ಚಿತ್ರಮಂದಿರಕ್ಕೆ ಶೇ. 50 ನಿರ್ಬಂಧ ಏಕೆ? Housefull ಪ್ರದರ್ಶನಕ್ಕೆ ಅವಕಾಶ ನೀಡಿ: ಸಿನಿ ದಿಗ್ಗಜರಿಂದ ಆಗ್ರಹ
Sandalwood News ನಟ ಧ್ರುವಾ ಸರ್ಜಾ, ದುನಿಯಾ ವಿಜಿ, ನಿರ್ದೇಶಕ ಪ್ರಶಾಂತ್ ನೀಲ್, ಎ.ಪಿ.ಅರ್ಜುನ್, ಪವನ್ ಒಡೆಯರ್, ಸಿಂಪಲ್ ಸುನಿ, ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ, ರಕ್ಷಿತ್ ಶೆಟ್ಟಿ, ಕಾರ್ತಿಕ್ ಗೌಡ ಸೇರಿದಂತೆ ಚಿತ್ರರಂಗದ ಅನೇಕರು ದನಿಯೆತ್ತಿದ್ದಾರೆ.

ಚಿತ್ರಮಂದಿರಕ್ಕೆ ಶೇ. 50ರಷ್ಟು ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ನಿಲುವನ್ನು ಪ್ರಶ್ನಿಸಿ ನಟ ಧ್ರುವಾ ಸರ್ಜಾ ಈಗಾಗಲೇ ಗರಂ ಆಗಿದ್ದಾರೆ. ಅವರೊಂದಿಗೆ ನಟ ದುನಿಯಾ ವಿಜಿ, ನಿರ್ದೇಶಕ ಪ್ರಶಾಂತ್ ನೀಲ್, ಎ.ಪಿ. ಅರ್ಜುನ್, ಪವನ್ ಒಡೆಯರ್, ಸಿಂಪಲ್ ಸುನಿ, ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ, ಕಾರ್ತಿಕ್ ಗೌಡ, ರಕ್ಷಿತ್ ಶೆಟ್ಟಿ ಸೇರಿದಂತೆ ಚಿತ್ರರಂಗದ ಅನೇಕರು ದನಿಯೆತ್ತಿದ್ದು, ನಿರ್ಬಂಧ ತೆರವುಗೊಳಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಚಿತ್ರಮಂದಿರಗಳಲ್ಲಿ ಶೇ. 100ರಷ್ಟು ಪ್ರೇಕ್ಷಕರಿಗೆ ಅವಕಾಶ ಕೊಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲು ಫಿಲಂ ಚೇಂಬರ್ ಸಹ ತಯಾರಾಗಿದೆ. ಈ ಕುರಿತು ಇಂದು ಫಿಲಂ ಚೇಂಬರ್ನಲ್ಲಿ ಮಾತುಕತೆ ನಡೆಯಲಿದ್ದು ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ.
ಈ ಬಗ್ಗೆ ಫಿಲಂ ಚೇಂಬರ್ ಅಧ್ಯಕ್ಷ ಜಯರಾಜ್ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದು, ಲಸಿಕೆ ಬಂದ ನಂತರ ಆತಂಕ ಇಲ್ಲದೆ ಜನ ಓಡಾಡುತ್ತಿದ್ದಾರೆ. ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡ ಚಿತ್ರರಂಗಕ್ಕೆ ಚೇತರಿಸಿಕೊಳ್ಳಲು ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದು ಹೇಳಿದ್ದಾರೆ.
ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಕೇಂದ್ರ ಸರ್ಕಾರ ಕೆಲ ದಿನಗಳ ಹಿಂದೆಯಷ್ಟೇ ಅನುಮತಿ ಸೂಚಿಸಿತ್ತು. ಇದು ಚಿತ್ರರಂಗಕ್ಕೆ ಖುಷಿ ನೀಡಿತ್ತು ಕೂಡಾ. ಆದರೆ, ಫೆ.2ರಂದು ಕರ್ನಾಟಕ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿ ಫೆಬ್ರವರಿ ಅಂತ್ಯದವರೆಗೂ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ಎಂದು ಹೇಳಿರುವುದು ಕನ್ನಡ ಚಿತ್ರರಂಗಕ್ಕೆ ಶಾಕ್ ನೀಡಿದೆ.
— Duniya Vijay (@OfficialViji) February 3, 2021
While cinema is entertainment to most, it’s lifeline to many.#KFIdemandsFullOccupancy@drashwathcn @CMofKarnataka @mla_sudhakar pic.twitter.com/rkNjc8eWBX
— Prashanth Neel (@prashanth_neel) February 3, 2021
Cinemas are safe. Allow us to entertain the audience with full force.#KFIdemandsFullOccupancy@drashwathcn @CMofKarnataka @mla_sudhakar pic.twitter.com/klIziAkCf4
— KRG Studios (@KRG_Studios) February 3, 2021
#KFIDemandsFullOccupancy https://t.co/xT30oP2qIC
— Pavan Wadeyar (@PavanWadeyar) February 3, 2021
ಕರ್ನಾಟಕದಲ್ಲಿ ಚಿತ್ರಮಂದಿರಗಳು ಪೂರ್ತಿ ಭರ್ತಿಯಾಗಲು ಅವಕಾಶ ಕೊಡಿ#KFIDemandsFullOccupancy@drashwathcn @CMofKarnataka @mla_sudhakar pic.twitter.com/T4oViw4rZl
— PushkarFilms (@PushkarFilms) February 3, 2021
ವಿಮಾನದೊಳಗೆ ಭುಜಕ್ಕೆ ಭುಜ ತಾಕಿ ಕೂರಬಹುದು.. ದೇವಸ್ಥಾನದಲ್ಲಿ ಎಲ್ಲರ ಕೈಗಳು ಒಂದೇ ಗಂಟೆ ಬಾರಿಸಬಹುದು..
