AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾರ್ಟಿನ್’ ಅನ್ನು ಪ್ಯಾನ್ ವರ್ಲ್ಡ್ ಮಾಡುವ ಆಲೋಚನೆ ಬಂದಿದ್ದು ಯಾರಿಂದ?

ಧ್ರುವ ಸರ್ಜಾ ನಟಿಸಿ ಎಪಿ ಅರ್ಜುನ್ ನಿರ್ದೇಶನ ಮಾಡಿರುವ ‘ಮಾರ್ಟಿನ್’ ಕನ್ನಡ ಸಿನಿಮಾ ಪ್ಯಾನ್ ವರ್ಲ್ಡ್ ಲೆವೆಲ್​ನಲ್ಲಿ ಬಿಡುಗಡೆ ಆಗುತ್ತಿದೆ. ಆದರೆ ಸಿನಿಮಾವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆ ಮಾಡಬೇಕು ಎಂಬ ಯೋಚನೆ ಚಿತ್ರರಂಗಕ್ಕೆ ಬರಲು ಕಾರಣವೇನು?

‘ಮಾರ್ಟಿನ್’ ಅನ್ನು ಪ್ಯಾನ್ ವರ್ಲ್ಡ್ ಮಾಡುವ ಆಲೋಚನೆ ಬಂದಿದ್ದು ಯಾರಿಂದ?
ಮಂಜುನಾಥ ಸಿ.
|

Updated on: Aug 03, 2024 | 9:03 PM

Share

ಪ್ರತಿಯೊಬ್ಬರೂ ಈಗ ಪ್ಯಾನ್ ಇಂಡಿಯಾ ಸಿನಿಮಾದ ಹಿಂದೆ ಬಿದ್ದಿದ್ದಾರೆ. 20-30 ಕೋಟಿ ಬಜೆಟ್ ಸಿನಿಮಾ ಮಾಡುವವರೂ ಸಹ ಪ್ಯಾನ್ ಇಂಡಿಯಾ ಪ್ರಯತ್ನಕ್ಕೆ ಮುಂದಾಗುತ್ತಿದ್ದಾರೆ. ದೊಡ್ಡ ಬಜೆಟ್ ಸಿನಿಮಾಗಳಿಗಂತೂ ಪ್ಯಾನ್ ಇಂಡಿಯಾ ಎಂಬುದು ಚಿನ್ನದ ಮೊಟ್ಟೆ ಇಡುವ ಕೋಳಿಯಂತಾಗಿದೆ. ಎಲ್ಲರೂ ಪ್ಯಾನ್ ಇಂಡಿಯಾ ಮೇಲೆ ಬಿದ್ದಿರುವ ಸಂದರ್ಭದಲ್ಲಿ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಮಾತ್ರ ಒಂದು ಹೆಜ್ಜೆ ಮುಂದೆ ಹೋಗಿ ಪ್ಯಾನ್ ವರ್ಲ್ಡ್ ಯೋಚನೆ ಮಾಡಿದೆ. ಕೆಲವೇ ದಿನಗಳಲ್ಲಿ ವಿದೇಶಿ ಮಾಧ್ಯಮಗಳನ್ನು ಒಟ್ಟು ಸೇರಿಸಿ ಅಂತರಾಷ್ಟ್ರೀಯ ಮಟ್ಟದ ಸುದ್ದಿಗೋಷ್ಠಿಯನ್ನು ಮಾಡಲಾಗಿದೆ. ಆದರೆ ‘ಮಾರ್ಟಿನ್’ ಅನ್ನು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಬೇಕು ಎಂಬ ಆಲೋಚನೆ ಹುಟ್ಟಿದ್ದು ಏಕೆ ಮತ್ತು ಅದಕ್ಕೆ ಕಾರಣ ಯಾರು?

