AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ್ ಸಮಾಧಿ ನೆಲಸಮ: ಧ್ರುವ ಸರ್ಜಾ ಹೇಳಿದ್ದೇನು?

Dhruva Sarja: ಹಿರಿಯ ನಟ ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮಗೊಳಿಸಲಾಗಿದೆ. ಇದು ವಿಷ್ಣುವರ್ಧನ್ ಅಭಿಮಾನಿಗಳಿಗೆ ತೀವ್ರ ಆಕ್ರೋಶ ತಂದಿದೆ. ಆದರೆ ಅಭಿಮಾನಿಗಳು ಏನೂ ಮಾಡಲಾಗದ ಸ್ಥಿತಿಯಲ್ಲಿದ್ದಾರೆ. ವಿಷ್ಣು ಸಮಾಧಿ ಧ್ವಂಸದ ಬಗ್ಗೆ ಕೆಲ ಸಿನಿಮಾ ಸೆಲೆಬ್ರಿಟಿಗಳು ಮಾತನಾಡಿದ್ದು, ಇದೀಗ ನಟ ಧ್ರುವ ಸರ್ಜಾ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ವಿಷ್ಣುವರ್ಧನ್ ಸಮಾಧಿ ನೆಲಸಮ: ಧ್ರುವ ಸರ್ಜಾ ಹೇಳಿದ್ದೇನು?
Dhruva Sarja
ಮಂಜುನಾಥ ಸಿ.
|

Updated on: Aug 09, 2025 | 4:27 PM

Share

ಅಭಿಮಾನಿ ಸ್ಟುಡಿಯೋನಲ್ಲಿದ್ದ ವಿಷ್ಣುವರ್ಧನ್ (Vishnuvardhan) ಸಮಾಧಿಯನ್ನು ನೆಲಸಮ ಮಾಡಿದ್ದಾರೆ. ಈ ಘಟನೆಯನ್ನು ವಿಷ್ಣುವರ್ಧನ್ ಅಭಿಮಾನಿಗಳು ತೀವ್ರವಾಗಿ ಖಂಡಿಸಿದ್ದು ಪ್ರತಿಭಟನೆ ಸಹ ನಡೆದಿವೆ. ಆದರೆ ಮೊದಲಿನಿಂದಲೂ ವಿಷ್ಣುವರ್ಧನ್ ಸಮಾಧಿ ವಿವಾದದಲ್ಲಿಯೇ ಇದೆ. ಇದೀಗ ನ್ಯಾಯಾಲಯದ ಒಪ್ಪಿಗೆ ಮೇರೆಗೆ ಬಾಲಣ್ಣ ಕುಟುಂಬದವರು ವಿಷ್ಣುವರ್ಧನ್ ಸಮಾಧಿಯನ್ನು ನೆಲಸಮಗೊಳಿಸಿದ್ದಾರೆ. ಈ ವಿಷಾಧನೀಯ ಘಟನೆ ಕುರಿತಂತೆ ನಟ ಧ್ರುವ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ಸಾಧಕನಿಗೂ ಸಾವಿಲ್ಲ, ಕಲೆಗೂ ಸಾವಿಲ್ಲ. ವಿಷ್ಣು ಅಪ್ಪಾಜಿ ಸದಾ ಅಜರಾಮರ. ಕೋಟ್ಯಂತರ ಕನ್ನಡಿಗರ ಹೃದಯದಲ್ಲಿ ಗುಡಿ ಕಟ್ಟಿರುವ ವ್ಯಕ್ತಿಗೆ ಸ್ಮಾರಕ ಏಕೆ ಬೇಕು? ಆದರೂ ಸಹ ಈ ನಾಡಿನಲ್ಲಿ ಇಂಥಹಾ ಒಬ್ಬ ಕಲಾವಿದನಿಗೆ ಹೀಗೆ ಆಗಿದ್ದು ಖಂಡಿತ ಮನಸ್ಸಿಗೆ ನೋವುಂಟು ಮಾಡಿದೆ. ಕೇಳಲು ಸಾಕಷ್ಟು ಪ್ರಶ್ನೆಗಳಿವೆ. ಆದರೆ ಇದಕ್ಕೆಲ್ಲ ಉತ್ತರ, ನಾನು ಒಬ್ಬ ಕನ್ನಡಿಗನಾಗಿ, ಒಬ್ಬ ಕಲಾವಿದನಾಗಿ, ಈ ಒಂದು ಸಂದರ್ಭದಲ್ಲಿ ನಾನು ವಿಷ್ಣುವರ್ಧನ್ ಅವರ ಅಭಿಮಾನಿಗಳ ಜೊತೆಗೆ ನಿಂತಿದ್ದೇನೆ. ನಿಮ್ಮ ಮುಂದಿನ ನಡೆಗಾಗಿ ಕಾಯುತ್ತಿದ್ದೇನೆ’ ಎಂದು ಧ್ರುವ ಸರ್ಜಾ ಸಂದೇಶ ಹಂಚಿಕೊಂಡಿದ್ದಾರೆ.