ಮಾರ್ಕೆಟ್ ನಲ್ಲಿ ಮಾಮುಲಿ ವ್ಯಾಪಾರ ರಾಜಕೀಯ ರ಼್ಯಾಲಿಗೆ ಜನಸಾಗರ ಪಬ್ ಹೋಟೆಲ್ ನಲ್ಲಿ ಎಲ್ಲರ ವಿಹಾರ ಚಿತ್ರಮಂದಿರಕೆ ಮಾತ್ರ ಯಾಕೆ ಕಟ್ಟೆಚ್ಚರ??#KFIDemandsFullOccupancy@drashwathcn @CMofKarnataka @mla_sudhakar pic.twitter.com/iZiouk9IpF
— ಸುನಿ/SuNi (@SimpleSuni) February 3, 2021
#KFIDemandsFullOccupancy@drashwathcn @CMofKarnataka @mla_sudhakar pic.twitter.com/sXyWJjCsg5
— Karthik Gowda (@Karthik1423) February 3, 2021
ರಕ್ಷಿತ್ ಶೆಟ್ಟಿ ಟ್ವೀಟ್
While every other public area continues to bustle with people, Karnataka has once again limited the theatre occupancy to 50%. Why? Are we forgetting that cinema is a means of livelihood for many across the state!#KFIDemandsFullOccupancy @drashwathcn @CMofKarnataka @mla_sudhakar
— Rakshit Shetty (@rakshitshetty) February 3, 2021
ಚಿತ್ರಮಂದಿರಕ್ಕೆ ಶೇ.50ರಷ್ಟು ನಿರ್ಬಂಧ ವಿಧಿಸಿದ ಹಿನ್ನೆಲೆಯಲ್ಲಿ, ಶಶಾಂಕ್ ಶೇಷಗಿರಿ ವಿರೋಧ ವ್ಯಕ್ತಪಡಿಸಿದ್ದಾರೆ. ಪೊಗರು ಚಿತ್ರದ ಟೈಟಲ್ ಟ್ರ್ಯಾಕ್ ಹಾಡಿರುವ ಗಾಯಕ ಚಿತ್ರಮಂದಿರದಲ್ಲಿ ಶೇಕಡಾ 100ರಷ್ಟು ಭರ್ತಿಗೆ ಆಗ್ರಹಿಸಿದ್ದಾರೆ.
ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ ಕೇಂದ್ರ ಸರ್ಕಾರ ಚಿತ್ರ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಸೂಚಿಸಿದೆ. ನಂತರ ರಾಜ್ಯಗಳಿಗೆ ಕ್ರಮಕೈಗೊಳ್ಳಲು ಸೂಚಿಸಿದೆ. ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆ ನಾವು ನಿಯಮಾವಳಿಗಳನ್ನು ಬಿಡುಗಡೆ ಮಾಡಿದ್ದೇವೆ. ಫೆ.28 ವರೆಗೂ ಶೇ.50ರಷ್ಟು ಜನರಿಗೆ ಚಿತ್ರಮಂದಿರಗಳಲ್ಲಿ ಅವಕಾಶವಿದೆ. ಚಿತ್ರ ಮಂದಿರಗಳಲ್ಲಿ ಸೋಂಕು ಹರಡುವ ಅಪಾಯ ಹೆಚ್ಚಿದೆ. ಮನರಂಜನೆಗಿಂತ ಜನರ ಆರೋಗ್ಯ ಮುಖ್ಯ. ಹಾಗಾಗಿ, ಮತ್ತೊಮ್ಮೆ ತಾಂತ್ರಿಕ ಸಲಹ ಸಮಿತಿ ಜೊತೆ ಸಭೆ ಮಾಡುತ್ತೇನೆ. ಅವರ ಸಲಹೆ ಮೇರೆಗೆ ಅಂತಿಮ ನಿರ್ಧಾರ ಮಾಡುತ್ತೇನೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ನಾನು ಮಂತ್ರಿಯಾಗಿ ಏಕಾಏಕಿ ನಿರ್ಧಾರ ಸಾಧ್ಯವಾಗುವುದಿಲ್ಲ. ಸಿಎಂ ಮತ್ತು ತಾಂತ್ರಿಕ ಸಲಹಾ ಸಮಿತಿ ಸಭೆ ಸೇರಿ ಮುಂದೆ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.
Published On - 1:30 pm, Wed, 3 February 21



