AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬಾರಿ ನಿರೀಕ್ಷೆಯಲ್ಲಿದ್ದ ಧ್ರುವ ಸರ್ಜಾ ಅಭಿಮಾನಿಗಳಿಗೆ ಈ ಸುದ್ದಿ ಓದಿದ್ರೆ ಶ್ಯಾನೇ ಬೇಜಾರಾಗಬಹುದು!

ಧ್ರುವ ಸರ್ಜಾ ಅವರ ಮುಂದಿನ ಚಿತ್ರ ದುಬಾರಿ. ಈ ಹಿಂದಿನ ಸಿನಿಮಾಗಳಂತೆ ಈ ಚಿತ್ರಕ್ಕೂ ಮೂರೇ ಅಕ್ಷರ. ಅಲ್ಲದೆ, ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ಇರಲಿದೆ ಎನ್ನುವ ಮಾಹಿತಿ ಈಗಾಗಲೇ ಅಭಿಮಾನಿ ವಲಯದಲ್ಲಿ ಸುದ್ದಿಯಾಗಿದೆ.

ದುಬಾರಿ ನಿರೀಕ್ಷೆಯಲ್ಲಿದ್ದ ಧ್ರುವ ಸರ್ಜಾ ಅಭಿಮಾನಿಗಳಿಗೆ ಈ ಸುದ್ದಿ ಓದಿದ್ರೆ ಶ್ಯಾನೇ ಬೇಜಾರಾಗಬಹುದು!
ಧ್ರುವ ಸರ್ಜಾ
ರಾಜೇಶ್ ದುಗ್ಗುಮನೆ
|

Updated on: Apr 09, 2021 | 7:55 PM

Share

ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ತೆರೆಕಂಡು ಸ್ಯಾಂಡಲ್​ವುಡ್​​ನಲ್ಲಿ​ ಸದ್ದು ಮಾಡಿದ್ದು ಮಾತ್ರವಲ್ಲ, 50 ಕೋಟಿ ರೂಪಾಯಿ ಕಲೆಕ್ಷನ್​ ಕೂಡ ಮಾಡಿತ್ತು. ಈಗ ಧ್ರುವ ಸರ್ಜಾ ಅವರು ಮುಂದಿನ ಸಿನಿಮಾದ ಮೇಲೆ ಅಭಿಮಾನಿಗಳು ಕಣ್ಣಿಟ್ಟಿದ್ದಾರೆ. ಅವರ ಮುಂದಿನ ಚಿತ್ರದ ಅಪ್​ಡೇಟ್​ ತಿಳಿದುಕೊಳ್ಳೋಕೆ ಕಾತುರರಾಗಿದ್ದಾರೆ. ಧ್ರುವ ಸರ್ಜಾ ಮುಂದಿನ ಚಿತ್ರದ ಬಗ್ಗೆ ಹೊಸ ಅಪ್​ಡೇಟ್​ ಏನೋ ಸಿಕ್ಕಿದೆ. ಆದರೆ, ಫ್ಯಾನ್ಸ್​​ಗೆ ಇಲ್ಲೊಂದು ಕಹಿ ವಿಚಾರ ಇದೆ. ಧ್ರುವ ಸರ್ಜಾ ಅವರ ಮುಂದಿನ ಚಿತ್ರ ದುಬಾರಿ. ಈ ಹಿಂದಿನ ಸಿನಿಮಾಗಳಂತೆ ಈ ಚಿತ್ರಕ್ಕೂ ಮೂರೇ ಅಕ್ಷರ. ಅಲ್ಲದೆ, ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ಇರಲಿದೆ ಎನ್ನುವ ಮಾಹಿತಿ ಈಗಾಗಲೇ ಅಭಿಮಾನಿ ವಲಯದಲ್ಲಿ ಸುದ್ದಿಯಾಗಿದೆ. ಆದರೆ, ಈಗ ಸಿನಿಮಾದ ಶೂಟಿಂಗ್​ ಮುಂದೂಡಲ್ಪಟ್ಟಿದೆಯಂತೆ!

