AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ್ ಸಮಾಧಿ ನೆಲಸಮ: ಧ್ರುವ ಸರ್ಜಾ ಹೇಳಿದ್ದೇನು?

Dhruva Sarja: ಹಿರಿಯ ನಟ ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮಗೊಳಿಸಲಾಗಿದೆ. ಇದು ವಿಷ್ಣುವರ್ಧನ್ ಅಭಿಮಾನಿಗಳಿಗೆ ತೀವ್ರ ಆಕ್ರೋಶ ತಂದಿದೆ. ಆದರೆ ಅಭಿಮಾನಿಗಳು ಏನೂ ಮಾಡಲಾಗದ ಸ್ಥಿತಿಯಲ್ಲಿದ್ದಾರೆ. ವಿಷ್ಣು ಸಮಾಧಿ ಧ್ವಂಸದ ಬಗ್ಗೆ ಕೆಲ ಸಿನಿಮಾ ಸೆಲೆಬ್ರಿಟಿಗಳು ಮಾತನಾಡಿದ್ದು, ಇದೀಗ ನಟ ಧ್ರುವ ಸರ್ಜಾ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ವಿಷ್ಣುವರ್ಧನ್ ಸಮಾಧಿ ನೆಲಸಮ: ಧ್ರುವ ಸರ್ಜಾ ಹೇಳಿದ್ದೇನು?
Dhruva Sarja
ಮಂಜುನಾಥ ಸಿ.
|

Updated on: Aug 09, 2025 | 4:27 PM

Share

ಅಭಿಮಾನಿ ಸ್ಟುಡಿಯೋನಲ್ಲಿದ್ದ ವಿಷ್ಣುವರ್ಧನ್ (Vishnuvardhan) ಸಮಾಧಿಯನ್ನು ನೆಲಸಮ ಮಾಡಿದ್ದಾರೆ. ಈ ಘಟನೆಯನ್ನು ವಿಷ್ಣುವರ್ಧನ್ ಅಭಿಮಾನಿಗಳು ತೀವ್ರವಾಗಿ ಖಂಡಿಸಿದ್ದು ಪ್ರತಿಭಟನೆ ಸಹ ನಡೆದಿವೆ. ಆದರೆ ಮೊದಲಿನಿಂದಲೂ ವಿಷ್ಣುವರ್ಧನ್ ಸಮಾಧಿ ವಿವಾದದಲ್ಲಿಯೇ ಇದೆ. ಇದೀಗ ನ್ಯಾಯಾಲಯದ ಒಪ್ಪಿಗೆ ಮೇರೆಗೆ ಬಾಲಣ್ಣ ಕುಟುಂಬದವರು ವಿಷ್ಣುವರ್ಧನ್ ಸಮಾಧಿಯನ್ನು ನೆಲಸಮಗೊಳಿಸಿದ್ದಾರೆ. ಈ ವಿಷಾಧನೀಯ ಘಟನೆ ಕುರಿತಂತೆ ನಟ ಧ್ರುವ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ಸಾಧಕನಿಗೂ ಸಾವಿಲ್ಲ, ಕಲೆಗೂ ಸಾವಿಲ್ಲ. ವಿಷ್ಣು ಅಪ್ಪಾಜಿ ಸದಾ ಅಜರಾಮರ. ಕೋಟ್ಯಂತರ ಕನ್ನಡಿಗರ ಹೃದಯದಲ್ಲಿ ಗುಡಿ ಕಟ್ಟಿರುವ ವ್ಯಕ್ತಿಗೆ ಸ್ಮಾರಕ ಏಕೆ ಬೇಕು? ಆದರೂ ಸಹ ಈ ನಾಡಿನಲ್ಲಿ ಇಂಥಹಾ ಒಬ್ಬ ಕಲಾವಿದನಿಗೆ ಹೀಗೆ ಆಗಿದ್ದು ಖಂಡಿತ ಮನಸ್ಸಿಗೆ ನೋವುಂಟು ಮಾಡಿದೆ. ಕೇಳಲು ಸಾಕಷ್ಟು ಪ್ರಶ್ನೆಗಳಿವೆ. ಆದರೆ ಇದಕ್ಕೆಲ್ಲ ಉತ್ತರ, ನಾನು ಒಬ್ಬ ಕನ್ನಡಿಗನಾಗಿ, ಒಬ್ಬ ಕಲಾವಿದನಾಗಿ, ಈ ಒಂದು ಸಂದರ್ಭದಲ್ಲಿ ನಾನು ವಿಷ್ಣುವರ್ಧನ್ ಅವರ ಅಭಿಮಾನಿಗಳ ಜೊತೆಗೆ ನಿಂತಿದ್ದೇನೆ. ನಿಮ್ಮ ಮುಂದಿನ ನಡೆಗಾಗಿ ಕಾಯುತ್ತಿದ್ದೇನೆ’ ಎಂದು ಧ್ರುವ ಸರ್ಜಾ ಸಂದೇಶ ಹಂಚಿಕೊಂಡಿದ್ದಾರೆ.