ಟಿವಿ9ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಧ್ರುವ ಸರ್ಜಾ, ‘ನಾವು ಟೀಸರ್ ಬಿಡುಗಡೆ ಮಾಡಿದಾಗ ಚೀನಾದ ಏಜೆನ್ಸಿಯವರೊಬ್ಬರು ನಮ್ಮನ್ನು ಸಂಪರ್ಕ ಮಾಡಿದ್ದರು. ಈ ಸಿನಿಮಾ ನಮಗೆ ಕೊಡಿ ಸಿನಿಮಾವನ್ನು ನಾವು ಚೈನೀಸ್ ಭಾಷೆಗೆ ಡಬ್ ಮಾಡಿ ಬಿಡುಗಡೆ ಮಾಡುತ್ತೇವೆ ಎಂದಿದ್ದರು. ಆಗ ನಾವು ಸರಿ ನೋಡೋಣ ಇನ್ನೂ ಸಮಯ ಇದೆ ಎಂದುಕೊಂಡಿದ್ದೆವು’ ಎಂದಿದ್ದಾರೆ ಧ್ರುವ ಸರ್ಜಾ.

ಇದನ್ನೂ ಓದಿ:ಮುಂಬೈನಲ್ಲಿ ‘ಮಾರ್ಟಿನ್’ ಟ್ರೇಲರ್ ಲಾಂಚ್; ಇದು ಸಾಮಾನ್ಯ ಕಾರ್ಯಕ್ರಮ ಅಲ್ಲ

ಆದರೆ ಮುಂದೆ ನಮ್ಮ ಟೀಂಗೆ ರವಿ ಬಸ್ರೂರು ಸೇರ್ಪಡೆ ಆದರು. ಅವರು ಸಿನಿಮಾ ನೋಡಿ, ‘ಏನ್ರಿ ಇದು ಇಂಟರ್ನ್ಯಾಷನಲ್ ಲೆವೆಲ್ ಅಲ್ಲಿದೆ ಸಿನಿಮಾ’ ಅಂದರು. ಅದು ನಮ್ಮ ಮನಸ್ಸಿನಲ್ಲಿ ಸೇರಿಕೊಂಡಿತು. ಹಾಗೆಯೇ ಮುಂದೆ ಹೋದಂತೆ ಸಿನಿಮಾದ ಡಬ್ಬಿಂಗ್ ರೈಟ್ಸ್​ಗೆ ಬೇಡಿಕೆ ಹೆಚ್ಚಾಗುತ್ತಾ ಆಗುತ್ತಾ ನಾವೇ ಏಕೆ ಇದನ್ನು ಪ್ಯಾನ್ ವರ್ಲ್ಡ್​ ಲೆವೆಲ್​ನಲ್ಲಿ ಬಿಡುಗಡೆ ಮಾಡಬಾರದು ಎಂಬ ಆಲೋಚನೆ ಮೂಡಿತು, ನಮ್ಮ ನಿರ್ಮಾಪಕರು ಡಬ್ಬಿಂಗ್​ಗೆ ವ್ಯವಸ್ಥೆ ಮಾಡಿಸಿದರು. ಆ ಕೆಲಸ ಬಹಳ ಬೇಗ ಮುಗಿದುಬಿಟ್ಟಿತು’ ಎಂದಿದ್ದಾರೆ ಧ್ರುವ.

ನಮ್ಮ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಜೊತೆಗೆ ಬೆಂಗಾಲಿಯಲ್ಲಿಯೂ ಬಿಡುಗಡೆ ಆಗಲಿದೆ. ಇದರ ಜೊತೆಗೆ ಚೀನಾ, ರಷಿಯನ್, ಇಂಗ್ಲೀಷ್, ಕೊರಿಯನ್ ಭಾಷೆಗಳಿಗೂ ಡಬ್ ಮಾಡಿ ಬಿಡುಗಡೆ ಮಾಡಲಿದ್ದೇವೆ. ಆಗಸ್ಟ್ 5 ರಂದು ನಡೆಯಲಿರುವ ಸುದ್ದಿಗೋಷ್ಠಿಯಲ್ಲಿ ಬಿಬಿಸಿ ಪತ್ರಕರ್ತರು, ಕೊರಿಯನ್ನರು, ಚೈನೀಸ್, ಇನ್ನೂ ಒಟ್ಟು 25 ಅಂತರಾಷ್ಟ್ರೀಯ ಮಾಧ್ಯಮದ ಪತ್ರಕರ್ತರು ಭಾಗವಹಿಸಲಿದ್ದಾರೆ. ಅದೇ ದಿನ ಸಿನಿಮಾದ ಟ್ರೈಲರ್ ಸಹ ಬಿಡುಗಡೆ ಆಗಲಿದೆ. ಇನ್ನು ಮಾರ್ಟಿನ್ ಸಿನಿಮಾ ಅಕ್ಟೋಬರ್ 11 ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು