AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬಾರಿ ನಿರೀಕ್ಷೆಯಲ್ಲಿದ್ದ ಧ್ರುವ ಸರ್ಜಾ ಅಭಿಮಾನಿಗಳಿಗೆ ಈ ಸುದ್ದಿ ಓದಿದ್ರೆ ಶ್ಯಾನೇ ಬೇಜಾರಾಗಬಹುದು!

ಧ್ರುವ ಸರ್ಜಾ ಅವರ ಮುಂದಿನ ಚಿತ್ರ ದುಬಾರಿ. ಈ ಹಿಂದಿನ ಸಿನಿಮಾಗಳಂತೆ ಈ ಚಿತ್ರಕ್ಕೂ ಮೂರೇ ಅಕ್ಷರ. ಅಲ್ಲದೆ, ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ಇರಲಿದೆ ಎನ್ನುವ ಮಾಹಿತಿ ಈಗಾಗಲೇ ಅಭಿಮಾನಿ ವಲಯದಲ್ಲಿ ಸುದ್ದಿಯಾಗಿದೆ.

ದುಬಾರಿ ನಿರೀಕ್ಷೆಯಲ್ಲಿದ್ದ ಧ್ರುವ ಸರ್ಜಾ ಅಭಿಮಾನಿಗಳಿಗೆ ಈ ಸುದ್ದಿ ಓದಿದ್ರೆ ಶ್ಯಾನೇ ಬೇಜಾರಾಗಬಹುದು!
ಧ್ರುವ ಸರ್ಜಾ
Follow us
ರಾಜೇಶ್ ದುಗ್ಗುಮನೆ
|

Updated on: Apr 09, 2021 | 7:55 PM

ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ತೆರೆಕಂಡು ಸ್ಯಾಂಡಲ್​ವುಡ್​​ನಲ್ಲಿ​ ಸದ್ದು ಮಾಡಿದ್ದು ಮಾತ್ರವಲ್ಲ, 50 ಕೋಟಿ ರೂಪಾಯಿ ಕಲೆಕ್ಷನ್​ ಕೂಡ ಮಾಡಿತ್ತು. ಈಗ ಧ್ರುವ ಸರ್ಜಾ ಅವರು ಮುಂದಿನ ಸಿನಿಮಾದ ಮೇಲೆ ಅಭಿಮಾನಿಗಳು ಕಣ್ಣಿಟ್ಟಿದ್ದಾರೆ. ಅವರ ಮುಂದಿನ ಚಿತ್ರದ ಅಪ್​ಡೇಟ್​ ತಿಳಿದುಕೊಳ್ಳೋಕೆ ಕಾತುರರಾಗಿದ್ದಾರೆ. ಧ್ರುವ ಸರ್ಜಾ ಮುಂದಿನ ಚಿತ್ರದ ಬಗ್ಗೆ ಹೊಸ ಅಪ್​ಡೇಟ್​ ಏನೋ ಸಿಕ್ಕಿದೆ. ಆದರೆ, ಫ್ಯಾನ್ಸ್​​ಗೆ ಇಲ್ಲೊಂದು ಕಹಿ ವಿಚಾರ ಇದೆ. ಧ್ರುವ ಸರ್ಜಾ ಅವರ ಮುಂದಿನ ಚಿತ್ರ ದುಬಾರಿ. ಈ ಹಿಂದಿನ ಸಿನಿಮಾಗಳಂತೆ ಈ ಚಿತ್ರಕ್ಕೂ ಮೂರೇ ಅಕ್ಷರ. ಅಲ್ಲದೆ, ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ಇರಲಿದೆ ಎನ್ನುವ ಮಾಹಿತಿ ಈಗಾಗಲೇ ಅಭಿಮಾನಿ ವಲಯದಲ್ಲಿ ಸುದ್ದಿಯಾಗಿದೆ. ಆದರೆ, ಈಗ ಸಿನಿಮಾದ ಶೂಟಿಂಗ್​ ಮುಂದೂಡಲ್ಪಟ್ಟಿದೆಯಂತೆ!

