ದೇಶನದ ಸಿನಿಮಾಗೆ ಧ್ರುವ ನಾಯಕ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಈ ಪ್ರಾಜೆಕ್ಟ್​ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಈವರೆಗೆ ಹೊರಬಿದ್ದಿಲ್ಲ. ಫೆಬ್ರವರಿ ತಿಂಗಳಲ್ಲಿ ಪೊಗರು ಸಿನಿಮಾ ತೆರೆಗೆ ಬಂದಿತ್ತು. ಮೊದಲ ಮೂರು ದಿನಕ್ಕೆ ಈ ಚಿತ್ರ 30 ಕೋಟಿ ರೂ. ಕಲೆಕ್ಷನ್​ ಮಾಡಿತು. 6 ದಿನಗಳಲ್ಲಿ 46 ಕೋಟಿ ರೂ. ಗಳಿಸಿರುವ ಬಗ್ಗೆ ಮಾಹಿತಿ ಕೇಳಿಬಂದಿತ್ತು. ಒಟ್ಟಾರೆಯಾಗಿ ಈ ಚಿತ್ರಕ್ಕೆ 50 ಕೋಟಿಗೂ ಹೆಚ್ಚು ಕಲೆಕ್ಷನ್​ ಆಗಿದೆ ಎನ್ನಲಾಗುತ್ತಿದೆ. ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ಈ ಚಿತ್ರ ತೆರೆಕಂಡಿತ್ತು. ಧ್ರುವ ಸರ್ಜಾಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದರು.

ಇದನ್ನೂ ಓದಿ: Dhruva Sarja : ಧ್ರುವ ಸರ್ಜಾ ಬೌನ್ಸರ್​ಗೆ ಹಿಗ್ಗಾಮುಗ್ಗ ತರಾಟೆ, ನೂಕುನುಗ್ಗಲು ಜಟಾಪಟಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