ವಿಷ್ಣುವರ್ಧನ್ ಅವರ ಜೊತೆಗೆ ಅರ್ಜುನ್ ಸರ್ಜಾ ಮತ್ತು ಚಿರಂಜೀವಿ ಸರ್ಜಾ ಅವರು ಒಟ್ಟಿಗೆ ನಿಂತಿರುವ ಚಿತ್ರವೊಂದನ್ನು ಧ್ರುವ ಸರ್ಜಾ ಹಂಚಿಕೊಂಡಿದ್ದಾರೆ. ವಿಷ್ಣುವರ್ಧನ್ ಅವರ ಅಭಿಮಾನಿಗಳು ಮುಂದೆ ಯಾವ ಹೆಜ್ಜೆ ಇಡಲಿದ್ದಾರೆಯೋ ಅದಕ್ಕೆ ತಮ್ಮ ಬೆಂಬಲ ಇದೆಯೆಂದು ಧ್ರುವ ಸರ್ಜಾ ಹೇಳಿದ್ದಾರೆ. ಆ ಮೂಲಕ ವಿಷ್ಣುವರ್ಧನ್ ಅಭಿಮಾನಿಗಳಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಈ ಪ್ರಕರಣದಲ್ಲಿ ಈಗಾಗಲೇ ನ್ಯಾಯಾಲಯ ಸ್ಪಷ್ಟ ತೀರ್ಪು ನೀಡಿದ್ದು, ಅಭಿಮಾನ್ ಸ್ಟುಡಿಯೋ ಬಹುತೇಕ ಕೈಜಾರಿ ಹೋಗಿದ್ದಾಗಿದೆ.

ಇದನ್ನೂ ಓದಿ:ಅದೇ ಜಾಗದಲ್ಲಿ ವಿಷ್ಣುವರ್ಧನ್ ಪುಣ್ಯಭೂಮಿ ಆಗಬೇಕು: ಫ್ಯಾನ್ಸ್ ಪ್ರತಿಭಟನೆ

ಇನ್ನು ಧ್ರುವ ಸರ್ಜಾ ವಿರುದ್ಧ ಇಂದಷ್ಟೆ ಆರೋಪವೊಂದು ಕೇಳಿ ಬಂದಿದೆ. ಯುವ ನಿರ್ಮಾಪಕರೊಬ್ಬರು, ಧ್ರುವ ಸರ್ಜಾ ತಮಗೆ ಮೂರು ಕೋಟಿ ರೂಪಾಯಿ ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಮುಂಬೈನ ಅಂಬೋಲಿ ಠಾಣೆಯಲ್ಲಿ ಧ್ರುವ ಸರ್ಜಾ ವಿರುದ್ಧ ದೂರು ದಾಖಲಾಗಿದ್ದು, 3 ಕೋಟಿಗೆ ಬಡ್ಡಿ ಹಣ ಸೇರಿಸಿ 9 ಕೋಟಿ ಹಣವನ್ನು ಧ್ರುವ ಸರ್ಜಾ ಮರಳಿ ನೀಡಬೇಕು ಎಂಬುದು ನಿರ್ಮಾಪಕನ ಒತ್ತಾಯವಾಗಿದೆ. ಆದರೆ ಧ್ರುವ ಸರ್ಜಾ ಇದನ್ನು ಸಂಪೂರ್ಣವಾಗಿ ಅಲ್ಲಗಳೆದಿದ್ದು, ಪ್ರಕರಣ ನ್ಯಾಯಾಲಯದಲ್ಲಿ ಇತ್ಯರ್ಥವಾಗಲಿ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