ಪೊಗರು ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳಿದ್ದ ನಂದಕಿಶೋರ್​ ದುಬಾರಿ ಸಿನಿಮಾಗೂ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಶೂಟಿಂಗ್​ ಕೂಡ ಈಗಾಗಲೇ ಆರಂಭಗೊಳ್ಳಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ಶೂಟಿಂಗ್​ ಮುಂದೂಡಲ್ಪಟ್ಟಿದೆಯಂತೆ. ಇದು ಅಭಿಮಾನಿಗಳಿಗೆ ಸಾಕಷ್ಟು​ ಬೇಸರ ಮೂಡಿಸಿದೆ.

ಮೂಲಗಳ ಪ್ರಕಾರ ಕೆ. ಮಂಜು ಪುತ್ರನ ಚಿತ್ರಕ್ಕೆ ನಂದಕಿಶೋರ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಪೂರ್ಣಗೊಂಡ ನಂತರದಲ್ಲಿ ನಂದಕಿಶೋರ್​ ಹೊಸ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ. ಹೀಗಾಗಿ, ದುಬಾರಿ ಚಿತ್ರದ ಶೂಟಿಂಗ್​ ವಿಳಂಬವಾಗಬಹುದು ಎನ್ನಲಾಗುತ್ತಿದೆ.

ಇನ್ನು, ತೆಲುಗಿನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್​ ನಿರ್ದೇಶನದ ಸಿನಿಮಾಗೆ ಧ್ರುವ ನಾಯಕ ಎನ್ನುವ ಮಾತು ಕೇಳಿ ಬಂದಿದೆ. ಒಂದೊಮ್ಮೆ ಇದು ಸತ್ಯವಾದರೆ, ಈ ಸಿನಿಮಾ ಪ್ಯಾನ್​ ಇಂಡಿಯಾ ಚಿತ್ರವಾಗಲಿದೆ.

ಫೆಬ್ರವರಿ ತಿಂಗಳಲ್ಲಿ ಪೊಗರು ಸಿನಿಮಾ ತೆರೆಗೆ ಬಂದಿತ್ತು. ಮೊದಲ ಮೂರು ದಿನಕ್ಕೆ ಈ ಚಿತ್ರ 30 ಕೋಟಿ ರೂ. ಕಲೆಕ್ಷನ್​ ಮಾಡಿತು. 6 ದಿನಗಳಲ್ಲಿ 46 ಕೋಟಿ ರೂ. ಗಳಿಸಿರುವ ಬಗ್ಗೆ ಮಾಹಿತಿ ಕೇಳಿಬಂದಿತ್ತು. ಒಟ್ಟಾರೆಯಾಗಿ ಈ ಚಿತ್ರಕ್ಕೆ 50 ಕೋಟಿಗೂ ಹೆಚ್ಚು ಕಲೆಕ್ಷನ್​ ಆಗಿದೆ ಎನ್ನಲಾಗುತ್ತಿದೆ. ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ಈ ಚಿತ್ರ ತೆರೆಕಂಡಿತ್ತು. ಈ ಚಿತ್ರ ತೆರೆಕಂಡಿತ್ತು. ಧ್ರುವ ಸರ್ಜಾಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದು, ಅವರ ಖಾತೆಗೆ ಮತ್ತೊಂದು ಹಿಟ್​ ಸಿನಿಮಾ ಸೇರಿಕೊಂಡಂತಾಗಿದೆ.

ಇದನ್ನೂ ಓದಿ: 50 ದಿನ ಪೂರೈಸಿದ ಪೊಗರು! ಧ್ರುವ ಸರ್ಜಾ ನಟನೆಯ ಈ ಚಿತ್ರ ಮಾಡಿದ ಕಲೆಕ್ಷನ್​ ಎಷ್ಟು?

VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??