ವಿಷ್ಣುವರ್ಧನ್ ಅವರ ಜೊತೆಗೆ ಅರ್ಜುನ್ ಸರ್ಜಾ ಮತ್ತು ಚಿರಂಜೀವಿ ಸರ್ಜಾ ಅವರು ಒಟ್ಟಿಗೆ ನಿಂತಿರುವ ಚಿತ್ರವೊಂದನ್ನು ಧ್ರುವ ಸರ್ಜಾ ಹಂಚಿಕೊಂಡಿದ್ದಾರೆ. ವಿಷ್ಣುವರ್ಧನ್ ಅವರ ಅಭಿಮಾನಿಗಳು ಮುಂದೆ ಯಾವ ಹೆಜ್ಜೆ ಇಡಲಿದ್ದಾರೆಯೋ ಅದಕ್ಕೆ ತಮ್ಮ ಬೆಂಬಲ ಇದೆಯೆಂದು ಧ್ರುವ ಸರ್ಜಾ ಹೇಳಿದ್ದಾರೆ. ಆ ಮೂಲಕ ವಿಷ್ಣುವರ್ಧನ್ ಅಭಿಮಾನಿಗಳಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಈ ಪ್ರಕರಣದಲ್ಲಿ ಈಗಾಗಲೇ ನ್ಯಾಯಾಲಯ ಸ್ಪಷ್ಟ ತೀರ್ಪು ನೀಡಿದ್ದು, ಅಭಿಮಾನ್ ಸ್ಟುಡಿಯೋ ಬಹುತೇಕ ಕೈಜಾರಿ ಹೋಗಿದ್ದಾಗಿದೆ.

ಇದನ್ನೂ ಓದಿ:ಅದೇ ಜಾಗದಲ್ಲಿ ವಿಷ್ಣುವರ್ಧನ್ ಪುಣ್ಯಭೂಮಿ ಆಗಬೇಕು: ಫ್ಯಾನ್ಸ್ ಪ್ರತಿಭಟನೆ

ಇನ್ನು ಧ್ರುವ ಸರ್ಜಾ ವಿರುದ್ಧ ಇಂದಷ್ಟೆ ಆರೋಪವೊಂದು ಕೇಳಿ ಬಂದಿದೆ. ಯುವ ನಿರ್ಮಾಪಕರೊಬ್ಬರು, ಧ್ರುವ ಸರ್ಜಾ ತಮಗೆ ಮೂರು ಕೋಟಿ ರೂಪಾಯಿ ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಮುಂಬೈನ ಅಂಬೋಲಿ ಠಾಣೆಯಲ್ಲಿ ಧ್ರುವ ಸರ್ಜಾ ವಿರುದ್ಧ ದೂರು ದಾಖಲಾಗಿದ್ದು, 3 ಕೋಟಿಗೆ ಬಡ್ಡಿ ಹಣ ಸೇರಿಸಿ 9 ಕೋಟಿ ಹಣವನ್ನು ಧ್ರುವ ಸರ್ಜಾ ಮರಳಿ ನೀಡಬೇಕು ಎಂಬುದು ನಿರ್ಮಾಪಕನ ಒತ್ತಾಯವಾಗಿದೆ. ಆದರೆ ಧ್ರುವ ಸರ್ಜಾ ಇದನ್ನು ಸಂಪೂರ್ಣವಾಗಿ ಅಲ್ಲಗಳೆದಿದ್ದು, ಪ್ರಕರಣ ನ್ಯಾಯಾಲಯದಲ್ಲಿ ಇತ್ಯರ್ಥವಾಗಲಿ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