ಪೊಗರು ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳಿದ್ದ ನಂದಕಿಶೋರ್​ ದುಬಾರಿ ಸಿನಿಮಾಗೂ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಶೂಟಿಂಗ್​ ಕೂಡ ಈಗಾಗಲೇ ಆರಂಭಗೊಳ್ಳಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ಶೂಟಿಂಗ್​ ಮುಂದೂಡಲ್ಪಟ್ಟಿದೆಯಂತೆ. ಇದು ಅಭಿಮಾನಿಗಳಿಗೆ ಸಾಕಷ್ಟು​ ಬೇಸರ ಮೂಡಿಸಿದೆ.

ಮೂಲಗಳ ಪ್ರಕಾರ ಕೆ. ಮಂಜು ಪುತ್ರನ ಚಿತ್ರಕ್ಕೆ ನಂದಕಿಶೋರ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಪೂರ್ಣಗೊಂಡ ನಂತರದಲ್ಲಿ ನಂದಕಿಶೋರ್​ ಹೊಸ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ. ಹೀಗಾಗಿ, ದುಬಾರಿ ಚಿತ್ರದ ಶೂಟಿಂಗ್​ ವಿಳಂಬವಾಗಬಹುದು ಎನ್ನಲಾಗುತ್ತಿದೆ.

ಇನ್ನು, ತೆಲುಗಿನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್​ ನಿರ್ದೇಶನದ ಸಿನಿಮಾಗೆ ಧ್ರುವ ನಾಯಕ ಎನ್ನುವ ಮಾತು ಕೇಳಿ ಬಂದಿದೆ. ಒಂದೊಮ್ಮೆ ಇದು ಸತ್ಯವಾದರೆ, ಈ ಸಿನಿಮಾ ಪ್ಯಾನ್​ ಇಂಡಿಯಾ ಚಿತ್ರವಾಗಲಿದೆ.

ಫೆಬ್ರವರಿ ತಿಂಗಳಲ್ಲಿ ಪೊಗರು ಸಿನಿಮಾ ತೆರೆಗೆ ಬಂದಿತ್ತು. ಮೊದಲ ಮೂರು ದಿನಕ್ಕೆ ಈ ಚಿತ್ರ 30 ಕೋಟಿ ರೂ. ಕಲೆಕ್ಷನ್​ ಮಾಡಿತು. 6 ದಿನಗಳಲ್ಲಿ 46 ಕೋಟಿ ರೂ. ಗಳಿಸಿರುವ ಬಗ್ಗೆ ಮಾಹಿತಿ ಕೇಳಿಬಂದಿತ್ತು. ಒಟ್ಟಾರೆಯಾಗಿ ಈ ಚಿತ್ರಕ್ಕೆ 50 ಕೋಟಿಗೂ ಹೆಚ್ಚು ಕಲೆಕ್ಷನ್​ ಆಗಿದೆ ಎನ್ನಲಾಗುತ್ತಿದೆ. ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ಈ ಚಿತ್ರ ತೆರೆಕಂಡಿತ್ತು. ಈ ಚಿತ್ರ ತೆರೆಕಂಡಿತ್ತು. ಧ್ರುವ ಸರ್ಜಾಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದು, ಅವರ ಖಾತೆಗೆ ಮತ್ತೊಂದು ಹಿಟ್​ ಸಿನಿಮಾ ಸೇರಿಕೊಂಡಂತಾಗಿದೆ.

ಇದನ್ನೂ ಓದಿ: 50 ದಿನ ಪೂರೈಸಿದ ಪೊಗರು! ಧ್ರುವ ಸರ್ಜಾ ನಟನೆಯ ಈ ಚಿತ್ರ ಮಾಡಿದ ಕಲೆಕ್ಷನ್​ ಎಷ್ಟು?

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!